Homeಕರ್ನಾಟಕಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ...

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ ಕೋಮುವಾದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಸಂವಿಧಾನ ಜಾರಿಯಾದ ನಂತರ , ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆಯಿಲ್ಲದೆ ಒಂದಲ್ಲಾ ಒಂದು ಬಗೆಯಲ್ಲಿ ಸಂವಿಧಾನವನ್ನು ಗೌಣಗೊಳಿಸಿ  ಧರ್ಮ ಹಾಗು ಕೋಮುವಾದದ ನೆಲೆಯಲ್ಲಿ ಭಾರತವನ್ನು ಒಂದು ಜನಾಂಗೀಯ ರಾಷ್ಟ್ರವನ್ನಾಗಿಸಲು ನಿರಂತರವಾಗಿ ಒಡಕಿನ ರಾಜಕೀಯ ಮಾಡುತ್ತಾ ಬಂದಿರುವ  ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು   ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದೆ .

ಇದೇ ಕೋಮುವಾದಿ ಆರೆಸ್ಸೆಸಿನ ಹೊಕ್ಕುಳ ಬಳ್ಳಿಯೊಂದು ಸೇಡಂನಲ್ಲಿ ಜನವರಿ ೨೯ರಿಂದ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನವನ್ನು ಸಂಘಟಿಸುತ್ತಿದೆ. ಆರೆಸ್ಸೆಸ್ಸಿನ   ಶತಮಾನೋತ್ಸವ ಸಂದರ್ಭದ ಪೀಠಿಕಾ ಕಾರ್ಯಕ್ರಮದಂತೆ ಇದನ್ನು ಸಂಘಟಿಸಲಾಗಿದೆ. ಇದೇ ಆರ್‌ಎಸ್‌ಎಸ್‌ ನೂರು ವರ್ಷಗಳ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಪ್ರತಿಜ್ಞೆಗೈದಿದ್ದನ್ನು ನಾವು ಸ್ಮರಿಸಬೇಕಿದೆ. ಈ ಕಾರ್ಯಕ್ರಮದ  ರೂವಾರಿ ಗೋವಿಂದಾಚಾರ್ಯ ಒಂದು ಕಾಲದಲ್ಲಿ ಭಾಜಪದಸೂತ್ರಧಾರರಾಗಿದು ಈಗ ಆರೆಸ್ಸೆಸ್‌ ಅಣತಿ ಮೇರೆಗೆ ಇನ್ನೊಂದು ಪಾತ್ರ ನಿರ್ವಹಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಿಸಬೇಕೆಂಬ ಮೊದಲಮಾತು ಶುರು ಮಾಡಿದ್ದೇ ಈ ಗೋವಿಂದಾಚಾರ್ಯ. ಈ ಸದರಿ ಸಮ್ಮೇಳನವು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಗೌಪ್ಯ ಅಜೆಂಡಾವನ್ನು ಹೊಂದಿದ್ದು , ಅದರಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಭಾಜಪ/ ಆರೆಸ್ಸೆಸ್ಸಿಗರು ಅಥವಾ ತೆರೆಮೆರೆಯಲ್ಲಿ  ಆರೆಸ್ಸೆಸ್‌ ಬೆಂಬಲಿಸುವ ಮೂಲಕ  ಸಂವಿಧಾನವನ್ನು ಬುಡಮೇಲು ಮಾಡುವ ಶಕ್ತಿಗಳೇ ಆಗಿವೆ .  ಈ ಅಜೆಂಡವೂ ಅವರ ಸಾರ್ವಜನಿಕ ಹೇಳಿಕೆಗಳು , ಸಿದ್ಧತೆಗಳು ಮತ್ತು ಕ್ರಿಯೆಗಳು ನಿಚ್ಚಳವಾಗಿದೆ. ಇದು ಅವರ ಹಿಂದುತ್ವ ನಿಲುವನ್ನು ಢಾಳಾಗಿ ತೋರಿಸಿದೆ.

