Homeಕರ್ನಾಟಕಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

"ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈಗ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ".

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಸ್ಥಗಿತಗೊಳಿಸಲು ಸರ್ಕಾರ ವ್ಯವಸ್ಥಿತವಾಗಿ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್‌ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು, ಹಸಿದವರ ಹಸಿವನ್ನು ನೀಗಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುವುದನ್ನು ನೋಡಿದರೆ ಬಡವರ ಪರ ಯಡಿಯೂರಪ್ಪರ ಕಾಳಜಿಯ ಕುರಿತು ಸಂದೇಹಗಳು ಹುಟ್ಟುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ದುಡಿಯುವ ಕಾರ್ಮಿಕರು , ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿತ್ತು . ಈ ಕ್ಯಾಂಟಿನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

’ಇಂದಿರಾ ಕ್ಯಾಂಟಿನ್‌ ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸರ್ಕಾರ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟಿನ್‌ಗಳಿಗೆ ಸುಮಾರು 28 ಕೋಟಿಗಳನ್ನು ಬಿಡುಗಡೆ ಮಾಡದೇ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

’198 ಕ್ಯಾಂಟಿನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನನ್ನು ಕೂಡ ಬಿಡಬ್ಲೂಎಸ್ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದ್ದು ಇವೆಲ್ಲ ಬಿಜೆಪಿ ಸರ್ಕಾರ ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಉದಾಹರಣೆಗಳಾಗಿವೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

ಇನ್ನು, ’ಇತ್ತೀಚೆಗೆ ಸರ್ಕಾರ ಹಲವು ರೀತಿಯ ದುಂದು ವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂಪಾಯಿ ಖರ್ಚು ಬರಬಹುದು. ಆದರೆ, ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲದ ಹಾಗೆ ನೋಡಿಕೊಳ್ಳಿ. ಹಸಿದವರ ಹಸಿವನ್ನು ನೀಗಿಸುವ ಕೆಲಸಕ್ಕೆ ಮುಖ್ಯಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...