Homeಕರ್ನಾಟಕಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ...

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ ಕೋಮುವಾದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಸಂವಿಧಾನ ಜಾರಿಯಾದ ನಂತರ , ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆಯಿಲ್ಲದೆ ಒಂದಲ್ಲಾ ಒಂದು ಬಗೆಯಲ್ಲಿ ಸಂವಿಧಾನವನ್ನು ಗೌಣಗೊಳಿಸಿ  ಧರ್ಮ ಹಾಗು ಕೋಮುವಾದದ ನೆಲೆಯಲ್ಲಿ ಭಾರತವನ್ನು ಒಂದು ಜನಾಂಗೀಯ ರಾಷ್ಟ್ರವನ್ನಾಗಿಸಲು ನಿರಂತರವಾಗಿ ಒಡಕಿನ ರಾಜಕೀಯ ಮಾಡುತ್ತಾ ಬಂದಿರುವ  ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು   ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದೆ .

ಇದೇ ಕೋಮುವಾದಿ ಆರೆಸ್ಸೆಸಿನ ಹೊಕ್ಕುಳ ಬಳ್ಳಿಯೊಂದು ಸೇಡಂನಲ್ಲಿ ಜನವರಿ ೨೯ರಿಂದ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನವನ್ನು ಸಂಘಟಿಸುತ್ತಿದೆ. ಆರೆಸ್ಸೆಸ್ಸಿನ   ಶತಮಾನೋತ್ಸವ ಸಂದರ್ಭದ ಪೀಠಿಕಾ ಕಾರ್ಯಕ್ರಮದಂತೆ ಇದನ್ನು ಸಂಘಟಿಸಲಾಗಿದೆ. ಇದೇ ಆರ್‌ಎಸ್‌ಎಸ್‌ ನೂರು ವರ್ಷಗಳ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಪ್ರತಿಜ್ಞೆಗೈದಿದ್ದನ್ನು ನಾವು ಸ್ಮರಿಸಬೇಕಿದೆ. ಈ ಕಾರ್ಯಕ್ರಮದ  ರೂವಾರಿ ಗೋವಿಂದಾಚಾರ್ಯ ಒಂದು ಕಾಲದಲ್ಲಿ ಭಾಜಪದಸೂತ್ರಧಾರರಾಗಿದು ಈಗ ಆರೆಸ್ಸೆಸ್‌ ಅಣತಿ ಮೇರೆಗೆ ಇನ್ನೊಂದು ಪಾತ್ರ ನಿರ್ವಹಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಿಸಬೇಕೆಂಬ ಮೊದಲಮಾತು ಶುರು ಮಾಡಿದ್ದೇ ಈ ಗೋವಿಂದಾಚಾರ್ಯ. ಈ ಸದರಿ ಸಮ್ಮೇಳನವು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಗೌಪ್ಯ ಅಜೆಂಡಾವನ್ನು ಹೊಂದಿದ್ದು , ಅದರಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಭಾಜಪ/ ಆರೆಸ್ಸೆಸ್ಸಿಗರು ಅಥವಾ ತೆರೆಮೆರೆಯಲ್ಲಿ  ಆರೆಸ್ಸೆಸ್‌ ಬೆಂಬಲಿಸುವ ಮೂಲಕ  ಸಂವಿಧಾನವನ್ನು ಬುಡಮೇಲು ಮಾಡುವ ಶಕ್ತಿಗಳೇ ಆಗಿವೆ .  ಈ ಅಜೆಂಡವೂ ಅವರ ಸಾರ್ವಜನಿಕ ಹೇಳಿಕೆಗಳು , ಸಿದ್ಧತೆಗಳು ಮತ್ತು ಕ್ರಿಯೆಗಳು ನಿಚ್ಚಳವಾಗಿದೆ. ಇದು ಅವರ ಹಿಂದುತ್ವ ನಿಲುವನ್ನು ಢಾಳಾಗಿ ತೋರಿಸಿದೆ.

