Homeಕರೋನಾ ತಲ್ಲಣಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

ಕೇಂದ್ರದ ಲಸಿಕಾ ನೀತಿಯ ವಿರುದ್ಧ ಶಶಿ ತರೂರ್‌ ಅಸಮಾಧಾನ. ಭಾರತೀಯರೆಲ್ಲರಿಗೂ ಉಚಿತ ಲಸಿಕೆ ನೀಡಲು ಆಗ್ರಹ

- Advertisement -
- Advertisement -

ಕೋರೋನಾ ಸಾಂಕ್ರಾಮಿಕಕ್ಕೆ ತುತ್ತಾಗಿರುವ ಸಂಸದ ಮತ್ತು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಆಸ್ಪತ್ರೆಯ ಬೆಡ್‌ ನಿಂದಲೇ ಕೇಂದ್ರ ಸರ್ಕಾರದ ಅಸಮರ್ಪಕ ವ್ಯಾಕ್ಸೀನ್‌ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ದೇಶದ ಎಲ್ಲರಿಗೂ ಕೇಂದ್ರ ಸರ್ಕಾರ ಉಚಿತ ವ್ಯಾಕ್ಸೀನ್‌ ನೀಡಲು ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಶಶಿ ತರೂರ್‌ ಈ ಸಂಬಂಧ ಆಸ್ಪತ್ರೆಯ ಬೆಡ್‌ ನಿಂದಲೇ ವಿಡಿಯೋ ಒಂದನ್ನು ಮಾಡಿದ್ದು ಆ ವಿಡಿಯೋದಲ್ಲಿ “ಕೇಂದ್ರ ಸರ್ಕಾರದ ವ್ಯಾಕ್ಸೀನ್‌ ನೀತಿ ಅಸಮರ್ಪಕವಾಗಿದೆ. ಕೇಂದ್ರ ಸರ್ಕಾರ ತನ್ನ ಭರವಸೆಯಂತೆ 2021 ರ ಡಿಸೆಂಬರ್‌ ಅಂತ್ಯದ ವೇಳೆಗೆ ಪ್ರತಿಯೊಬ್ಬರಿಗೂ ವ್ಯಾಕ್ಸೀನ್‌ ನೀಡಲು ಮುಂದಾಗಬೇಕು. ದೇಶದ ಪ್ರತಿಯೊಬ್ಬರಿಗೂ ಉಚಿತವಾಗಿ ವ್ಯಾಕ್ಸೀನ್‌ ಸಿಗುವಂತಾಗಬೇಕು. ಈ ಸಂಬಂಧ ಸೇವ್‌ ಇಂಡಿಯಾ ಕ್ಯಾಂಪೇನ್‌ ಮಾಡುತ್ತಿದ್ದು ಆಂದೋಲನದಲ್ಲಿ ಈ ಮೂಲಕ ತಾವು ಭಾಗಿಯಾಗುವುದಾಗಿ” ಹೇಳಿದ್ದಾರೆ.

ಈಗ ದೇಶದಲ್ಲಿ ಉತ್ಪಾದನೆಯಾಗುತ್ತಿರುವ ವ್ಯಾಕ್ಸೀನ್‌ ಪ್ರಮಾಣದಿಂದ ಡಿಸೆಂಬರ್‌ ವೇಳೆಗೆ ಪ್ರತಿಯೊಬ್ಬರಿಗೂ ವ್ಯಾಕ್ಸೀನ್‌ ಸೌಲಭ್ಯವನ್ನು ನೀಡಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರ ಸರ್ಕಾರ 2021 ರ ಜನವರಿಯಲ್ಲಿ ತನ್ನ ವ್ಯಾಕ್ಸಿನೇಶನ್‌ ಅಭಿಯಾನವನ್ನು ಆರಂಭಿಸುವಾಗ ಎಲ್ಲರಿಗೂ ಕೇಂದ್ರವೇ ವ್ಯಾಕ್ಸೀನ್‌ ನೀಡುವುದಾಗಿ ಭರವಸೆ ನೀಡಿತ್ತು. ಈಗ ಅರ್ಧದಷ್ಟು ವ್ಯಾಕ್ಸಿನ್‌ ಉತ್ಪಾದನೆಯನ್ನು ಸಬ್ಸಿಡಿ ಬೆಲೆಯಲ್ಲಿ ತಾನು ಖರೀದಿಸಿ ಉಳಿದದ್ದನ್ನು ರಾಜ್ಯಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಬಿಟ್ಟುಕೊಟ್ಟಿದೆ. ಮುಕ್ತ ಮಾರುಕಟ್ಟೆಯಲ್ಲಿ ರಾಜ್ಯ ಸರ್ಕಾರಗಳು ಮತ್ತು ಖಾಸಗಿ ಸಂಸ್ಥೆಗಳು ವ್ಯಾಕ್ಸೀನ್‌ ಗಾಗಿ ಪೈಪೋಟಿ ನಡೆಸುವಂತಾಗಿದೆ. ಇದರಿಂದ ದೇಶದೆಲ್ಲೆಡೆ ವ್ಯಾಕ್ಸೀನ್‌ ಗೆ ಕತಕ ಅಭಾವ ಸೃಷ್ಟಿಯಾಗಿದ್ದು ಖಾಸಗಿ ವಲಯವು ದೇಶದ ಉತ್ಪಾದನೆಯ ಬಹುಪಾಲು ವ್ಯಾಕ್ಸೀನ್‌ ಗಳನ್ನು ಖರೀದಿಸಿ ದುಬಾರಿ ಬೆಲೆಗೆ ಮಾರಿಕೊಳ್ಳಲು ಕೇಂದ್ರವೇ ಅವಕಾಶ ಮಾಡಿಕೊಟ್ಟಿದೆ ಎಂದು ಶಶಿ ತರೂರ್‌ ಕೇಂದ್ರ ಸರ್ಕಾರದ ವ್ಯಾಕ್ಸೀನ್‌ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರವು ತನ್ನ ಈ ಅಸಮರ್ಪಕ ವ್ಯಾಕ್ಸೀನ್‌ ನೀತಿಯನ್ನು ಹಿಂಪಡೆದು ದೇಶದ ಎಲ್ಲರಿಗೂ ವ್ಯಾಕ್ಸೀನ್‌ ನೀಡುವ ತನ್ನ ಭರವಸೆಗೆ ಬದ್ಧವಾಗಬೇಕು ಎಂದು ಶಶಿ ತರೂರ್‌ ಆಗ್ರಹಿಸಿದ್ದಾರೆ.

ಕಳೆದ ಕೆಲದಿನಗಳಿಂದ ಕೋವಿಡ್‌ ಸೋಂಕಿನಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿರುವ ಶಶಿ ತರೂರ್‌ ಸದ್ಯ ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿದ್ದು ದೇಶದ ಜನರು ತಾವು ಅನುಭವಿಸಿದ ಆರೋಗ್ಯ ಸಮಸ್ಯೆಯನ್ನು ಎದುರಿಸದಂತಾಗಬೇಕು ಎಂದು ಶಶಿ ತರೂರ್‌ ಹೇಳಿದ್ದಾರೆ.


ಇದನ್ನೂ ಓದಿ: ಬ್ರಿಟನ್‌ನಲ್ಲಿ ಕೊರೋನಾ ಇಳಿಮುಖ: ಜೂನ್ 1 ರಂದು ಶೂನ್ಯ ಸಾವಿನ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....