Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಅಮರ್ ಸೋನಾರ್ ಬಾಂಗ್ಲಾ' ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ...

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. ಬಿಜೆಪಿ ಬಂಗಾಳಿ ಸಂಸ್ಕೃತಿಯನ್ನು ಅವಮಾನಿಸಿದೆ ಎಂದು ಹೇಳಿದೆ.

ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ವಿಧುಭೂಷಣ್ ದಾಸ್ ಅವರು ‘ಅಮರ್ ಸೋನಾರ್ ಬಾಂಗ್ಲಾ’ದ ಎರಡು ಸಾಲುಗಳನ್ನು ಹಾಡಿದ್ದಾರೆ ಎನ್ನಲಾಗಿದೆ. ಈ ವಾರದ ಆರಂಭದಲ್ಲಿ ನಡೆದಿರುವ ಸಭೆಯ ವಿಡಿಯೋ ಈಗ ವೈರಲ್ ಆಗಿದ್ದು, ಬಿಜೆಪಿ ಅದನ್ನು ವಿವಾದಕ್ಕೆ ತಿರುಗಿಸಿದ ಬಳಿಕ ಸಿಎಂ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಾಂಗ್ರೆಸ್‌ನಿಂದ ಭಾರತ, ಭಾರತೀಯರಿಗೆ ಅವಮಾನ : ಸಿಎಂ ಶರ್ಮಾ

“ಎರಡು ದಿನಗಳ ಹಿಂದೆ ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾರತದ ರಾಷ್ಟ್ರಗೀತೆಯ ಬದಲಿಗೆ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಇದು ಭಾರತದ ಜನರಿಗೆ, ರಾಷ್ಟ್ರಗೀತೆಗೆ ಮಾಡಿದ ಅವಮಾನ. ಅಂತಿಮವಾಗಿ ಈಶಾನ್ಯ ಭಾರತವು ಬಾಂಗ್ಲಾದೇಶದ ಭಾಗವಾಗುತ್ತದೆ ಎಂಬ ಅಲ್ಲಿನ ನಾಯಕರ ಇತ್ತೀಚಿನ ಹೇಳಿಕೆಗೆ ಅನುಗುಣವಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ” ಎಂದು ಬುಧವಾರ ನಡೆದ ಸಂಪುಟ ಸಭೆಯ ನಂತರ ಸಿಎಂ ಶರ್ಮಾ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್, “ಬಿಜೆಪಿಯ ಆರೋಪಗಳು ರವೀಂದ್ರನಾಥ ಟ್ಯಾಗೋರ್ ಹಾಗೂ ಬಂಗಾಳಿ ಭಾವನೆಗಳು ಮತ್ತು ಸಂಸ್ಕೃತಿಯ’ ಕುರಿತು ಅವರ ಅಜ್ಞಾನವನ್ನು ಸೂಚಿಸುತ್ತದೆ” ಎಂದಿದ್ದಾರೆ.

“ಇದು ರವೀಂದ್ರನಾಥ ಟ್ಯಾಗೋರ್ ರಚಿಸಿದ ಹಾಡು. ಇದು ಬಂಗಾಳಿ ಸಂಸ್ಕೃತಿಯ ಭಾವನೆಗಳನ್ನು ತಿಳಿಸುವ ಹಾಡು. ಬಿಜೆಪಿ ಸದಾ ಬಂಗಾಳಿ ಭಾಷೆ, ಬಂಗಾಳಿ ಸಂಸ್ಕೃತಿ ಮತ್ತು ಬಂಗಾಳದ ಜನರನ್ನು ಅವಮಾನಿಸುತ್ತಾ ಬಂದಿದೆ. ಅವರು ತಮ್ಮ ಅಜ್ಞಾನವನ್ನು ತೋರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಅವರ ಇತಿಹಾಸ ಮತ್ತು ಅವರ ತತ್ವಶಾಸ್ತ್ರದ ಬಗ್ಗೆ ಬಿಜೆಪಿಗರಿಗೆ ತಿಳಿದಿಲ್ಲ. ಬಂಗಾಳದ ಜನರು ಮತ್ತು ಭಾರತದ ವಿವಿಧ ಭಾಗಗಳಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಮತಕ್ಕಾಗಿ ಮಾತ್ರ ಬಳಸುತ್ತದೆ. ಅವರ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯು ಹೆಚ್ಚಾಗಿ ಬಂಗಾಳಿ ಭಾಷೆ ಮಾತನಾಡುವ ಜನರಿರುವ ಬರಾಕ್ ಕಣಿವೆಯಲ್ಲಿದೆ. ಇದು ಬಾಂಗ್ಲಾದೇಶದ ಗಡಿ ಪ್ರದೇಶವಾಗಿದೆ. 1947ರ ದೇಶ ವಿಭಜನೆ ಈ ಪ್ರದೇಶದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

‘ಅಮರ್ ಸೋನಾರ್ ಬಾಂಗ್ಲಾ’ ಗೀತೆ

‘ಅಮರ್ ಸೋನಾರ್ ಬಾಂಗ್ಲಾ’ 1905ರಲ್ಲಿ ಬ್ರಿಟಿಷ್ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜನೆ ಮಾಡಿದ್ದನ್ನು ವಿರೋಧಿಸಿ ನಡೆದ ಸ್ವದೇಶಿ ಚಳವಳಿಯ ಸಮಯದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಹತ್ವದ ಗೀತೆಯಾಗಿದೆ.

