Homeಮುಖಪುಟ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

- Advertisement -
- Advertisement -

ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ. “ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು” ಎಂದು ಪ್ರೇಕ್ಷಕರನ್ನು ಉದ್ದೇಶಿಸಿ ಪಟೇರಿಯಾ ಮಾತನಾಡಿರುವುದು ವಿವಾದದ ಕೇಂದ್ರಬಿಂದುವಾಗಿದೆ.

ಪಟೇರಿಯಾ ತಕ್ಷಣವೇ ಸ್ಪಷ್ಟನೆ ನೀಡಿದ್ದಾರೆ. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ” ಎಂದಿದ್ದಾರೆ. ಈ ಹೇಳಿಕೆಗೆ ಹಲವಾರು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು ಪಟೇರಿಯಾ ಅವರ ಬಂಧನಕ್ಕೆ ಆಗ್ರಹಿಸಿದ್ದಾರೆ. “ಕಾಂಗ್ರೆಸ್‌ನ ನೈಜ ಮುಖ ಬಹಿರಂಗಗೊಂಡಿದೆ” ಎಂದು ಬಿಜೆಪಿ ಟೀಕಿಸಿದೆ.

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವರು, ರಾಜಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಕೇಂದ್ರ ಸಚಿವರೊಬ್ಬರು ಇದನ್ನು ‘ಕ್ಷಮಿಸಲಾಗದ ಅಪರಾಧ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಡಿಯೋ ಹೇಳಿಕೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ತಿಳಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಈ ವಿಡಿಯೋ ಪನ್ನಾ ಜಿಲ್ಲೆಯ ಪಾವಾಯಿ ಪಟ್ಟಣದಲ್ಲಿ ವರದಿಯಾಗಿದೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವರಾಜ್ ಸಿಂಗ್ ಚೌಹಾಣ್, “ಕಾಂಗ್ರೆಸ್‌ನ ನೈಜ ಭಾವನೆಗಳು ಬಹಿರಂಗವಾಗಿವೆ” ಎಂದು ಆರೋಪಿಸಿದ್ದಾರೆ.

“ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಎಂಥ ವ್ಯಕ್ತಿಯೇ ಆಗಿರಲಿ…. ಮೋದಿಯ ಆಡಳಿತ ನನಗೂ ಆಗಲ್ಲ ….. ಆದರೆ ಕೊಲ್ಲಿ ರಿ …. ಎಂಬ ಪದ ಉಪಯೋಗಿಸುವುದು ಯಾವ ನಿಗೂ ಅಧಿಕಾರ ಇಲ್ಲ…..

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...