ಈ  ಸಮ್ಮೇಳನವೂ ಮಾರುವೇಶದ ಆರೆಸ್ಸೆಸ್‌ನ ದೇಶ ವಿಭಜನೆ  ಕಾರ್ಯಕ್ರಮ ಎಂಬುದು ಸ್ಪಷ್ಟವಾಗಿದೆ. ಭಾರತೀಯ ಎಂದರೆ ಹಿಂದೂ ಅದರಲ್ಲೂ ಹಿಂದೂ ಬ್ರಾಹ್ಮಣೀಯ ಸಂಸ್ಕೃತಿ ಎಂಬಾ ಆರೆಸ್ಸೆಸ್ಸಿನ ಸಿದ್ಧಾಂತ ವನ್ನು ಪ್ರಚಾರ ಮಾಡುವುದೇ ಈ ಸಮಾವೇಶದ ಉದ್ದೇಶವಾಗಿದೆ. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯು ಬಸವರಾಜ ಪಾಟಿಲ ಸೇಡಂ ಎಂಬ ಕಟ್ಟಾ ಆರ್ ಎಸ್ ಎಸ್ ನ  ನಾಯಕರು ಇದರ ಪ್ರಮುಖ ಸಂಘಟಕರದ್ದು. ಭಾರತೀಯ ಸಂಸ್ಕೃತಿ ಉತ್ಸವ ಎಂಬುದು ತೋರಿಕೆಯ ಹೆಸರು. 240 ಎಕರೆ ಜಾಗದಲ್ಲಿ ಒಂಬತ್ತು ದಿನಗಳ ಕಾಲ ನಡೆಯುವ ಉತ್ಸವವು ಹಿಂದೂ ಧರ್ಮ ಉಳಿಸಲು ಅಂದರೆ ಸನಾತನ ವ್ಯವಸ್ಥೆ ಉಳಿಸಲು ನಡೆಸಲಾಗುತ್ತಿರುವ ಉತ್ಸವವಾಗಿದೆ. ಇದೊಂದು ಆರ್ ಎಸ್ ಎಸ್ ನ ನೂರನೇ ವರ್ಷದ ಆಚರಣೆಯ ಆರಂಭದ ಭಿನ್ನರೂಪ. ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರವೇಶದ ಭಾಗವಾಗಿ ಆರ್ ಎಸ್ ಎಸ್ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ,  ಕಲಬುರ್ಗಿಯನ್ನು ಹೆಬ್ಬಾಗಿಲು ಮಾಡಿಕೊಂಡಿದೆ. ಈ ಉದ್ಧೇಶಕ್ಕಾಗಿಯೇ “ಭಾರತೀಯ ಸಂಸ್ಕೃತಿ ಉತ್ಸವ ಎಂಬ ಹೆಸರಿನ  “ಪುರೋಹಿತಶಾಹಿತ್ವದ ಉತ್ಸವ” ನಡೆಸಲಾಗುತ್ತಿದೆ. ಪುರೋಹಿತಶಾಹಿಗಳಿಗೆ ಗೌರವಿಸುವ ಸಂವಿಧಾನ (ಮನುಸ್ಮೃತಿ)ಕ್ಕಾಗಿ ಈ ಉತ್ಸವ. ಸಂವಿಧಾನವನ್ನು ಗೌರವಿಸಿ ಮಾನವೀಯತೆ, ಸೌಹಾರ್ದತೆ, ಶಾಂತಿ , ಬಂಧುತ್ವ, ಬಹುತ್ವ , ಬಹು ಸಂಸ್ಕೃತಿ, ಬಹುಭಾಷೆ ಮತ್ತು ಸಮಗ್ರತೆಯನ್ನು ಬಯಸುವವರೆಲ್ಲರೂ ಈ ಉತ್ಸವನ್ನುನ ಧಿಕ್ಕರಿಸಬೇಕಿದೆ.

ಈಗಾಗಲೇ, ಸೇಡಂ ನಲ್ಲಿ  ನಡೆಯಲಿರುವ  ಈ ಭಾರತೀಯ ಸಂಸ್ಕೃತಿ ಕಾರ್ಯಕ್ರಮದಲ್ಲಿ  ಭಾಗವಹಿಸುತ್ತಿಲ್ಲ ಎಂದು ತಮ್ಮ X ಖಾತೆಯಲ್ಲಿ ಸನ್ಮಾನ್ಯ ಮುಖ್ಯ ಮಂತ್ರಗಳು  ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ಅವರು ಮುಖ್ಯ ಮಂತ್ರಿಯಾಗಿ  ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಹೆಸರಿನಲ್ಲಿ ತೆಗೆದುಕೊಂಡ ಪ್ರತಿಜ್ಞೆಗೆ ಅನುಗುಣವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರೂ ನಾನು ಭಾಗವಹಿಸಲಾರೆ ಎಂದು ಬಹಿರಂಗವಾಗಿ ಸ್ಪಷ್ಟ ಮಾಡಿದ್ದಾರೆ

