Homeಕರ್ನಾಟಕಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ...

ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

- Advertisement -
- Advertisement -

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ ಕೋಮುವಾದಿ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು  ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹಗಲಿರುಳು ಕಾರ್ಯನಿರ್ವಹಿಸುತ್ತಿದೆ. ಸಂವಿಧಾನ ಜಾರಿಯಾದ ನಂತರ , ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆಯಿಲ್ಲದೆ ಒಂದಲ್ಲಾ ಒಂದು ಬಗೆಯಲ್ಲಿ ಸಂವಿಧಾನವನ್ನು ಗೌಣಗೊಳಿಸಿ  ಧರ್ಮ ಹಾಗು ಕೋಮುವಾದದ ನೆಲೆಯಲ್ಲಿ ಭಾರತವನ್ನು ಒಂದು ಜನಾಂಗೀಯ ರಾಷ್ಟ್ರವನ್ನಾಗಿಸಲು ನಿರಂತರವಾಗಿ ಒಡಕಿನ ರಾಜಕೀಯ ಮಾಡುತ್ತಾ ಬಂದಿರುವ  ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯು   ಇದೀಗ ತನ್ನ ಶತಮಾನೋತ್ಸವ ಕಾರ್ಯಕ್ರಮಗಳಿಗೆ ದೇಶಾದ್ಯಂತ ಚಾಲನೆ ನೀಡಿದೆ .

ಇದೇ ಕೋಮುವಾದಿ ಆರೆಸ್ಸೆಸಿನ ಹೊಕ್ಕುಳ ಬಳ್ಳಿಯೊಂದು ಸೇಡಂನಲ್ಲಿ ಜನವರಿ ೨೯ರಿಂದ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನವನ್ನು ಸಂಘಟಿಸುತ್ತಿದೆ. ಆರೆಸ್ಸೆಸ್ಸಿನ   ಶತಮಾನೋತ್ಸವ ಸಂದರ್ಭದ ಪೀಠಿಕಾ ಕಾರ್ಯಕ್ರಮದಂತೆ ಇದನ್ನು ಸಂಘಟಿಸಲಾಗಿದೆ. ಇದೇ ಆರ್‌ಎಸ್‌ಎಸ್‌ ನೂರು ವರ್ಷಗಳ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಪ್ರತಿಜ್ಞೆಗೈದಿದ್ದನ್ನು ನಾವು ಸ್ಮರಿಸಬೇಕಿದೆ. ಈ ಕಾರ್ಯಕ್ರಮದ  ರೂವಾರಿ ಗೋವಿಂದಾಚಾರ್ಯ ಒಂದು ಕಾಲದಲ್ಲಿ ಭಾಜಪದಸೂತ್ರಧಾರರಾಗಿದು ಈಗ ಆರೆಸ್ಸೆಸ್‌ ಅಣತಿ ಮೇರೆಗೆ ಇನ್ನೊಂದು ಪಾತ್ರ ನಿರ್ವಹಿಸುತ್ತಿದ್ದಾರೆ.

ಸಂವಿಧಾನವನ್ನು ಬದಲಿಸಬೇಕೆಂಬ ಮೊದಲಮಾತು ಶುರು ಮಾಡಿದ್ದೇ ಈ ಗೋವಿಂದಾಚಾರ್ಯ. ಈ ಸದರಿ ಸಮ್ಮೇಳನವು ಹಿಂದೂ ರಾಷ್ಟ್ರವನ್ನು ಸ್ಥಾಪಿಸುವ ಗೌಪ್ಯ ಅಜೆಂಡಾವನ್ನು ಹೊಂದಿದ್ದು , ಅದರಲ್ಲಿ ಭಾಗವಹಿಸುತ್ತಿರುವ ಎಲ್ಲರೂ ಭಾಜಪ/ ಆರೆಸ್ಸೆಸ್ಸಿಗರು ಅಥವಾ ತೆರೆಮೆರೆಯಲ್ಲಿ  ಆರೆಸ್ಸೆಸ್‌ ಬೆಂಬಲಿಸುವ ಮೂಲಕ  ಸಂವಿಧಾನವನ್ನು ಬುಡಮೇಲು ಮಾಡುವ ಶಕ್ತಿಗಳೇ ಆಗಿವೆ .  ಈ ಅಜೆಂಡವೂ ಅವರ ಸಾರ್ವಜನಿಕ ಹೇಳಿಕೆಗಳು , ಸಿದ್ಧತೆಗಳು ಮತ್ತು ಕ್ರಿಯೆಗಳು ನಿಚ್ಚಳವಾಗಿದೆ. ಇದು ಅವರ ಹಿಂದುತ್ವ ನಿಲುವನ್ನು ಢಾಳಾಗಿ ತೋರಿಸಿದೆ.

