Homeಕರ್ನಾಟಕಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ...

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ ಕೋಮುವಾದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಸಂವಿಧಾನ ಜಾರಿಯಾದ ನಂತರ , ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆಯಿಲ್ಲದೆ ಒಂದಲ್ಲಾ ಒಂದು ಬಗೆಯಲ್ಲಿ ಸಂವಿಧಾನವನ್ನು ಗೌಣಗೊಳಿಸಿ  ಧರ್ಮ ಹಾಗು ಕೋಮುವಾದದ ನೆಲೆಯಲ್ಲಿ ಭಾರತವನ್ನು ಒಂದು ಜನಾಂಗೀಯ ರಾಷ್ಟ್ರವನ್ನಾಗಿಸಲು ನಿರಂತರವಾಗಿ ಒಡಕಿನ ರಾಜಕೀಯ ಮಾಡುತ್ತಾ ಬಂದಿರುವ  ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು   ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದೆ .

ಇದೇ ಕೋಮುವಾದಿ ಆರೆಸ್ಸೆಸಿನ ಹೊಕ್ಕುಳ ಬಳ್ಳಿಯೊಂದು ಸೇಡಂನಲ್ಲಿ ಜನವರಿ ೨೯ರಿಂದ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನವನ್ನು ಸಂಘಟಿಸುತ್ತಿದೆ. ಆರೆಸ್ಸೆಸ್ಸಿನ   ಶತಮಾನೋತ್ಸವ ಸಂದರ್ಭದ ಪೀಠಿಕಾ ಕಾರ್ಯಕ್ರಮದಂತೆ ಇದನ್ನು ಸಂಘಟಿಸಲಾಗಿದೆ. ಇದೇ ಆರ್‌ಎಸ್‌ಎಸ್‌ ನೂರು ವರ್ಷಗಳ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಪ್ರತಿಜ್ಞೆಗೈದಿದ್ದನ್ನು ನಾವು ಸ್ಮರಿಸಬೇಕಿದೆ. ಈ ಕಾರ್ಯಕ್ರಮದ  ರೂವಾರಿ ಗೋವಿಂದಾಚಾರ್ಯ ಒಂದು ಕಾಲದಲ್ಲಿ ಭಾಜಪದಸೂತ್ರಧಾರರಾಗಿದು ಈಗ ಆರೆಸ್ಸೆಸ್‌ ಅಣತಿ ಮೇರೆಗೆ ಇನ್ನೊಂದು ಪಾತ್ರ ನಿರ್ವಹಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಿಸಬೇಕೆಂಬ ಮೊದಲಮಾತು ಶುರು ಮಾಡಿದ್ದೇ ಈ ಗೋವಿಂದಾಚಾರ್ಯ. ಈ ಸದರಿ ಸಮ್ಮೇಳನವು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಗೌಪ್ಯ ಅಜೆಂಡಾವನ್ನು ಹೊಂದಿದ್ದು , ಅದರಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಭಾಜಪ/ ಆರೆಸ್ಸೆಸ್ಸಿಗರು ಅಥವಾ ತೆರೆಮೆರೆಯಲ್ಲಿ  ಆರೆಸ್ಸೆಸ್‌ ಬೆಂಬಲಿಸುವ ಮೂಲಕ  ಸಂವಿಧಾನವನ್ನು ಬುಡಮೇಲು ಮಾಡುವ ಶಕ್ತಿಗಳೇ ಆಗಿವೆ .  ಈ ಅಜೆಂಡವೂ ಅವರ ಸಾರ್ವಜನಿಕ ಹೇಳಿಕೆಗಳು , ಸಿದ್ಧತೆಗಳು ಮತ್ತು ಕ್ರಿಯೆಗಳು ನಿಚ್ಚಳವಾಗಿದೆ. ಇದು ಅವರ ಹಿಂದುತ್ವ ನಿಲುವನ್ನು ಢಾಳಾಗಿ ತೋರಿಸಿದೆ.

