Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಅಮರ್ ಸೋನಾರ್ ಬಾಂಗ್ಲಾ' ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ...

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. ಬಿಜೆಪಿ ಬಂಗಾಳಿ ಸಂಸ್ಕೃತಿಯನ್ನು ಅವಮಾನಿಸಿದೆ ಎಂದು ಹೇಳಿದೆ.

ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ವಿಧುಭೂಷಣ್ ದಾಸ್ ಅವರು ‘ಅಮರ್ ಸೋನಾರ್ ಬಾಂಗ್ಲಾ’ದ ಎರಡು ಸಾಲುಗಳನ್ನು ಹಾಡಿದ್ದಾರೆ ಎನ್ನಲಾಗಿದೆ. ಈ ವಾರದ ಆರಂಭದಲ್ಲಿ ನಡೆದಿರುವ ಸಭೆಯ ವಿಡಿಯೋ ಈಗ ವೈರಲ್ ಆಗಿದ್ದು, ಬಿಜೆಪಿ ಅದನ್ನು ವಿವಾದಕ್ಕೆ ತಿರುಗಿಸಿದ ಬಳಿಕ ಸಿಎಂ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಾಂಗ್ರೆಸ್‌ನಿಂದ ಭಾರತ, ಭಾರತೀಯರಿಗೆ ಅವಮಾನ : ಸಿಎಂ ಶರ್ಮಾ

“ಎರಡು ದಿನಗಳ ಹಿಂದೆ ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾರತದ ರಾಷ್ಟ್ರಗೀತೆಯ ಬದಲಿಗೆ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಇದು ಭಾರತದ ಜನರಿಗೆ, ರಾಷ್ಟ್ರಗೀತೆಗೆ ಮಾಡಿದ ಅವಮಾನ. ಅಂತಿಮವಾಗಿ ಈಶಾನ್ಯ ಭಾರತವು ಬಾಂಗ್ಲಾದೇಶದ ಭಾಗವಾಗುತ್ತದೆ ಎಂಬ ಅಲ್ಲಿನ ನಾಯಕರ ಇತ್ತೀಚಿನ ಹೇಳಿಕೆಗೆ ಅನುಗುಣವಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ” ಎಂದು ಬುಧವಾರ ನಡೆದ ಸಂಪುಟ ಸಭೆಯ ನಂತರ ಸಿಎಂ ಶರ್ಮಾ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್, “ಬಿಜೆಪಿಯ ಆರೋಪಗಳು ರವೀಂದ್ರನಾಥ ಟ್ಯಾಗೋರ್ ಹಾಗೂ ಬಂಗಾಳಿ ಭಾವನೆಗಳು ಮತ್ತು ಸಂಸ್ಕೃತಿಯ’ ಕುರಿತು ಅವರ ಅಜ್ಞಾನವನ್ನು ಸೂಚಿಸುತ್ತದೆ” ಎಂದಿದ್ದಾರೆ.

“ಇದು ರವೀಂದ್ರನಾಥ ಟ್ಯಾಗೋರ್ ರಚಿಸಿದ ಹಾಡು. ಇದು ಬಂಗಾಳಿ ಸಂಸ್ಕೃತಿಯ ಭಾವನೆಗಳನ್ನು ತಿಳಿಸುವ ಹಾಡು. ಬಿಜೆಪಿ ಸದಾ ಬಂಗಾಳಿ ಭಾಷೆ, ಬಂಗಾಳಿ ಸಂಸ್ಕೃತಿ ಮತ್ತು ಬಂಗಾಳದ ಜನರನ್ನು ಅವಮಾನಿಸುತ್ತಾ ಬಂದಿದೆ. ಅವರು ತಮ್ಮ ಅಜ್ಞಾನವನ್ನು ತೋರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಅವರ ಇತಿಹಾಸ ಮತ್ತು ಅವರ ತತ್ವಶಾಸ್ತ್ರದ ಬಗ್ಗೆ ಬಿಜೆಪಿಗರಿಗೆ ತಿಳಿದಿಲ್ಲ. ಬಂಗಾಳದ ಜನರು ಮತ್ತು ಭಾರತದ ವಿವಿಧ ಭಾಗಗಳಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಮತಕ್ಕಾಗಿ ಮಾತ್ರ ಬಳಸುತ್ತದೆ. ಅವರ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯು ಹೆಚ್ಚಾಗಿ ಬಂಗಾಳಿ ಭಾಷೆ ಮಾತನಾಡುವ ಜನರಿರುವ ಬರಾಕ್ ಕಣಿವೆಯಲ್ಲಿದೆ. ಇದು ಬಾಂಗ್ಲಾದೇಶದ ಗಡಿ ಪ್ರದೇಶವಾಗಿದೆ. 1947ರ ದೇಶ ವಿಭಜನೆ ಈ ಪ್ರದೇಶದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

‘ಅಮರ್ ಸೋನಾರ್ ಬಾಂಗ್ಲಾ’ ಗೀತೆ

‘ಅಮರ್ ಸೋನಾರ್ ಬಾಂಗ್ಲಾ’ 1905ರಲ್ಲಿ ಬ್ರಿಟಿಷ್ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜನೆ ಮಾಡಿದ್ದನ್ನು ವಿರೋಧಿಸಿ ನಡೆದ ಸ್ವದೇಶಿ ಚಳವಳಿಯ ಸಮಯದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಹತ್ವದ ಗೀತೆಯಾಗಿದೆ.