ಈ  ಸಮ್ಮೇಳನವೂ ಮಾರುವೇಶದ ಆರೆಸ್ಸೆಸ್‌ನ ದೇಶ ವಿಭಜನೆ  ಕಾರ್ಯಕ್ರಮ ಎಂಬುದು ಸ್ಪಷ್ಟವಾಗಿದೆ. ಭಾರತೀಯ ಎಂದರೆ ಹಿಂದೂ ಅದರಲ್ಲೂ ಹಿಂದೂ ಬ್ರಾಹ್ಮಣೀಯ ಸಂಸ್ಕೃತಿ ಎಂಬಾ ಆರೆಸ್ಸೆಸ್ಸಿನ ಸಿದ್ಧಾಂತ ವನ್ನು ಪ್ರಚಾರ ಮಾಡುವುದೇ ಈ ಸಮಾವೇಶದ ಉದ್ದೇಶವಾಗಿದೆ. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯು ಬಸವರಾಜ ಪಾಟಿಲ ಸೇಡಂ ಎಂಬ ಕಟ್ಟಾ ಆರ್ ಎಸ್ ಎಸ್ ನ  ನಾಯಕರು ಇದರ ಪ್ರಮುಖ ಸಂಘಟಕರದ್ದು. ಭಾರತೀಯ ಸಂಸ್ಕೃತಿ ಉತ್ಸವ ಎಂಬುದು ತೋರಿಕೆಯ ಹೆಸರು. 240 ಎಕರೆ ಜಾಗದಲ್ಲಿ ಒಂಬತ್ತು ದಿನಗಳ ಕಾಲ ನಡೆಯುವ ಉತ್ಸವವು ಹಿಂದೂ ಧರ್ಮ ಉಳಿಸಲು ಅಂದರೆ ಸನಾತನ ವ್ಯವಸ್ಥೆ ಉಳಿಸಲು ನಡೆಸಲಾಗುತ್ತಿರುವ ಉತ್ಸವವಾಗಿದೆ. ಇದೊಂದು ಆರ್ ಎಸ್ ಎಸ್ ನ ನೂರನೇ ವರ್ಷದ ಆಚರಣೆಯ ಆರಂಭದ ಭಿನ್ನರೂಪ. ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರವೇಶದ ಭಾಗವಾಗಿ ಆರ್ ಎಸ್ ಎಸ್ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ,  ಕಲಬುರ್ಗಿಯನ್ನು ಹೆಬ್ಬಾಗಿಲು ಮಾಡಿಕೊಂಡಿದೆ. ಈ ಉದ್ಧೇಶಕ್ಕಾಗಿಯೇ “ಭಾರತೀಯ ಸಂಸ್ಕೃತಿ ಉತ್ಸವ ಎಂಬ ಹೆಸರಿನ  “ಪುರೋಹಿತಶಾಹಿತ್ವದ ಉತ್ಸವ” ನಡೆಸಲಾಗುತ್ತಿದೆ. ಪುರೋಹಿತಶಾಹಿಗಳಿಗೆ ಗೌರವಿಸುವ ಸಂವಿಧಾನ (ಮನುಸ್ಮೃತಿ)ಕ್ಕಾಗಿ ಈ ಉತ್ಸವ. ಸಂವಿಧಾನವನ್ನು ಗೌರವಿಸಿ ಮಾನವೀಯತೆ, ಸೌಹಾರ್ದತೆ, ಶಾಂತಿ , ಬಂಧುತ್ವ, ಬಹುತ್ವ , ಬಹು ಸಂಸ್ಕೃತಿ, ಬಹುಭಾಷೆ ಮತ್ತು ಸಮಗ್ರತೆಯನ್ನು ಬಯಸುವವರೆಲ್ಲರೂ ಈ ಉತ್ಸವನ್ನುನ ಧಿಕ್ಕರಿಸಬೇಕಿದೆ.

ಈಗಾಗಲೇ, ಸೇಡಂ ನಲ್ಲಿ  ನಡೆಯಲಿರುವ  ಈ ಭಾರತೀಯ ಸಂಸ್ಕೃತಿ ಕಾರ್ಯಕ್ರಮದಲ್ಲಿ  ಭಾಗವಹಿಸುತ್ತಿಲ್ಲ ಎಂದು ತಮ್ಮ X ಖಾತೆಯಲ್ಲಿ ಸನ್ಮಾನ್ಯ ಮುಖ್ಯ ಮಂತ್ರಗಳು  ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ಅವರು ಮುಖ್ಯ ಮಂತ್ರಿಯಾಗಿ  ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಹೆಸರಿನಲ್ಲಿ ತೆಗೆದುಕೊಂಡ ಪ್ರತಿಜ್ಞೆಗೆ ಅನುಗುಣವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರೂ ನಾನು ಭಾಗವಹಿಸಲಾರೆ ಎಂದು ಬಹಿರಂಗವಾಗಿ ಸ್ಪಷ್ಟ ಮಾಡಿದ್ದಾರೆ

