Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...