ಈ  ಸಮ್ಮೇಳನವೂ ಮಾರುವೇಶದ ಆರೆಸ್ಸೆಸ್‌ನ ದೇಶ ವಿಭಜನೆ  ಕಾರ್ಯಕ್ರಮ ಎಂಬುದು ಸ್ಪಷ್ಟವಾಗಿದೆ. ಭಾರತೀಯ ಎಂದರೆ ಹಿಂದೂ ಅದರಲ್ಲೂ ಹಿಂದೂ ಬ್ರಾಹ್ಮಣೀಯ ಸಂಸ್ಕೃತಿ ಎಂಬಾ ಆರೆಸ್ಸೆಸ್ಸಿನ ಸಿದ್ಧಾಂತ ವನ್ನು ಪ್ರಚಾರ ಮಾಡುವುದೇ ಈ ಸಮಾವೇಶದ ಉದ್ದೇಶವಾಗಿದೆ. ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯು ಬಸವರಾಜ ಪಾಟಿಲ ಸೇಡಂ ಎಂಬ ಕಟ್ಟಾ ಆರ್ ಎಸ್ ಎಸ್ ನ  ನಾಯಕರು ಇದರ ಪ್ರಮುಖ ಸಂಘಟಕರದ್ದು. ಭಾರತೀಯ ಸಂಸ್ಕೃತಿ ಉತ್ಸವ ಎಂಬುದು ತೋರಿಕೆಯ ಹೆಸರು. 240 ಎಕರೆ ಜಾಗದಲ್ಲಿ ಒಂಬತ್ತು ದಿನಗಳ ಕಾಲ ನಡೆಯುವ ಉತ್ಸವವು ಹಿಂದೂ ಧರ್ಮ ಉಳಿಸಲು ಅಂದರೆ ಸನಾತನ ವ್ಯವಸ್ಥೆ ಉಳಿಸಲು ನಡೆಸಲಾಗುತ್ತಿರುವ ಉತ್ಸವವಾಗಿದೆ. ಇದೊಂದು ಆರ್ ಎಸ್ ಎಸ್ ನ ನೂರನೇ ವರ್ಷದ ಆಚರಣೆಯ ಆರಂಭದ ಭಿನ್ನರೂಪ. ದಕ್ಷಿಣ ಭಾರತದ ರಾಜ್ಯಗಳಿಗೆ ಪ್ರವೇಶದ ಭಾಗವಾಗಿ ಆರ್ ಎಸ್ ಎಸ್ ಕರ್ನಾಟಕವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ,  ಕಲಬುರ್ಗಿಯನ್ನು ಹೆಬ್ಬಾಗಿಲು ಮಾಡಿಕೊಂಡಿದೆ. ಈ ಉದ್ಧೇಶಕ್ಕಾಗಿಯೇ “ಭಾರತೀಯ ಸಂಸ್ಕೃತಿ ಉತ್ಸವ ಎಂಬ ಹೆಸರಿನ  “ಪುರೋಹಿತಶಾಹಿತ್ವದ ಉತ್ಸವ” ನಡೆಸಲಾಗುತ್ತಿದೆ. ಪುರೋಹಿತಶಾಹಿಗಳಿಗೆ ಗೌರವಿಸುವ ಸಂವಿಧಾನ (ಮನುಸ್ಮೃತಿ)ಕ್ಕಾಗಿ ಈ ಉತ್ಸವ. ಸಂವಿಧಾನವನ್ನು ಗೌರವಿಸಿ ಮಾನವೀಯತೆ, ಸೌಹಾರ್ದತೆ, ಶಾಂತಿ , ಬಂಧುತ್ವ, ಬಹುತ್ವ , ಬಹು ಸಂಸ್ಕೃತಿ, ಬಹುಭಾಷೆ ಮತ್ತು ಸಮಗ್ರತೆಯನ್ನು ಬಯಸುವವರೆಲ್ಲರೂ ಈ ಉತ್ಸವನ್ನುನ ಧಿಕ್ಕರಿಸಬೇಕಿದೆ.

