Homeಕರ್ನಾಟಕಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ...

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ ಕೋಮುವಾದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಸಂವಿಧಾನ ಜಾರಿಯಾದ ನಂತರ , ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆಯಿಲ್ಲದೆ ಒಂದಲ್ಲಾ ಒಂದು ಬಗೆಯಲ್ಲಿ ಸಂವಿಧಾನವನ್ನು ಗೌಣಗೊಳಿಸಿ  ಧರ್ಮ ಹಾಗು ಕೋಮುವಾದದ ನೆಲೆಯಲ್ಲಿ ಭಾರತವನ್ನು ಒಂದು ಜನಾಂಗೀಯ ರಾಷ್ಟ್ರವನ್ನಾಗಿಸಲು ನಿರಂತರವಾಗಿ ಒಡಕಿನ ರಾಜಕೀಯ ಮಾಡುತ್ತಾ ಬಂದಿರುವ  ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು   ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದೆ .

ಇದೇ ಕೋಮುವಾದಿ ಆರೆಸ್ಸೆಸಿನ ಹೊಕ್ಕುಳ ಬಳ್ಳಿಯೊಂದು ಸೇಡಂನಲ್ಲಿ ಜನವರಿ ೨೯ರಿಂದ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನವನ್ನು ಸಂಘಟಿಸುತ್ತಿದೆ. ಆರೆಸ್ಸೆಸ್ಸಿನ   ಶತಮಾನೋತ್ಸವ ಸಂದರ್ಭದ ಪೀಠಿಕಾ ಕಾರ್ಯಕ್ರಮದಂತೆ ಇದನ್ನು ಸಂಘಟಿಸಲಾಗಿದೆ. ಇದೇ ಆರ್‌ಎಸ್‌ಎಸ್‌ ನೂರು ವರ್ಷಗಳ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಪ್ರತಿಜ್ಞೆಗೈದಿದ್ದನ್ನು ನಾವು ಸ್ಮರಿಸಬೇಕಿದೆ. ಈ ಕಾರ್ಯಕ್ರಮದ  ರೂವಾರಿ ಗೋವಿಂದಾಚಾರ್ಯ ಒಂದು ಕಾಲದಲ್ಲಿ ಭಾಜಪದಸೂತ್ರಧಾರರಾಗಿದು ಈಗ ಆರೆಸ್ಸೆಸ್‌ ಅಣತಿ ಮೇರೆಗೆ ಇನ್ನೊಂದು ಪಾತ್ರ ನಿರ್ವಹಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಿಸಬೇಕೆಂಬ ಮೊದಲಮಾತು ಶುರು ಮಾಡಿದ್ದೇ ಈ ಗೋವಿಂದಾಚಾರ್ಯ. ಈ ಸದರಿ ಸಮ್ಮೇಳನವು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಗೌಪ್ಯ ಅಜೆಂಡಾವನ್ನು ಹೊಂದಿದ್ದು , ಅದರಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಭಾಜಪ/ ಆರೆಸ್ಸೆಸ್ಸಿಗರು ಅಥವಾ ತೆರೆಮೆರೆಯಲ್ಲಿ  ಆರೆಸ್ಸೆಸ್‌ ಬೆಂಬಲಿಸುವ ಮೂಲಕ  ಸಂವಿಧಾನವನ್ನು ಬುಡಮೇಲು ಮಾಡುವ ಶಕ್ತಿಗಳೇ ಆಗಿವೆ .  ಈ ಅಜೆಂಡವೂ ಅವರ ಸಾರ್ವಜನಿಕ ಹೇಳಿಕೆಗಳು , ಸಿದ್ಧತೆಗಳು ಮತ್ತು ಕ್ರಿಯೆಗಳು ನಿಚ್ಚಳವಾಗಿದೆ. ಇದು ಅವರ ಹಿಂದುತ್ವ ನಿಲುವನ್ನು ಢಾಳಾಗಿ ತೋರಿಸಿದೆ.