ಲಾರ್ಡ್ ಕರ್ಜನ್ ಬಂಗಾಳವನ್ನು ಹಿಂದೂ ಬಹುಸಂಖ್ಯಾತ ಪಶ್ಚಿಮ ಮತ್ತು ಮುಸ್ಲಿಂ ಬಹುಸಂಖ್ಯಾತ ಪೂರ್ವ ಎಂದು ವಿಭಜಿಸಿದ್ದರು. ಇದನ್ನು ‘ಒಡೆದು ಆಳುವ’ ತಂತ್ರ ಎಂದು ವಿರೋಧಿಸಿ ಸ್ವದೇಶಿ ಚಳವಳಿ ಕಟ್ಟಲಾಗಿತ್ತು.

ಬಂಗಾಳದ ಏಕತೆ, ಹೆಮ್ಮೆ ಮತ್ತು ಪ್ರತಿರೋಧವನ್ನು ಪ್ರೇರೇಪಿಸಲು ಬರೆದ ಗೀತೆಯನ್ನು ಸೆಪ್ಟೆಂಬರ್ 1905 ರಲ್ಲಿ ಬಂಗಾಳಿ ಸಾಹಿತ್ಯ ಪತ್ರಿಕೆ ‘ಭಾರತಿ’ ಮೊದಲ ಬಾರಿಗೆ ಪ್ರಕಟಿಸಿತ್ತು. ಕಲ್ಕತ್ತಾದಲ್ಲಿ (ಕೋಲ್ಕತ್ತಾ) ನಡೆದ ಪ್ರತಿಭಟನಾ ಸಭೆಗಳಲ್ಲಿ ಈ ಗೀತೆಯನ್ನು ಹಾಡಲಾಗಿತ್ತು.

“ನಾನು ವಿಭಜನೆಯನ್ನು ಪ್ರತಿಭಟಿಸಲು ‘ಅಮರ್ ಸೋನಾರ್ ಬಾಂಗ್ಲಾ’ ಬರೆದೆ… ನಾನು ಬಂಗಾಳವನ್ನು ನನ್ನ ತಾಯಿಯಾಗಿ, ಚಿನ್ನವಾಗಿ ಮತ್ತು ಸುಂದರವಾಗಿ ನೋಡಿದೆ” ಎಂದು ಸ್ವತಃ ಟ್ಯಾಗೋರ್ ಅವರು ಈ ಗೀತೆ ಕುರಿತು ಹೇಳಿದ್ದರು.

ಬಂಗಾಳಿ ಸಾಂಸ್ಕೃತಿಕ ಗುರುತು ಮತ್ತು ವಸಾಹತುಶಾಹಿ ವಿರೋಧಿ ಪ್ರತಿರೋಧದ ಸಂಕೇತವಾದ ಈ ಗೀತೆಯನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಂಗಾಳದಾದ್ಯಂತ ಶಾಲೆಗಳು, ಪ್ರತಿಭಟನಾ ಸಭೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡಲಾಗಿತ್ತು.

ಬಾಂಗ್ಲಾದೇಶ ರಾಷ್ಟ್ರಗೀತೆ-1971

ಮಾರ್ಚ್–ಡಿಸೆಂಬರ್ 1971ರಲ್ಲಿ ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ‘ಬಾಂಗ್ಲಾದೇಶ ವಿಮೋಚನಾ’ ಹೋರಾಟ ನಡೆಯಿತು.

ಬಾಂಗ್ಲಾದೇಶ ಸ್ವತಂತ್ರ ರಾಷ್ಟ್ರವಾಗಿ ಪಾಕಿಸ್ತಾನದಿಂದ ವಿಮೋಚನೆಗೊಂಡ ಬಳಿಕ, ಅಂದರೆ 13 ಜನವರಿ 1972ರಲ್ಲಿ ಬಾಂಗ್ಲಾದೇಶದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಮೊದಲ ಬಾರಿಗೆ ಕೇಳಿಸಲಾಗಿತ್ತು. ಬಳಿಕ 1972ರಲ್ಲಿ ಗೀತೆಯ ಮೊದಲ ಹತ್ತು ಸಾಲುಗಳು ಅಧಿಕೃತವಾಗಿ ಬಾಂಗ್ಲಾದೇಶದ ರಾಷ್ಟ್ರಗೀತೆಯ ಭಾಗವಾದವು.

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...