ಆದರೆ ಈ  ಕಾರ್ಯಕ್ರಮದ  ಆಹ್ವಾನ ಪತ್ರಿಕೆಯಲ್ಲಿ ಇರುವುದು ಕೇವಲ  ಮುಖ್ಯಮಂತ್ರಿಯವರ  ಹೆಸರು, ಪ್ರಿಯಾಂಕ ಖರ್ಗೆಯವರ ಹೆಸರು ಮಾತ್ರವಲ್ಲ. ಸಂಘಟಕರು ಹೊರತಂದಿರುವ 52 ಪುಟಗಳ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಮಂತ್ರಿಗಳ ಸಚಿವ ಸಂಪುಟದ ಭಾಗವಾಗಿರುವ ಹಲವು ಮಂತ್ರಿಗಳು, ಸಂಸದರು  ಮತ್ತು   ಆ ಪ್ರದೇಶದ ಕಾಂಗ್ರೆಸ್‌ ನ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ  ಎಂದು  ಅವರ ಹೆಸರುಗಳನ್ನು ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ  ಈ ಎಲ್ಲಾ ಹೆಸರಗಳನ್ನು ಅವರ ಗಮನಕ್ಕೆ ತಾರದೆ ಮತ್ತು ಒಪ್ಪಿಗೆಯಿಲ್ಲದೆ ಹಾಕಲಾಗಿದೆ ಎಂಬ ಮಾತು ಕೇಳು ಬರುತ್ತಿದೆ.  ಇಷ್ಟೇ ಅಲ್ಲದೆ , ಕಾರ್ಯಕ್ರಮದ ಸಿದ್ಧತೆಗಾಗಿ ಇಲಾಖಾವಾರು ಸಭೆಗಳು ನಡೆದಿವೆ ಎಂಬ ಮಾಹಿತಿ ಕೂಡಾ ಇದೆ .

ಹಾಗಾದರೆ ಕೇಳದೇ ಹೆಸರು ಬಳಸಿಕೊಂಡು   ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿರುವ  ಸಂಘಟಕರ ಮೇಲೆ  ಕಾನೂನು  ಕ್ರಮ ಜರುಗಿಸಬೇಕೆಂದು ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ.  ಕಾಂಗ್ರೆಸ್‌ನ ಈ  ಮೃದು ಹಿಂದುತ್ವದ ಧೋರಣೆ  ರಾಜ್ಯದ  ಶಾಂತಿ ಸೌಹಾರ್ದತೆಗೆ ಧಕ್ಕೆಯ ಸಂಗತಿಯಾಗಿದೆ. ಆದರೂ  ಆಡಳಿತರೂಢ ಕಾಂಗೆಸ್‌ ಪಕ್ಷವೂ ಏಕೆ  ನಿರ್ಲಕ್ಷ್ಯವಹಿಸುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ? ಜೊತೆಗೆ ಇದು ಸೈದ್ಧಾಂತಿಕ ನಿಲುವಿನ ಪ್ರಶ್ನೆಯಾಗಿದ್ದು ಒಂದು ಸಮ್ಮೇಳನದ ಪೂರ್ವಾಪರಗಳನ್ನು ತಿಳಿಯದೆ ಕಾಂಗ್ರೆಸ್‌ ಸರಕಾರದ ಸಚಿವರು ಮತ್ತು ನಾಯಕರು ಈ ಸಮ್ಮೇಳನಕ್ಕೆ ಹೋಗಲು ಹೇಗೆ ಒಪ್ಪಿಕೊಂಡರು ಎಂಬುದು ಪ್ರಶ್ನೆಯಾಗಿದೆ ?