ಈಗಾಗಲೇ, ಸೇಡಂ ನಲ್ಲಿ  ನಡೆಯಲಿರುವ  ಈ ಭಾರತೀಯ ಸಂಸ್ಕೃತಿ ಕಾರ್ಯಕ್ರಮದಲ್ಲಿ  ಭಾಗವಹಿಸುತ್ತಿಲ್ಲ ಎಂದು ತಮ್ಮ X ಖಾತೆಯಲ್ಲಿ ಸನ್ಮಾನ್ಯ ಮುಖ್ಯ ಮಂತ್ರಗಳು  ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ಅವರು ಮುಖ್ಯ ಮಂತ್ರಿಯಾಗಿ  ಅಧಿಕಾರ ಸ್ವೀಕರಿಸುವಾಗ ಸಂವಿಧಾನದ ಹೆಸರಿನಲ್ಲಿ ತೆಗೆದುಕೊಂಡ ಪ್ರತಿಜ್ಞೆಗೆ ಅನುಗುಣವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆ ಅವರೂ ನಾನು ಭಾಗವಹಿಸಲಾರೆ ಎಂದು ಬಹಿರಂಗವಾಗಿ ಸ್ಪಷ್ಟ ಮಾಡಿದ್ದಾರೆ

ಆದರೆ ಈ  ಕಾರ್ಯಕ್ರಮದ  ಆಹ್ವಾನ ಪತ್ರಿಕೆಯಲ್ಲಿ ಇರುವುದು ಕೇವಲ  ಮುಖ್ಯಮಂತ್ರಿಯವರ  ಹೆಸರು, ಪ್ರಿಯಾಂಕ ಖರ್ಗೆಯವರ ಹೆಸರು ಮಾತ್ರವಲ್ಲ. ಸಂಘಟಕರು ಹೊರತಂದಿರುವ 52 ಪುಟಗಳ ಆಹ್ವಾನ ಪತ್ರಿಕೆಯಲ್ಲಿ ಮುಖ್ಯ ಮಂತ್ರಿಗಳ ಸಚಿವ ಸಂಪುಟದ ಭಾಗವಾಗಿರುವ ಹಲವು ಮಂತ್ರಿಗಳು, ಸಂಸದರು  ಮತ್ತು   ಆ ಪ್ರದೇಶದ ಕಾಂಗ್ರೆಸ್‌ ನ ಹಿರಿಯ ನಾಯಕರೂ ಭಾಗವಹಿಸಲಿದ್ದಾರೆ  ಎಂದು  ಅವರ ಹೆಸರುಗಳನ್ನು ಮುದ್ರಿಸಲಾಗಿದೆ. ಆಮಂತ್ರಣ ಪತ್ರಿಕೆಯಲ್ಲಿ  ಈ ಎಲ್ಲಾ ಹೆಸರಗಳನ್ನು ಅವರ ಗಮನಕ್ಕೆ ತಾರದೆ ಮತ್ತು ಒಪ್ಪಿಗೆಯಿಲ್ಲದೆ ಹಾಕಲಾಗಿದೆ ಎಂಬ ಮಾತು ಕೇಳು ಬರುತ್ತಿದೆ.  ಇಷ್ಟೇ ಅಲ್ಲದೆ , ಕಾರ್ಯಕ್ರಮದ ಸಿದ್ಧತೆಗಾಗಿ ಇಲಾಖಾವಾರು ಸಭೆಗಳು ನಡೆದಿವೆ ಎಂಬ ಮಾಹಿತಿ ಕೂಡಾ ಇದೆ .