ಆದರೆ ಈ  ಕಾರ್ಯಕ್ರಮದ  ಆಹ್ವಾನ ಪತ್ರಿಕೆಯಲ್ಲಿ ಇರುವುದು ಕೇವಲ  ಮುಖ್ಯಮಂತ್ರಿಯವರ  ಹೆಸರು, ಪ್ರಿಯಾಂಕ ಖರ್ಗೆಯವರ ಹೆಸರು ಮಾತ್ರವಲ್ಲ. ಸಂಘಟಕರು ಹೊರತಂದಿರುವ 52 ಪುಟಗಳ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಮಂತ್ರಿಗಳ ಸಚಿವ ಸಂಪುಟದ ಭಾಗವಾಗಿರುವ ಹಲವು ಮಂತ್ರಿಗಳು, ಸಂಸದರು  ಮತ್ತು   ಆ ಪ್ರದೇಶದ ಕಾಂಗ್ರೆಸ್‌ ನ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ  ಎಂದು  ಅವರ ಹೆಸರುಗಳನ್ನು ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ  ಈ ಎಲ್ಲಾ ಹೆಸರಗಳನ್ನು ಅವರ ಗಮನಕ್ಕೆ ತಾರದೆ ಮತ್ತು ಒಪ್ಪಿಗೆಯಿಲ್ಲದೆ ಹಾಕಲಾಗಿದೆ ಎಂಬ ಮಾತು ಕೇಳು ಬರುತ್ತಿದೆ.  ಇಷ್ಟೇ ಅಲ್ಲದೆ , ಕಾರ್ಯಕ್ರಮದ ಸಿದ್ಧತೆಗಾಗಿ ಇಲಾಖಾವಾರು ಸಭೆಗಳು ನಡೆದಿವೆ ಎಂಬ ಮಾಹಿತಿ ಕೂಡಾ ಇದೆ .

ಹಾಗಾದರೆ ಕೇಳದೇ ಹೆಸರು ಬಳಸಿಕೊಂಡು   ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿರುವ  ಸಂಘಟಕರ ಮೇಲೆ  ಕಾನೂನು  ಕ್ರಮ ಜರುಗಿಸಬೇಕೆಂದು ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ.  ಕಾಂಗ್ರೆಸ್‌ನ ಈ  ಮೃದು ಹಿಂದುತ್ವದ ಧೋರಣೆ  ರಾಜ್ಯದ  ಶಾಂತಿ ಸೌಹಾರ್ದತೆಗೆ ಧಕ್ಕೆಯ ಸಂಗತಿಯಾಗಿದೆ. ಆದರೂ  ಆಡಳಿತರೂಢ ಕಾಂಗೆಸ್‌ ಪಕ್ಷವೂ ಏಕೆ  ನಿರ್ಲಕ್ಷ್ಯವಹಿಸುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ? ಜೊತೆಗೆ ಇದು ಸೈದ್ಧಾಂತಿಕ ನಿಲುವಿನ ಪ್ರಶ್ನೆಯಾಗಿದ್ದು ಒಂದು ಸಮ್ಮೇಳನದ ಪೂರ್ವಾಪರಗಳನ್ನು ತಿಳಿಯದೆ ಕಾಂಗ್ರೆಸ್‌ ಸರಕಾರದ ಸಚಿವರು ಮತ್ತು ನಾಯಕರು ಈ ಸಮ್ಮೇಳನಕ್ಕೆ ಹೋಗಲು ಹೇಗೆ ಒಪ್ಪಿಕೊಂಡರು ಎಂಬುದು ಪ್ರಶ್ನೆಯಾಗಿದೆ ?

