Homeಕರ್ನಾಟಕಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

- Advertisement -
- Advertisement -

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ನಗರಸಭೆ ಸಿಬ್ಬಂದಿ ಫ್ಲೆಕ್‌ಗಳನ್ನು ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ಕೂಡ ನೀಡಿದ್ದರು ಎಂದು ವರದಿಯಾಗಿದೆ.

ಫ್ಲೆಕ್ಸ್ ಬಿಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ರಾಜೀವ್‌ಗೌಡ ಪೌರಾಯುಕ್ತೆಗೆ ಕರೆಮಾಡಿ ಅವಾಚ್ಯವಾಗಿ ಬೈದಿದ್ದಾರೆ. ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

“ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ ಕೆಟ್ಟತನ ನೋಡಿಲ್ಲ” ಎಂದು ರಾಜೀವ್‌ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿರುವುದು ವೈರಲ್ ಆಡಿಯೋದಲ್ಲಿದೆ. ಇದಕ್ಕೆ ಪ್ರತಿಕ್ರಿಯಸಿದ ಪೌರಾಯುಕ್ತೆ ಅಮೃತಗೌಡ ಅವರು, “ರಸ್ತೆಯಲ್ಲಿ ಕಟ್ಟಿದ್ದಾರೆ. ಸಾರ್ವಜನಿಕರಿಂದ ದೂರು ಬಂದಿದೆ. ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ. ಅಪಘಾತ ಆದರೆ ನಾವು ಹೊಣೆ..” ಎಂದು ಹೇಳಿದ್ದಾರೆ.

ಈ ವೇಳೆ ಮತಷ್ಟು ಕುಪಿತರಾದ ರಾಜೀವ್‌ಗೌಡ, “ಬೆಂಕಿ ಹಚ್ಚುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಜನರನ್ನು ದಂಗೆ ಏಳಿಸುತ್ತೇನೆ” ಎಂದಿದ್ದಾರೆ. ಮುಂದುವರಿದು, ಅವಾಚ್ಯ ಶಬ್ದಗಳಿಂದ ಮಹಿಳಾ ಸರ್ಕಾರಿ ಅಧಿಕಾರಿಗೆ ನಿಂದಿಸಿದ್ದಾರೆ.

ರಾಜೀವ್ ಗೌಡ ವಿರುದ್ದ ಪ್ರತಿಭಟನೆ

ಪೌರಾಯುಕ್ತೆ ಅಮೃತಾಗೌಡ ಅವರಿಗೆ ರಾಜೀವ್‌ಗೌಡ ಧಮ್ಕಿ ಹಾಕಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ (ಜ.14) ಆಯಾ ನಗರ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ರಾಜೀವ್ ಗೌಡ ಧಮ್ಕಿ ಹಾಕಿರುವ ಆಡಿಯೋವನ್ನು ಜೆಡಿಎಸ್‌ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಕಾಂಗ್ರೆಸ್‌ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ” ಎಂದಿದೆ.

ಮುಂದುವರಿದು, “ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ” ಎಂದು ಹೇಳಿದೆ.

“ಸಿಎಂ ಸಿದ್ದರಾಮಯ್ಯ , ಗೃಹ ಸಚಿವರ ಪಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...