ಈ  ಸಮ್ಮೇಳನವೂ ಮಾರುವೇಶದ ಆರೆಸ್ಸೆಸ್‌ನ ದೇಶ ವಿಭಜನೆ  ಕಾರ್ಯಕ್ರಮ ಎಂಬುದು ಸ್ಪಷ್ಟವಾಗಿದೆ. ಭಾರತೀಯ ಎಂದರೆ ಹಿಂದೂ ಅದರಲ್ಲೂ ಹಿಂದೂ ಬ್ರಾಹ್ಮಣೀಯ ಸಂಸ್ಕೃತಿ ಎಂಬಾ ಆರೆಸ್ಸೆಸ್ಸಿನ ಸಿದ್ಧಾಂತ ವನ್ನು ಪ್ರಚಾರ ಮಾಡುವುದೇ ಈ ಸಮಾವೇಶದ ಉದ್ದೇಶವಾಗಿದೆ. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯು ಬಸವರಾಜ ಪಾಟಿಲ ಸೇಡಂ ಎಂಬ ಕಟ್ಟಾ ಆರ್ ಎಸ್ ಎಸ್ ನ  ನಾಯಕರು ಇದರ ಪ್ರಮುಖ ಸಂಘಟಕರದ್ದು. ಭಾರತೀಯ ಸಂಸ್ಕೃತಿ ಉತ್ಸವ ಎಂಬುದು ತೋರಿಕೆಯ ಹೆಸರು. 240 ಎಕರೆ ಜಾಗದಲ್ಲಿ ಒಂಬತ್ತು ದಿನಗಳ ಕಾಲ ನಡೆಯುವ ಉತ್ಸವವು ಹಿಂದೂ ಧರ್ಮ ಉಳಿಸಲು ಅಂದರೆ ಸನಾತನ ವ್ಯವಸ್ಥೆ ಉಳಿಸಲು ನಡೆಸಲಾಗುತ್ತಿರುವ ಉತ್ಸವವಾಗಿದೆ. ಇದೊಂದು ಆರ್ ಎಸ್ ಎಸ್ ನ ನೂರನೇ ವರ್ಷದ ಆಚರಣೆಯ ಆರಂಭದ ಭಿನ್ನರೂಪ. ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರವೇಶದ ಭಾಗವಾಗಿ ಆರ್ ಎಸ್ ಎಸ್ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ,  ಕಲಬುರ್ಗಿಯನ್ನು ಹೆಬ್ಬಾಗಿಲು ಮಾಡಿಕೊಂಡಿದೆ. ಈ ಉದ್ಧೇಶಕ್ಕಾಗಿಯೇ “ಭಾರತೀಯ ಸಂಸ್ಕೃತಿ ಉತ್ಸವ ಎಂಬ ಹೆಸರಿನ  “ಪುರೋಹಿತಶಾಹಿತ್ವದ ಉತ್ಸವ” ನಡೆಸಲಾಗುತ್ತಿದೆ. ಪುರೋಹಿತಶಾಹಿಗಳಿಗೆ ಗೌರವಿಸುವ ಸಂವಿಧಾನ (ಮನುಸ್ಮೃತಿ)ಕ್ಕಾಗಿ ಈ ಉತ್ಸವ. ಸಂವಿಧಾನವನ್ನು ಗೌರವಿಸಿ ಮಾನವೀಯತೆ, ಸೌಹಾರ್ದತೆ, ಶಾಂತಿ , ಬಂಧುತ್ವ, ಬಹುತ್ವ , ಬಹು ಸಂಸ್ಕೃತಿ, ಬಹುಭಾಷೆ ಮತ್ತು ಸಮಗ್ರತೆಯನ್ನು ಬಯಸುವವರೆಲ್ಲರೂ ಈ ಉತ್ಸವನ್ನುನ ಧಿಕ್ಕರಿಸಬೇಕಿದೆ.

ಈಗಾಗಲೇ, ಸೇಡಂ ನಲ್ಲಿ  ನಡೆಯಲಿರುವ  ಈ ಭಾರತೀಯ ಸಂಸ್ಕೃತಿ ಕಾರ್ಯಕ್ರಮದಲ್ಲಿ  ಭಾಗವಹಿಸುತ್ತಿಲ್ಲ ಎಂದು ತಮ್ಮ X ಖಾತೆಯಲ್ಲಿ ಸನ್ಮಾನ್ಯ ಮುಖ್ಯ ಮಂತ್ರಗಳು  ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ಅವರು ಮುಖ್ಯ ಮಂತ್ರಿಯಾಗಿ  ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಹೆಸರಿನಲ್ಲಿ ತೆಗೆದುಕೊಂಡ ಪ್ರತಿಜ್ಞೆಗೆ ಅನುಗುಣವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರೂ ನಾನು ಭಾಗವಹಿಸಲಾರೆ ಎಂದು ಬಹಿರಂಗವಾಗಿ ಸ್ಪಷ್ಟ ಮಾಡಿದ್ದಾರೆ