ಹಾಗಾದರೆ ಕೇಳದೇ ಹೆಸರು ಬಳಸಿಕೊಂಡು   ರಾಜ್ಯದ ಜನತೆಯನ್ನು ತಪ್ಪುದಾರಿಗೆ ಎಳೆಯುತ್ತಿರುವ  ಸಂಘಟಕರ ಮೇಲೆ  ಕಾನೂನು  ಕ್ರಮ ಜರುಗಿಸಬೇಕೆಂದು ನಾವೆಲ್ಲರೂ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ.  ಕಾಂಗ್ರೆಸ್‌ನ ಈ  ಮೃದು ಹಿಂದುತ್ವದ ಧೋರಣೆ  ರಾಜ್ಯದ  ಶಾಂತಿ ಸೌಹಾರ್ದತೆಗೆ ಧಕ್ಕೆಯ ಸಂಗತಿಯಾಗಿದೆ. ಆದರೂ  ಆಡಳಿತರೂಢ ಕಾಂಗೆಸ್‌ ಪಕ್ಷವೂ ಏಕೆ  ನಿರ್ಲಕ್ಷ್ಯವಹಿಸುತ್ತಿದೆ ಎಂಬುದು ನಮಗೆ ತಿಳಿಯುತ್ತಿಲ್ಲ? ಜೊತೆಗೆ ಇದು ಸೈದ್ಧಾಂತಿಕ ನಿಲುವಿನ ಪ್ರಶ್ನೆಯಾಗಿದ್ದು ಒಂದು ಸಮ್ಮೇಳನದ ಪೂರ್ವಾಪರಗಳನ್ನು ತಿಳಿಯದೆ ಕಾಂಗ್ರೆಸ್‌ ಸರಕಾರದ ಸಚಿವರು ಮತ್ತು ನಾಯಕರು ಈ ಸಮ್ಮೇಳನಕ್ಕೆ ಹೋಗಲು ಹೇಗೆ ಒಪ್ಪಿಕೊಂಡರು ಎಂಬುದು ಪ್ರಶ್ನೆಯಾಗಿದೆ ?

ಈ  ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೋಡಿದರೆ ಕಾಂಗ್ರೆಸ್‌ ನಾಯಕರನ್ನು ನಿರ್ದಿಷ್ಟ ಕಾರ್ಯಕ್ರಮಗಳಿಗೆ ಆಹ್ವಾನಿಸಿರುವುದು ಸ್ಪಷ್ಠ. ಕೇಳದೇ, ಒಪ್ಪಿಗೆ ಪಡೆಯದೇ ಇಂಥಾ ದೊಡ್ಡ ಸಮ್ಮೇಳದ ಆಹ್ವಾನ ಪತ್ರಿಕೆಯಲ್ಲಿ ಹೆಸರು ನಮೂದಿಸುವುದು ಸಾಧ್ಯವೇ ಇಲ್ಲ. ಕಾಂಗ್ರೆಸಿಗರಿಗೆ ಕನಿಷ್ಠ ತಮ್ಮ ಪಕ್ಷದ ಸೈದ್ಧಾಂತಿಕ ನಿಲುವು,   ಪರಂಪರೆ ಬಗ್ಗೆ ಕನಿಷ್ಠ ತಿಳುವಳಿಕೆ ಇದ್ದಿದ್ದರೆ ಇಂಥಾ ಅಭಾಸಕ್ಕೆಡೆಯಾಗುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್‌ ಗಾಂಧಿಯವರು ಸದಾ ಸಂವಿಧಾನವನ್ನು ಎತ್ತಿ ಹಿಡಿಯುವ ಭಾಗವಾಗಿ ಕಾರ್ಯನಿರ್ವಹಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಮಾದರಿಯಾಗಬೇಕಿತ್ತು. ಹಾಗಾಗದಿರುವುದು ವಿಷಾದನೀಯ ಸಂಗತಿಯಾಗಿದೆ

