Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...