Homeಕರ್ನಾಟಕಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

"ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈಗ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ".

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಸ್ಥಗಿತಗೊಳಿಸಲು ಸರ್ಕಾರ ವ್ಯವಸ್ಥಿತವಾಗಿ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್‌ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು, ಹಸಿದವರ ಹಸಿವನ್ನು ನೀಗಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುವುದನ್ನು ನೋಡಿದರೆ ಬಡವರ ಪರ ಯಡಿಯೂರಪ್ಪರ ಕಾಳಜಿಯ ಕುರಿತು ಸಂದೇಹಗಳು ಹುಟ್ಟುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ದುಡಿಯುವ ಕಾರ್ಮಿಕರು , ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿತ್ತು . ಈ ಕ್ಯಾಂಟಿನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

’ಇಂದಿರಾ ಕ್ಯಾಂಟಿನ್‌ ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸರ್ಕಾರ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟಿನ್‌ಗಳಿಗೆ ಸುಮಾರು 28 ಕೋಟಿಗಳನ್ನು ಬಿಡುಗಡೆ ಮಾಡದೇ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

’198 ಕ್ಯಾಂಟಿನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನನ್ನು ಕೂಡ ಬಿಡಬ್ಲೂಎಸ್ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದ್ದು ಇವೆಲ್ಲ ಬಿಜೆಪಿ ಸರ್ಕಾರ ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಉದಾಹರಣೆಗಳಾಗಿವೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

ಇನ್ನು, ’ಇತ್ತೀಚೆಗೆ ಸರ್ಕಾರ ಹಲವು ರೀತಿಯ ದುಂದು ವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂಪಾಯಿ ಖರ್ಚು ಬರಬಹುದು. ಆದರೆ, ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲದ ಹಾಗೆ ನೋಡಿಕೊಳ್ಳಿ. ಹಸಿದವರ ಹಸಿವನ್ನು ನೀಗಿಸುವ ಕೆಲಸಕ್ಕೆ ಮುಖ್ಯಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...