ಈ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿದರೆ ಕಾಂಗ್ರೆಸ್‌ ನಾಯಕರನ್ನು ನಿರ್ದಿಷ್ಟ ಕಾರ್ಯಕ್ರಮಗಳಿಗೆ ಆಹ್ವಾನಿಸಿರುವುದು ಸ್ಪಷ್ಠ. ಕೇಳದೇ, ಒಪ್ಪಿಗೆ ಪಡೆಯದೇ ಇಂಥಾ ದೊಡ್ಡ ಸಮ್ಮೇಳದ ಆಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸುವುದು ಸಾಧ್ಯವೇ ಇಲ್ಲ. ಕಾಂಗ್ರೆಸಿಗರಿಗೆ ಕನಿಷ್ಠ ತಮ್ಮ ಪಕ್ಷದ ಸೈದ್ಧಾಂತಿಕ ನಿಲುವು,   ಪರಂಪರೆ ಬಗ್ಗೆ ಕನಿಷ್ಠ ತಿಳುವಳಿಕೆ ಇದ್ದಿದ್ದರೆ ಇಂಥಾ ಅಭಾಸಕ್ಕೆಡೆಯಾಗುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿಯವರು ಸದಾ ಸಂವಿಧಾನವನ್ನು ಎತ್ತಿ ಹಿಡಿಯುವ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಮಾದರಿಯಾಗಬೇಕಿತ್ತು. ಹಾಗಾಗದಿರುವುದು ವಿಷಾದನೀಯ ಸಂಗತಿಯಾಗಿದೆ

240 ಎಕರೆ ಬೆಳೆಯುವ ಭೂಮಿಯಿಂದ ತಾತ್ಪೂರ್ತಿಕವಾಗಿ ರೈತರನ್ನು ಒಕ್ಕಲೆಬ್ಬಿಸಿ ಲಕ್ಷಾಂತರ ಜನರನ್ನು ಸೇರಿಸಿ ವಾತಾವರಣ ಕಲುಷಿತ ಮಾಡುತ್ತಿದ್ದಾರೆ. ಇದಕ್ಕೇನು ಕ್ರಮ ಕೈಗೊಳ್ಳಲಾಗುತ್ತಿದೆ ಈ ಸರ್ಕಾರ ಉತ್ತರಿಸಬೇಕು

ಈ ಎಲ್ಲಾ ಕಾರಣಗಳಿಂದ ಸರ್ಕಾರದ ಎಲ್ಲಾ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರರು  ಈ ಕೋಮುವಾದೀ ಸಮ್ಮೇಳನದಲ್ಲಿ ಭಾಗವಹಿಸಬಾರದೆಂದು ನಾವು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ. ಜೊತೆಗೆ,  ಈ ಸಮ್ಮೇಳನದಲ್ಲಿ ಭಾಗಿಯಾಗುವ ನಿರ್ಧಾರದಿಂದ  ಸಚಿವರು ಮತ್ತು ಕಾಂಗ್ರೆ ಸ್‌ ನಾಯಕರು ಹಿಂದೆ ಸರಿದರೆ ಮಾತ್ರ ಸಾಲದು, ಹಿಂದುತ್ವದ ಹಲವು ಮುಖಗಳ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸೈದ್ಧಾಂತಿಕ ಕಾರ್ಯಕ್ರಮವನ್ನು  ಜನಾಂದೋಲನವಾಗಿ ಕಾಂಗ್ರೆಸ್‌ ನಾಯಕರು ರೂಪಿಸಬೇಕೆಂದು  ನಾವು ಒತ್ತಾಯಿಸುತ್ತೇವೆ.

ರಾಜ್ಯದ ಜನಗಳಿಗೆ ಕೋಮುವಾದಿ ವಿಷಾನಿಲ ಉಣಿಸಿ ಮುಗ್ಧ ಶೂದ್ರ ಮಕ್ಕಳ ಮನೋಸ್ವಾಸ್ಥ್ಯವನ್ನು ಹಾಳುಗೆಡಹುತ್ತಿದ್ದಾರೆ. ಅಲ್ಲಿ ಈಗಾಗಲೇ ನೂರಾರು ಶೂದ್ರರನ್ನು ಹಗಲು ರಾತ್ರಿ ದುಡಿಸಿಕೊಂಡು ಸನಾತನಿಗಳ ಸೇವೆಗೆ ಅವರ ಚರ್ಮವನ್ನು ರತ್ನಗಂಬಳಿ ಮಾಡಿ ಹಾಸಲಾಗುತ್ತಿದೆ ಎಂಬುದನ್ನು ರಾಜ್ಯದ ಎಚ್ಚರಿಕೆಯಿಂದ ಗಮನಿಸಬೇಕು ಮತ್ತದನ್ನು ವಿರೋಧಿಸಬೇಕು ಎಂಬುದು ನಮ್ಮ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ…ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...