Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಅಮರ್ ಸೋನಾರ್ ಬಾಂಗ್ಲಾ' ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ...

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. ಬಿಜೆಪಿ ಬಂಗಾಳಿ ಸಂಸ್ಕೃತಿಯನ್ನು ಅವಮಾನಿಸಿದೆ ಎಂದು ಹೇಳಿದೆ.

ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ವಿಧುಭೂಷಣ್ ದಾಸ್ ಅವರು ‘ಅಮರ್ ಸೋನಾರ್ ಬಾಂಗ್ಲಾ’ದ ಎರಡು ಸಾಲುಗಳನ್ನು ಹಾಡಿದ್ದಾರೆ ಎನ್ನಲಾಗಿದೆ. ಈ ವಾರದ ಆರಂಭದಲ್ಲಿ ನಡೆದಿರುವ ಸಭೆಯ ವಿಡಿಯೋ ಈಗ ವೈರಲ್ ಆಗಿದ್ದು, ಬಿಜೆಪಿ ಅದನ್ನು ವಿವಾದಕ್ಕೆ ತಿರುಗಿಸಿದ ಬಳಿಕ ಸಿಎಂ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಾಂಗ್ರೆಸ್‌ನಿಂದ ಭಾರತ, ಭಾರತೀಯರಿಗೆ ಅವಮಾನ : ಸಿಎಂ ಶರ್ಮಾ

“ಎರಡು ದಿನಗಳ ಹಿಂದೆ ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾರತದ ರಾಷ್ಟ್ರಗೀತೆಯ ಬದಲಿಗೆ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಇದು ಭಾರತದ ಜನರಿಗೆ, ರಾಷ್ಟ್ರಗೀತೆಗೆ ಮಾಡಿದ ಅವಮಾನ. ಅಂತಿಮವಾಗಿ ಈಶಾನ್ಯ ಭಾರತವು ಬಾಂಗ್ಲಾದೇಶದ ಭಾಗವಾಗುತ್ತದೆ ಎಂಬ ಅಲ್ಲಿನ ನಾಯಕರ ಇತ್ತೀಚಿನ ಹೇಳಿಕೆಗೆ ಅನುಗುಣವಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ” ಎಂದು ಬುಧವಾರ ನಡೆದ ಸಂಪುಟ ಸಭೆಯ ನಂತರ ಸಿಎಂ ಶರ್ಮಾ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್, “ಬಿಜೆಪಿಯ ಆರೋಪಗಳು ರವೀಂದ್ರನಾಥ ಟ್ಯಾಗೋರ್ ಹಾಗೂ ಬಂಗಾಳಿ ಭಾವನೆಗಳು ಮತ್ತು ಸಂಸ್ಕೃತಿಯ’ ಕುರಿತು ಅವರ ಅಜ್ಞಾನವನ್ನು ಸೂಚಿಸುತ್ತದೆ” ಎಂದಿದ್ದಾರೆ.

“ಇದು ರವೀಂದ್ರನಾಥ ಟ್ಯಾಗೋರ್ ರಚಿಸಿದ ಹಾಡು. ಇದು ಬಂಗಾಳಿ ಸಂಸ್ಕೃತಿಯ ಭಾವನೆಗಳನ್ನು ತಿಳಿಸುವ ಹಾಡು. ಬಿಜೆಪಿ ಸದಾ ಬಂಗಾಳಿ ಭಾಷೆ, ಬಂಗಾಳಿ ಸಂಸ್ಕೃತಿ ಮತ್ತು ಬಂಗಾಳದ ಜನರನ್ನು ಅವಮಾನಿಸುತ್ತಾ ಬಂದಿದೆ. ಅವರು ತಮ್ಮ ಅಜ್ಞಾನವನ್ನು ತೋರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಅವರ ಇತಿಹಾಸ ಮತ್ತು ಅವರ ತತ್ವಶಾಸ್ತ್ರದ ಬಗ್ಗೆ ಬಿಜೆಪಿಗರಿಗೆ ತಿಳಿದಿಲ್ಲ. ಬಂಗಾಳದ ಜನರು ಮತ್ತು ಭಾರತದ ವಿವಿಧ ಭಾಗಗಳಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಮತಕ್ಕಾಗಿ ಮಾತ್ರ ಬಳಸುತ್ತದೆ. ಅವರ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯು ಹೆಚ್ಚಾಗಿ ಬಂಗಾಳಿ ಭಾಷೆ ಮಾತನಾಡುವ ಜನರಿರುವ ಬರಾಕ್ ಕಣಿವೆಯಲ್ಲಿದೆ. ಇದು ಬಾಂಗ್ಲಾದೇಶದ ಗಡಿ ಪ್ರದೇಶವಾಗಿದೆ. 1947ರ ದೇಶ ವಿಭಜನೆ ಈ ಪ್ರದೇಶದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

‘ಅಮರ್ ಸೋನಾರ್ ಬಾಂಗ್ಲಾ’ ಗೀತೆ

‘ಅಮರ್ ಸೋನಾರ್ ಬಾಂಗ್ಲಾ’ 1905ರಲ್ಲಿ ಬ್ರಿಟಿಷ್ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜನೆ ಮಾಡಿದ್ದನ್ನು ವಿರೋಧಿಸಿ ನಡೆದ ಸ್ವದೇಶಿ ಚಳವಳಿಯ ಸಮಯದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಹತ್ವದ ಗೀತೆಯಾಗಿದೆ.

