Homeಕರ್ನಾಟಕಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

"ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈಗ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ".

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಸ್ಥಗಿತಗೊಳಿಸಲು ಸರ್ಕಾರ ವ್ಯವಸ್ಥಿತವಾಗಿ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್‌ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು, ಹಸಿದವರ ಹಸಿವನ್ನು ನೀಗಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುವುದನ್ನು ನೋಡಿದರೆ ಬಡವರ ಪರ ಯಡಿಯೂರಪ್ಪರ ಕಾಳಜಿಯ ಕುರಿತು ಸಂದೇಹಗಳು ಹುಟ್ಟುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ದುಡಿಯುವ ಕಾರ್ಮಿಕರು , ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿತ್ತು . ಈ ಕ್ಯಾಂಟಿನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

’ಇಂದಿರಾ ಕ್ಯಾಂಟಿನ್‌ ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸರ್ಕಾರ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟಿನ್‌ಗಳಿಗೆ ಸುಮಾರು 28 ಕೋಟಿಗಳನ್ನು ಬಿಡುಗಡೆ ಮಾಡದೇ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

’198 ಕ್ಯಾಂಟಿನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನನ್ನು ಕೂಡ ಬಿಡಬ್ಲೂಎಸ್ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದ್ದು ಇವೆಲ್ಲ ಬಿಜೆಪಿ ಸರ್ಕಾರ ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಉದಾಹರಣೆಗಳಾಗಿವೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

ಇನ್ನು, ’ಇತ್ತೀಚೆಗೆ ಸರ್ಕಾರ ಹಲವು ರೀತಿಯ ದುಂದು ವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂಪಾಯಿ ಖರ್ಚು ಬರಬಹುದು. ಆದರೆ, ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲದ ಹಾಗೆ ನೋಡಿಕೊಳ್ಳಿ. ಹಸಿದವರ ಹಸಿವನ್ನು ನೀಗಿಸುವ ಕೆಲಸಕ್ಕೆ ಮುಖ್ಯಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...