ಈ  ಸಮ್ಮೇಳನವೂ ಮಾರುವೇಶದ ಆರೆಸ್ಸೆಸ್‌ನ ದೇಶ ವಿಭಜನೆ  ಕಾರ್ಯಕ್ರಮ ಎಂಬುದು ಸ್ಪಷ್ಟವಾಗಿದೆ. ಭಾರತೀಯ ಎಂದರೆ ಹಿಂದೂ ಅದರಲ್ಲೂ ಹಿಂದೂ ಬ್ರಾಹ್ಮಣೀಯ ಸಂಸ್ಕೃತಿ ಎಂಬಾ ಆರೆಸ್ಸೆಸ್ಸಿನ ಸಿದ್ಧಾಂತ ವನ್ನು ಪ್ರಚಾರ ಮಾಡುವುದೇ ಈ ಸಮಾವೇಶದ ಉದ್ದೇಶವಾಗಿದೆ. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯು ಬಸವರಾಜ ಪಾಟಿಲ ಸೇಡಂ ಎಂಬ ಕಟ್ಟಾ ಆರ್ ಎಸ್ ಎಸ್ ನ  ನಾಯಕರು ಇದರ ಪ್ರಮುಖ ಸಂಘಟಕರದ್ದು. ಭಾರತೀಯ ಸಂಸ್ಕೃತಿ ಉತ್ಸವ ಎಂಬುದು ತೋರಿಕೆಯ ಹೆಸರು. 240 ಎಕರೆ ಜಾಗದಲ್ಲಿ ಒಂಬತ್ತು ದಿನಗಳ ಕಾಲ ನಡೆಯುವ ಉತ್ಸವವು ಹಿಂದೂ ಧರ್ಮ ಉಳಿಸಲು ಅಂದರೆ ಸನಾತನ ವ್ಯವಸ್ಥೆ ಉಳಿಸಲು ನಡೆಸಲಾಗುತ್ತಿರುವ ಉತ್ಸವವಾಗಿದೆ. ಇದೊಂದು ಆರ್ ಎಸ್ ಎಸ್ ನ ನೂರನೇ ವರ್ಷದ ಆಚರಣೆಯ ಆರಂಭದ ಭಿನ್ನರೂಪ. ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರವೇಶದ ಭಾಗವಾಗಿ ಆರ್ ಎಸ್ ಎಸ್ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ,  ಕಲಬುರ್ಗಿಯನ್ನು ಹೆಬ್ಬಾಗಿಲು ಮಾಡಿಕೊಂಡಿದೆ. ಈ ಉದ್ಧೇಶಕ್ಕಾಗಿಯೇ “ಭಾರತೀಯ ಸಂಸ್ಕೃತಿ ಉತ್ಸವ ಎಂಬ ಹೆಸರಿನ  “ಪುರೋಹಿತಶಾಹಿತ್ವದ ಉತ್ಸವ” ನಡೆಸಲಾಗುತ್ತಿದೆ. ಪುರೋಹಿತಶಾಹಿಗಳಿಗೆ ಗೌರವಿಸುವ ಸಂವಿಧಾನ (ಮನುಸ್ಮೃತಿ)ಕ್ಕಾಗಿ ಈ ಉತ್ಸವ. ಸಂವಿಧಾನವನ್ನು ಗೌರವಿಸಿ ಮಾನವೀಯತೆ, ಸೌಹಾರ್ದತೆ, ಶಾಂತಿ , ಬಂಧುತ್ವ, ಬಹುತ್ವ , ಬಹು ಸಂಸ್ಕೃತಿ, ಬಹುಭಾಷೆ ಮತ್ತು ಸಮಗ್ರತೆಯನ್ನು ಬಯಸುವವರೆಲ್ಲರೂ ಈ ಉತ್ಸವನ್ನುನ ಧಿಕ್ಕರಿಸಬೇಕಿದೆ.

ಈಗಾಗಲೇ, ಸೇಡಂ ನಲ್ಲಿ  ನಡೆಯಲಿರುವ  ಈ ಭಾರತೀಯ ಸಂಸ್ಕೃತಿ ಕಾರ್ಯಕ್ರಮದಲ್ಲಿ  ಭಾಗವಹಿಸುತ್ತಿಲ್ಲ ಎಂದು ತಮ್ಮ X ಖಾತೆಯಲ್ಲಿ ಸನ್ಮಾನ್ಯ ಮುಖ್ಯ ಮಂತ್ರಗಳು  ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ಅವರು ಮುಖ್ಯ ಮಂತ್ರಿಯಾಗಿ  ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಹೆಸರಿನಲ್ಲಿ ತೆಗೆದುಕೊಂಡ ಪ್ರತಿಜ್ಞೆಗೆ ಅನುಗುಣವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರೂ ನಾನು ಭಾಗವಹಿಸಲಾರೆ ಎಂದು ಬಹಿರಂಗವಾಗಿ ಸ್ಪಷ್ಟ ಮಾಡಿದ್ದಾರೆ