240 ಎಕರೆ ಬೆಳೆಯುವ ಭೂಮಿಯಿಂದ ತಾತ್ಪೂರ್ತಿಕವಾಗಿ ರೈತರನ್ನು ಒಕ್ಕಲೆಬ್ಬಿಸಿ ಲಕ್ಷಾಂತರ ಜನರನ್ನು ಸೇರಿಸಿ ವಾತಾವರಣ ಕಲುಷಿತ ಮಾಡುತ್ತಿದ್ದಾರೆ. ಇದಕ್ಕೇನು ಕ್ರಮ ಕೈಗೊಳ್ಳಲಾಗುತ್ತಿದೆ ಈ ಸರ್ಕಾರ ಉತ್ತರಿಸಬೇಕು

ಈ ಎಲ್ಲಾ ಕಾರಣಗಳಿಂದ ಸರ್ಕಾರದ ಎಲ್ಲಾ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರರು  ಈ ಕೋಮುವಾದೀ ಸಮ್ಮೇಳನದಲ್ಲಿ ಭಾಗವಹಿಸಬಾರದೆಂದು ನಾವು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ. ಜೊತೆಗೆ,  ಈ ಸಮ್ಮೇಳನದಲ್ಲಿ ಭಾಗಿಯಾಗುವ ನಿರ್ಧಾರದಿಂದ  ಸಚಿವರು ಮತ್ತು ಕಾಂಗ್ರೆ ಸ್‌ ನಾಯಕರು ಹಿಂದೆ ಸರಿದರೆ ಮಾತ್ರ ಸಾಲದು, ಹಿಂದುತ್ವದ ಹಲವು ಮುಖಗಳ ಸೈದ್ಧಾಂತಿಕ ದಾಳಿಯನ್ನು ಎದುರಿಸುವ ಸೈದ್ಧಾಂತಿಕ ಕಾರ್ಯಕ್ರಮವನ್ನು  ಜನಾಂದೋಲನವಾಗಿ ಕಾಂಗ್ರೆಸ್‌ ನಾಯಕರು ರೂಪಿಸಬೇಕೆಂದು  ನಾವು ಒತ್ತಾಯಿಸುತ್ತೇವೆ.

ರಾಜ್ಯದ ಜನಗಳಿಗೆ ಕೋಮುವಾದಿ ವಿಷಾನಿಲ ಉಣಿಸಿ ಮುಗ್ಧ ಶೂದ್ರ ಮಕ್ಕಳ ಮನೋಸ್ವಾಸ್ಥ್ಯವನ್ನು ಹಾಳುಗೆಡಹುತ್ತಿದ್ದಾರೆ. ಅಲ್ಲಿ ಈಗಾಗಲೇ ನೂರಾರು ಶೂದ್ರರನ್ನು ಹಗಲು ರಾತ್ರಿ ದುಡಿಸಿಕೊಂಡು ಸನಾತನಿಗಳ ಸೇವೆಗೆ ಅವರ ಚರ್ಮವನ್ನು ರತ್ನಗಂಬಳಿ ಮಾಡಿ ಹಾಸಲಾಗುತ್ತಿದೆ ಎಂಬುದನ್ನು ರಾಜ್ಯದ ಎಚ್ಚರಿಕೆಯಿಂದ ಗಮನಿಸಬೇಕು ಮತ್ತದನ್ನು ವಿರೋಧಿಸಬೇಕು ಎಂಬುದು ನಮ್ಮ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ…ಕೇರಳ | ಮತ್ತೊಬ್ಬ ಹಿರಿಯ ಸಿಪಿಐ(ಎಂ) ನಾಯಕ ನಿರ್ಗಮನ; ಬಿಜೆಪಿ ಸೇರುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....