Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...