ಆದರೆ ಈ  ಕಾರ್ಯಕ್ರಮದ  ಆಹ್ವಾನ ಪತ್ರಿಕೆಯಲ್ಲಿ ಇರುವುದು ಕೇವಲ  ಮುಖ್ಯಮಂತ್ರಿಯವರ  ಹೆಸರು, ಪ್ರಿಯಾಂಕ ಖರ್ಗೆಯವರ ಹೆಸರು ಮಾತ್ರವಲ್ಲ. ಸಂಘಟಕರು ಹೊರತಂದಿರುವ 52 ಪುಟಗಳ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಮಂತ್ರಿಗಳ ಸಚಿವ ಸಂಪುಟದ ಭಾಗವಾಗಿರುವ ಹಲವು ಮಂತ್ರಿಗಳು, ಸಂಸದರು  ಮತ್ತು   ಆ ಪ್ರದೇಶದ ಕಾಂಗ್ರೆಸ್‌ ನ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ  ಎಂದು  ಅವರ ಹೆಸರುಗಳನ್ನು ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ  ಈ ಎಲ್ಲಾ ಹೆಸರಗಳನ್ನು ಅವರ ಗಮನಕ್ಕೆ ತಾರದೆ ಮತ್ತು ಒಪ್ಪಿಗೆಯಿಲ್ಲದೆ ಹಾಕಲಾಗಿದೆ ಎಂಬ ಮಾತು ಕೇಳು ಬರುತ್ತಿದೆ.  ಇಷ್ಟೇ ಅಲ್ಲದೆ , ಕಾರ್ಯಕ್ರಮದ ಸಿದ್ಧತೆಗಾಗಿ ಇಲಾಖಾವಾರು ಸಭೆಗಳು ನಡೆದಿವೆ ಎಂಬ ಮಾಹಿತಿ ಕೂಡಾ ಇದೆ .

ಹಾಗಾದರೆ ಕೇಳದೇ ಹೆಸರು ಬಳಸಿಕೊಂಡು   ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿರುವ  ಸಂಘಟಕರ ಮೇಲೆ  ಕಾನೂನು  ಕ್ರಮ ಜರುಗಿಸಬೇಕೆಂದು ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ.  ಕಾಂಗ್ರೆಸ್‌ನ ಈ  ಮೃದು ಹಿಂದುತ್ವದ ಧೋರಣೆ  ರಾಜ್ಯದ  ಶಾಂತಿ ಸೌಹಾರ್ದತೆಗೆ ಧಕ್ಕೆಯ ಸಂಗತಿಯಾಗಿದೆ. ಆದರೂ  ಆಡಳಿತರೂಢ ಕಾಂಗೆಸ್‌ ಪಕ್ಷವೂ ಏಕೆ  ನಿರ್ಲಕ್ಷ್ಯವಹಿಸುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ? ಜೊತೆಗೆ ಇದು ಸೈದ್ಧಾಂತಿಕ ನಿಲುವಿನ ಪ್ರಶ್ನೆಯಾಗಿದ್ದು ಒಂದು ಸಮ್ಮೇಳನದ ಪೂರ್ವಾಪರಗಳನ್ನು ತಿಳಿಯದೆ ಕಾಂಗ್ರೆಸ್‌ ಸರಕಾರದ ಸಚಿವರು ಮತ್ತು ನಾಯಕರು ಈ ಸಮ್ಮೇಳನಕ್ಕೆ ಹೋಗಲು ಹೇಗೆ ಒಪ್ಪಿಕೊಂಡರು ಎಂಬುದು ಪ್ರಶ್ನೆಯಾಗಿದೆ ?