ಈ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿದರೆ ಕಾಂಗ್ರೆಸ್‌ ನಾಯಕರನ್ನು ನಿರ್ದಿಷ್ಟ ಕಾರ್ಯಕ್ರಮಗಳಿಗೆ ಆಹ್ವಾನಿಸಿರುವುದು ಸ್ಪಷ್ಠ. ಕೇಳದೇ, ಒಪ್ಪಿಗೆ ಪಡೆಯದೇ ಇಂಥಾ ದೊಡ್ಡ ಸಮ್ಮೇಳದ ಆಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸುವುದು ಸಾಧ್ಯವೇ ಇಲ್ಲ. ಕಾಂಗ್ರೆಸಿಗರಿಗೆ ಕನಿಷ್ಠ ತಮ್ಮ ಪಕ್ಷದ ಸೈದ್ಧಾಂತಿಕ ನಿಲುವು,   ಪರಂಪರೆ ಬಗ್ಗೆ ಕನಿಷ್ಠ ತಿಳುವಳಿಕೆ ಇದ್ದಿದ್ದರೆ ಇಂಥಾ ಅಭಾಸಕ್ಕೆಡೆಯಾಗುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿಯವರು ಸದಾ ಸಂವಿಧಾನವನ್ನು ಎತ್ತಿ ಹಿಡಿಯುವ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಮಾದರಿಯಾಗಬೇಕಿತ್ತು. ಹಾಗಾಗದಿರುವುದು ವಿಷಾದನೀಯ ಸಂಗತಿಯಾಗಿದೆ

240 ಎಕರೆ ಬೆಳೆಯುವ ಭೂಮಿಯಿಂದ ತಾತ್ಪೂರ್ತಿಕವಾಗಿ ರೈತರನ್ನು ಒಕ್ಕಲೆಬ್ಬಿಸಿ ಲಕ್ಷಾಂತರ ಜನರನ್ನು ಸೇರಿಸಿ ವಾತಾವರಣ ಕಲುಷಿತ ಮಾಡುತ್ತಿದ್ದಾರೆ. ಇದಕ್ಕೇನು ಕ್ರಮ ಕೈಗೊಳ್ಳಲಾಗುತ್ತಿದೆ ಈ ಸರ್ಕಾರ ಉತ್ತರಿಸಬೇಕು

ಈ ಎಲ್ಲಾ ಕಾರಣಗಳಿಂದ ಸರ್ಕಾರದ ಎಲ್ಲಾ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರರು  ಈ ಕೋಮುವಾದೀ ಸಮ್ಮೇಳನದಲ್ಲಿ ಭಾಗವಹಿಸಬಾರದೆಂದು ನಾವು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ. ಜೊತೆಗೆ,  ಈ ಸಮ್ಮೇಳನದಲ್ಲಿ ಭಾಗಿಯಾಗುವ ನಿರ್ಧಾರದಿಂದ  ಸಚಿವರು ಮತ್ತು ಕಾಂಗ್ರೆ ಸ್‌ ನಾಯಕರು ಹಿಂದೆ ಸರಿದರೆ ಮಾತ್ರ ಸಾಲದು, ಹಿಂದುತ್ವದ ಹಲವು ಮುಖಗಳ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸೈದ್ಧಾಂತಿಕ ಕಾರ್ಯಕ್ರಮವನ್ನು  ಜನಾಂದೋಲನವಾಗಿ ಕಾಂಗ್ರೆಸ್‌ ನಾಯಕರು ರೂಪಿಸಬೇಕೆಂದು  ನಾವು ಒತ್ತಾಯಿಸುತ್ತೇವೆ.

ರಾಜ್ಯದ ಜನಗಳಿಗೆ ಕೋಮುವಾದಿ ವಿಷಾನಿಲ ಉಣಿಸಿ ಮುಗ್ಧ ಶೂದ್ರ ಮಕ್ಕಳ ಮನೋಸ್ವಾಸ್ಥ್ಯವನ್ನು ಹಾಳುಗೆಡಹುತ್ತಿದ್ದಾರೆ. ಅಲ್ಲಿ ಈಗಾಗಲೇ ನೂರಾರು ಶೂದ್ರರನ್ನು ಹಗಲು ರಾತ್ರಿ ದುಡಿಸಿಕೊಂಡು ಸನಾತನಿಗಳ ಸೇವೆಗೆ ಅವರ ಚರ್ಮವನ್ನು ರತ್ನಗಂಬಳಿ ಮಾಡಿ ಹಾಸಲಾಗುತ್ತಿದೆ ಎಂಬುದನ್ನು ರಾಜ್ಯದ ಎಚ್ಚರಿಕೆಯಿಂದ ಗಮನಿಸಬೇಕು ಮತ್ತದನ್ನು ವಿರೋಧಿಸಬೇಕು ಎಂಬುದು ನಮ್ಮ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ…ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...