ಲಾರ್ಡ್ ಕರ್ಜನ್ ಬಂಗಾಳವನ್ನು ಹಿಂದೂ ಬಹುಸಂಖ್ಯಾತ ಪಶ್ಚಿಮ ಮತ್ತು ಮುಸ್ಲಿಂ ಬಹುಸಂಖ್ಯಾತ ಪೂರ್ವ ಎಂದು ವಿಭಜಿಸಿದ್ದರು. ಇದನ್ನು ‘ಒಡೆದು ಆಳುವ’ ತಂತ್ರ ಎಂದು ವಿರೋಧಿಸಿ ಸ್ವದೇಶಿ ಚಳವಳಿ ಕಟ್ಟಲಾಗಿತ್ತು.

ಬಂಗಾಳದ ಏಕತೆ, ಹೆಮ್ಮೆ ಮತ್ತು ಪ್ರತಿರೋಧವನ್ನು ಪ್ರೇರೇಪಿಸಲು ಬರೆದ ಗೀತೆಯನ್ನು ಸೆಪ್ಟೆಂಬರ್ 1905 ರಲ್ಲಿ ಬಂಗಾಳಿ ಸಾಹಿತ್ಯ ಪತ್ರಿಕೆ ‘ಭಾರತಿ’ ಮೊದಲ ಬಾರಿಗೆ ಪ್ರಕಟಿಸಿತ್ತು. ಕಲ್ಕತ್ತಾದಲ್ಲಿ (ಕೋಲ್ಕತ್ತಾ) ನಡೆದ ಪ್ರತಿಭಟನಾ ಸಭೆಗಳಲ್ಲಿ ಈ ಗೀತೆಯನ್ನು ಹಾಡಲಾಗಿತ್ತು.

“ನಾನು ವಿಭಜನೆಯನ್ನು ಪ್ರತಿಭಟಿಸಲು ‘ಅಮರ್ ಸೋನಾರ್ ಬಾಂಗ್ಲಾ’ ಬರೆದೆ… ನಾನು ಬಂಗಾಳವನ್ನು ನನ್ನ ತಾಯಿಯಾಗಿ, ಚಿನ್ನವಾಗಿ ಮತ್ತು ಸುಂದರವಾಗಿ ನೋಡಿದೆ” ಎಂದು ಸ್ವತಃ ಟ್ಯಾಗೋರ್ ಅವರು ಈ ಗೀತೆ ಕುರಿತು ಹೇಳಿದ್ದರು.

ಬಂಗಾಳಿ ಸಾಂಸ್ಕೃತಿಕ ಗುರುತು ಮತ್ತು ವಸಾಹತುಶಾಹಿ ವಿರೋಧಿ ಪ್ರತಿರೋಧದ ಸಂಕೇತವಾದ ಈ ಗೀತೆಯನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಂಗಾಳದಾದ್ಯಂತ ಶಾಲೆಗಳು, ಪ್ರತಿಭಟನಾ ಸಭೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡಲಾಗಿತ್ತು.

ಬಾಂಗ್ಲಾದೇಶ ರಾಷ್ಟ್ರಗೀತೆ-1971

ಮಾರ್ಚ್–ಡಿಸೆಂಬರ್ 1971ರಲ್ಲಿ ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ‘ಬಾಂಗ್ಲಾದೇಶ ವಿಮೋಚನಾ’ ಹೋರಾಟ ನಡೆಯಿತು.

ಬಾಂಗ್ಲಾದೇಶ ಸ್ವತಂತ್ರ ರಾಷ್ಟ್ರವಾಗಿ ಪಾಕಿಸ್ತಾನದಿಂದ ವಿಮೋಚನೆಗೊಂಡ ಬಳಿಕ, ಅಂದರೆ 13 ಜನವರಿ 1972ರಲ್ಲಿ ಬಾಂಗ್ಲಾದೇಶದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಮೊದಲ ಬಾರಿಗೆ ಕೇಳಿಸಲಾಗಿತ್ತು. ಬಳಿಕ 1972ರಲ್ಲಿ ಗೀತೆಯ ಮೊದಲ ಹತ್ತು ಸಾಲುಗಳು ಅಧಿಕೃತವಾಗಿ ಬಾಂಗ್ಲಾದೇಶದ ರಾಷ್ಟ್ರಗೀತೆಯ ಭಾಗವಾದವು.

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...