Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...