ಆದರೆ ಈ  ಕಾರ್ಯಕ್ರಮದ  ಆಹ್ವಾನ ಪತ್ರಿಕೆಯಲ್ಲಿ ಇರುವುದು ಕೇವಲ  ಮುಖ್ಯಮಂತ್ರಿಯವರ  ಹೆಸರು, ಪ್ರಿಯಾಂಕ ಖರ್ಗೆಯವರ ಹೆಸರು ಮಾತ್ರವಲ್ಲ. ಸಂಘಟಕರು ಹೊರತಂದಿರುವ 52 ಪುಟಗಳ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಮಂತ್ರಿಗಳ ಸಚಿವ ಸಂಪುಟದ ಭಾಗವಾಗಿರುವ ಹಲವು ಮಂತ್ರಿಗಳು, ಸಂಸದರು  ಮತ್ತು   ಆ ಪ್ರದೇಶದ ಕಾಂಗ್ರೆಸ್‌ ನ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ  ಎಂದು  ಅವರ ಹೆಸರುಗಳನ್ನು ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ  ಈ ಎಲ್ಲಾ ಹೆಸರಗಳನ್ನು ಅವರ ಗಮನಕ್ಕೆ ತಾರದೆ ಮತ್ತು ಒಪ್ಪಿಗೆಯಿಲ್ಲದೆ ಹಾಕಲಾಗಿದೆ ಎಂಬ ಮಾತು ಕೇಳು ಬರುತ್ತಿದೆ.  ಇಷ್ಟೇ ಅಲ್ಲದೆ , ಕಾರ್ಯಕ್ರಮದ ಸಿದ್ಧತೆಗಾಗಿ ಇಲಾಖಾವಾರು ಸಭೆಗಳು ನಡೆದಿವೆ ಎಂಬ ಮಾಹಿತಿ ಕೂಡಾ ಇದೆ .

ಹಾಗಾದರೆ ಕೇಳದೇ ಹೆಸರು ಬಳಸಿಕೊಂಡು   ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿರುವ  ಸಂಘಟಕರ ಮೇಲೆ  ಕಾನೂನು  ಕ್ರಮ ಜರುಗಿಸಬೇಕೆಂದು ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ.  ಕಾಂಗ್ರೆಸ್‌ನ ಈ  ಮೃದು ಹಿಂದುತ್ವದ ಧೋರಣೆ  ರಾಜ್ಯದ  ಶಾಂತಿ ಸೌಹಾರ್ದತೆಗೆ ಧಕ್ಕೆಯ ಸಂಗತಿಯಾಗಿದೆ. ಆದರೂ  ಆಡಳಿತರೂಢ ಕಾಂಗೆಸ್‌ ಪಕ್ಷವೂ ಏಕೆ  ನಿರ್ಲಕ್ಷ್ಯವಹಿಸುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ? ಜೊತೆಗೆ ಇದು ಸೈದ್ಧಾಂತಿಕ ನಿಲುವಿನ ಪ್ರಶ್ನೆಯಾಗಿದ್ದು ಒಂದು ಸಮ್ಮೇಳನದ ಪೂರ್ವಾಪರಗಳನ್ನು ತಿಳಿಯದೆ ಕಾಂಗ್ರೆಸ್‌ ಸರಕಾರದ ಸಚಿವರು ಮತ್ತು ನಾಯಕರು ಈ ಸಮ್ಮೇಳನಕ್ಕೆ ಹೋಗಲು ಹೇಗೆ ಒಪ್ಪಿಕೊಂಡರು ಎಂಬುದು ಪ್ರಶ್ನೆಯಾಗಿದೆ ?

