Homeಕರ್ನಾಟಕಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

"ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈಗ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ".

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಸ್ಥಗಿತಗೊಳಿಸಲು ಸರ್ಕಾರ ವ್ಯವಸ್ಥಿತವಾಗಿ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್‌ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು, ಹಸಿದವರ ಹಸಿವನ್ನು ನೀಗಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುವುದನ್ನು ನೋಡಿದರೆ ಬಡವರ ಪರ ಯಡಿಯೂರಪ್ಪರ ಕಾಳಜಿಯ ಕುರಿತು ಸಂದೇಹಗಳು ಹುಟ್ಟುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ದುಡಿಯುವ ಕಾರ್ಮಿಕರು , ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿತ್ತು . ಈ ಕ್ಯಾಂಟಿನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

’ಇಂದಿರಾ ಕ್ಯಾಂಟಿನ್‌ ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸರ್ಕಾರ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟಿನ್‌ಗಳಿಗೆ ಸುಮಾರು 28 ಕೋಟಿಗಳನ್ನು ಬಿಡುಗಡೆ ಮಾಡದೇ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

’198 ಕ್ಯಾಂಟಿನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನನ್ನು ಕೂಡ ಬಿಡಬ್ಲೂಎಸ್ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದ್ದು ಇವೆಲ್ಲ ಬಿಜೆಪಿ ಸರ್ಕಾರ ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಉದಾಹರಣೆಗಳಾಗಿವೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

ಇನ್ನು, ’ಇತ್ತೀಚೆಗೆ ಸರ್ಕಾರ ಹಲವು ರೀತಿಯ ದುಂದು ವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂಪಾಯಿ ಖರ್ಚು ಬರಬಹುದು. ಆದರೆ, ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲದ ಹಾಗೆ ನೋಡಿಕೊಳ್ಳಿ. ಹಸಿದವರ ಹಸಿವನ್ನು ನೀಗಿಸುವ ಕೆಲಸಕ್ಕೆ ಮುಖ್ಯಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...