ಈ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿದರೆ ಕಾಂಗ್ರೆಸ್‌ ನಾಯಕರನ್ನು ನಿರ್ದಿಷ್ಟ ಕಾರ್ಯಕ್ರಮಗಳಿಗೆ ಆಹ್ವಾನಿಸಿರುವುದು ಸ್ಪಷ್ಠ. ಕೇಳದೇ, ಒಪ್ಪಿಗೆ ಪಡೆಯದೇ ಇಂಥಾ ದೊಡ್ಡ ಸಮ್ಮೇಳದ ಆಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸುವುದು ಸಾಧ್ಯವೇ ಇಲ್ಲ. ಕಾಂಗ್ರೆಸಿಗರಿಗೆ ಕನಿಷ್ಠ ತಮ್ಮ ಪಕ್ಷದ ಸೈದ್ಧಾಂತಿಕ ನಿಲುವು,   ಪರಂಪರೆ ಬಗ್ಗೆ ಕನಿಷ್ಠ ತಿಳುವಳಿಕೆ ಇದ್ದಿದ್ದರೆ ಇಂಥಾ ಅಭಾಸಕ್ಕೆಡೆಯಾಗುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿಯವರು ಸದಾ ಸಂವಿಧಾನವನ್ನು ಎತ್ತಿ ಹಿಡಿಯುವ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಮಾದರಿಯಾಗಬೇಕಿತ್ತು. ಹಾಗಾಗದಿರುವುದು ವಿಷಾದನೀಯ ಸಂಗತಿಯಾಗಿದೆ

240 ಎಕರೆ ಬೆಳೆಯುವ ಭೂಮಿಯಿಂದ ತಾತ್ಪೂರ್ತಿಕವಾಗಿ ರೈತರನ್ನು ಒಕ್ಕಲೆಬ್ಬಿಸಿ ಲಕ್ಷಾಂತರ ಜನರನ್ನು ಸೇರಿಸಿ ವಾತಾವರಣ ಕಲುಷಿತ ಮಾಡುತ್ತಿದ್ದಾರೆ. ಇದಕ್ಕೇನು ಕ್ರಮ ಕೈಗೊಳ್ಳಲಾಗುತ್ತಿದೆ ಈ ಸರ್ಕಾರ ಉತ್ತರಿಸಬೇಕು

ಈ ಎಲ್ಲಾ ಕಾರಣಗಳಿಂದ ಸರ್ಕಾರದ ಎಲ್ಲಾ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರರು  ಈ ಕೋಮುವಾದೀ ಸಮ್ಮೇಳನದಲ್ಲಿ ಭಾಗವಹಿಸಬಾರದೆಂದು ನಾವು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ. ಜೊತೆಗೆ,  ಈ ಸಮ್ಮೇಳನದಲ್ಲಿ ಭಾಗಿಯಾಗುವ ನಿರ್ಧಾರದಿಂದ  ಸಚಿವರು ಮತ್ತು ಕಾಂಗ್ರೆ ಸ್‌ ನಾಯಕರು ಹಿಂದೆ ಸರಿದರೆ ಮಾತ್ರ ಸಾಲದು, ಹಿಂದುತ್ವದ ಹಲವು ಮುಖಗಳ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸೈದ್ಧಾಂತಿಕ ಕಾರ್ಯಕ್ರಮವನ್ನು  ಜನಾಂದೋಲನವಾಗಿ ಕಾಂಗ್ರೆಸ್‌ ನಾಯಕರು ರೂಪಿಸಬೇಕೆಂದು  ನಾವು ಒತ್ತಾಯಿಸುತ್ತೇವೆ.

ರಾಜ್ಯದ ಜನಗಳಿಗೆ ಕೋಮುವಾದಿ ವಿಷಾನಿಲ ಉಣಿಸಿ ಮುಗ್ಧ ಶೂದ್ರ ಮಕ್ಕಳ ಮನೋಸ್ವಾಸ್ಥ್ಯವನ್ನು ಹಾಳುಗೆಡಹುತ್ತಿದ್ದಾರೆ. ಅಲ್ಲಿ ಈಗಾಗಲೇ ನೂರಾರು ಶೂದ್ರರನ್ನು ಹಗಲು ರಾತ್ರಿ ದುಡಿಸಿಕೊಂಡು ಸನಾತನಿಗಳ ಸೇವೆಗೆ ಅವರ ಚರ್ಮವನ್ನು ರತ್ನಗಂಬಳಿ ಮಾಡಿ ಹಾಸಲಾಗುತ್ತಿದೆ ಎಂಬುದನ್ನು ರಾಜ್ಯದ ಎಚ್ಚರಿಕೆಯಿಂದ ಗಮನಿಸಬೇಕು ಮತ್ತದನ್ನು ವಿರೋಧಿಸಬೇಕು ಎಂಬುದು ನಮ್ಮ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ…ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...