ಲಾರ್ಡ್ ಕರ್ಜನ್ ಬಂಗಾಳವನ್ನು ಹಿಂದೂ ಬಹುಸಂಖ್ಯಾತ ಪಶ್ಚಿಮ ಮತ್ತು ಮುಸ್ಲಿಂ ಬಹುಸಂಖ್ಯಾತ ಪೂರ್ವ ಎಂದು ವಿಭಜಿಸಿದ್ದರು. ಇದನ್ನು ‘ಒಡೆದು ಆಳುವ’ ತಂತ್ರ ಎಂದು ವಿರೋಧಿಸಿ ಸ್ವದೇಶಿ ಚಳವಳಿ ಕಟ್ಟಲಾಗಿತ್ತು.

ಬಂಗಾಳದ ಏಕತೆ, ಹೆಮ್ಮೆ ಮತ್ತು ಪ್ರತಿರೋಧವನ್ನು ಪ್ರೇರೇಪಿಸಲು ಬರೆದ ಗೀತೆಯನ್ನು ಸೆಪ್ಟೆಂಬರ್ 1905 ರಲ್ಲಿ ಬಂಗಾಳಿ ಸಾಹಿತ್ಯ ಪತ್ರಿಕೆ ‘ಭಾರತಿ’ ಮೊದಲ ಬಾರಿಗೆ ಪ್ರಕಟಿಸಿತ್ತು. ಕಲ್ಕತ್ತಾದಲ್ಲಿ (ಕೋಲ್ಕತ್ತಾ) ನಡೆದ ಪ್ರತಿಭಟನಾ ಸಭೆಗಳಲ್ಲಿ ಈ ಗೀತೆಯನ್ನು ಹಾಡಲಾಗಿತ್ತು.

“ನಾನು ವಿಭಜನೆಯನ್ನು ಪ್ರತಿಭಟಿಸಲು ‘ಅಮರ್ ಸೋನಾರ್ ಬಾಂಗ್ಲಾ’ ಬರೆದೆ… ನಾನು ಬಂಗಾಳವನ್ನು ನನ್ನ ತಾಯಿಯಾಗಿ, ಚಿನ್ನವಾಗಿ ಮತ್ತು ಸುಂದರವಾಗಿ ನೋಡಿದೆ” ಎಂದು ಸ್ವತಃ ಟ್ಯಾಗೋರ್ ಅವರು ಈ ಗೀತೆ ಕುರಿತು ಹೇಳಿದ್ದರು.

ಬಂಗಾಳಿ ಸಾಂಸ್ಕೃತಿಕ ಗುರುತು ಮತ್ತು ವಸಾಹತುಶಾಹಿ ವಿರೋಧಿ ಪ್ರತಿರೋಧದ ಸಂಕೇತವಾದ ಈ ಗೀತೆಯನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಂಗಾಳದಾದ್ಯಂತ ಶಾಲೆಗಳು, ಪ್ರತಿಭಟನಾ ಸಭೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡಲಾಗಿತ್ತು.

ಬಾಂಗ್ಲಾದೇಶ ರಾಷ್ಟ್ರಗೀತೆ-1971

ಮಾರ್ಚ್–ಡಿಸೆಂಬರ್ 1971ರಲ್ಲಿ ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ‘ಬಾಂಗ್ಲಾದೇಶ ವಿಮೋಚನಾ’ ಹೋರಾಟ ನಡೆಯಿತು.

ಬಾಂಗ್ಲಾದೇಶ ಸ್ವತಂತ್ರ ರಾಷ್ಟ್ರವಾಗಿ ಪಾಕಿಸ್ತಾನದಿಂದ ವಿಮೋಚನೆಗೊಂಡ ಬಳಿಕ, ಅಂದರೆ 13 ಜನವರಿ 1972ರಲ್ಲಿ ಬಾಂಗ್ಲಾದೇಶದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಮೊದಲ ಬಾರಿಗೆ ಕೇಳಿಸಲಾಗಿತ್ತು. ಬಳಿಕ 1972ರಲ್ಲಿ ಗೀತೆಯ ಮೊದಲ ಹತ್ತು ಸಾಲುಗಳು ಅಧಿಕೃತವಾಗಿ ಬಾಂಗ್ಲಾದೇಶದ ರಾಷ್ಟ್ರಗೀತೆಯ ಭಾಗವಾದವು.

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...