Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...