ಈ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿದರೆ ಕಾಂಗ್ರೆಸ್‌ ನಾಯಕರನ್ನು ನಿರ್ದಿಷ್ಟ ಕಾರ್ಯಕ್ರಮಗಳಿಗೆ ಆಹ್ವಾನಿಸಿರುವುದು ಸ್ಪಷ್ಠ. ಕೇಳದೇ, ಒಪ್ಪಿಗೆ ಪಡೆಯದೇ ಇಂಥಾ ದೊಡ್ಡ ಸಮ್ಮೇಳದ ಆಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸುವುದು ಸಾಧ್ಯವೇ ಇಲ್ಲ. ಕಾಂಗ್ರೆಸಿಗರಿಗೆ ಕನಿಷ್ಠ ತಮ್ಮ ಪಕ್ಷದ ಸೈದ್ಧಾಂತಿಕ ನಿಲುವು,   ಪರಂಪರೆ ಬಗ್ಗೆ ಕನಿಷ್ಠ ತಿಳುವಳಿಕೆ ಇದ್ದಿದ್ದರೆ ಇಂಥಾ ಅಭಾಸಕ್ಕೆಡೆಯಾಗುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿಯವರು ಸದಾ ಸಂವಿಧಾನವನ್ನು ಎತ್ತಿ ಹಿಡಿಯುವ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಮಾದರಿಯಾಗಬೇಕಿತ್ತು. ಹಾಗಾಗದಿರುವುದು ವಿಷಾದನೀಯ ಸಂಗತಿಯಾಗಿದೆ

240 ಎಕರೆ ಬೆಳೆಯುವ ಭೂಮಿಯಿಂದ ತಾತ್ಪೂರ್ತಿಕವಾಗಿ ರೈತರನ್ನು ಒಕ್ಕಲೆಬ್ಬಿಸಿ ಲಕ್ಷಾಂತರ ಜನರನ್ನು ಸೇರಿಸಿ ವಾತಾವರಣ ಕಲುಷಿತ ಮಾಡುತ್ತಿದ್ದಾರೆ. ಇದಕ್ಕೇನು ಕ್ರಮ ಕೈಗೊಳ್ಳಲಾಗುತ್ತಿದೆ ಈ ಸರ್ಕಾರ ಉತ್ತರಿಸಬೇಕು

ಈ ಎಲ್ಲಾ ಕಾರಣಗಳಿಂದ ಸರ್ಕಾರದ ಎಲ್ಲಾ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರರು  ಈ ಕೋಮುವಾದೀ ಸಮ್ಮೇಳನದಲ್ಲಿ ಭಾಗವಹಿಸಬಾರದೆಂದು ನಾವು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ. ಜೊತೆಗೆ,  ಈ ಸಮ್ಮೇಳನದಲ್ಲಿ ಭಾಗಿಯಾಗುವ ನಿರ್ಧಾರದಿಂದ  ಸಚಿವರು ಮತ್ತು ಕಾಂಗ್ರೆ ಸ್‌ ನಾಯಕರು ಹಿಂದೆ ಸರಿದರೆ ಮಾತ್ರ ಸಾಲದು, ಹಿಂದುತ್ವದ ಹಲವು ಮುಖಗಳ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸೈದ್ಧಾಂತಿಕ ಕಾರ್ಯಕ್ರಮವನ್ನು  ಜನಾಂದೋಲನವಾಗಿ ಕಾಂಗ್ರೆಸ್‌ ನಾಯಕರು ರೂಪಿಸಬೇಕೆಂದು  ನಾವು ಒತ್ತಾಯಿಸುತ್ತೇವೆ.

ರಾಜ್ಯದ ಜನಗಳಿಗೆ ಕೋಮುವಾದಿ ವಿಷಾನಿಲ ಉಣಿಸಿ ಮುಗ್ಧ ಶೂದ್ರ ಮಕ್ಕಳ ಮನೋಸ್ವಾಸ್ಥ್ಯವನ್ನು ಹಾಳುಗೆಡಹುತ್ತಿದ್ದಾರೆ. ಅಲ್ಲಿ ಈಗಾಗಲೇ ನೂರಾರು ಶೂದ್ರರನ್ನು ಹಗಲು ರಾತ್ರಿ ದುಡಿಸಿಕೊಂಡು ಸನಾತನಿಗಳ ಸೇವೆಗೆ ಅವರ ಚರ್ಮವನ್ನು ರತ್ನಗಂಬಳಿ ಮಾಡಿ ಹಾಸಲಾಗುತ್ತಿದೆ ಎಂಬುದನ್ನು ರಾಜ್ಯದ ಎಚ್ಚರಿಕೆಯಿಂದ ಗಮನಿಸಬೇಕು ಮತ್ತದನ್ನು ವಿರೋಧಿಸಬೇಕು ಎಂಬುದು ನಮ್ಮ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ…ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...