Homeಮುಖಪುಟತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ಯಾವುದೇ ತಡೆರಹಿತ ದಾಳಿ ನಡೆಸಿದ್ದು, “ಬಹುಸಂಸ್ಕೃತಿ, ವೈವಿಧ್ಯಮಯ ದೇಶವನ್ನು ಆಳಲು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅಳವಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಿಭಜಕ ಮನಸ್ಥಿತಿ ಕಾಂಗ್ರೆಸ್‌ಗೆ ಇದೆ” ಎಂದು ದೂರಿದ್ದಾರೆ.

“ಅಂಗ್ರೇಜ್ ಚಲೇ ಗಯೇ (ಬ್ರಿಟಿಷರು ತೊರೆದರು). ಆದರೆ ಒಡೆದು ಆಳುವುದು ಉಳಿದಿದೆ… ಅದಕ್ಕಾಗಿಯೇ ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್‌ನ ನಾಯಕನಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯವರು, ಭಾರತವು ರಾಜ್ಯಗಳ ಒಕ್ಕೂಟವೆಂದು ಸಂವಿಧಾನ ಹೇಳುತ್ತದೆ ಎಂಬುದನ್ನು ನೆನಪಿಸಿದ್ದರು. ಆರ್‌ಎಸ್‌ಎಸ್‌ ಸಂವಿಧಾನದ ಮೂಲ ಆಶಯದೊಂದಿಗೆ ಆಡವಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

“ನನ್ನ ಅಜ್ಜಿಗೆ (ಮಾಜಿ ಪ್ರಧಾನಿ ಇಂದಿರಾಗಾಂಧಿ) 32 ಬಾರಿ ಗುಂಡು ಹಾರಿಸಿದ್ದರು. ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಛಿದ್ರಗೊಂಡರು. ಇದು ಏನೆಂದು ನನಗೆ ತಿಳಿದಿದೆ. ದೇಶವನ್ನು ಅರಿತಿದ್ದೇನೆ” ಎಂದಿದ್ದರು.

ಇದನ್ನೂ ಓದಿರಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ರಾಹುಲ್‌ ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೋದಿ, “ರಾಷ್ಟ್ರವು ಆಡಳಿತ ಅಥವಾ ಸರ್ಕಾರದ ವ್ಯವಸ್ಥೆ ಅಲ್ಲ – ಇದು ನಮಗೆ ಜೀವಂತ ಆತ್ಮ. 1000 ವರ್ಷಗಳಿಂದ ಜನರು ಅದರೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ವಿಷ್ಣು ಪುರಾಣದ ಪುರಾತನ ಪಠ್ಯವನ್ನು ಉಲ್ಲೇಖಿಸಿದ್ದಾರೆ.

“ಪ್ರಜಾಸತ್ತಾತ್ಮಕವಾಗಿ ನಮ್ಮನ್ನು ತಡೆಯಲು ಸಾಧ್ಯವಾಗದವರು ಅಶಿಸ್ತಿನ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಇಚ್ಛೆ ಕೊನೆಗೊಂಡಿದೆ” ಎಂದಿದ್ದಾರೆ.

ದೇಶಾದ್ಯಂತ ಕೋವಿಡ್ ಹರಡುವಿಕೆಗೆ ಮತ್ತು ಆರಂಭಿಕ ದಿನಗಳಲ್ಲಿ ವಲಸೆ ಬಿಕ್ಕಟ್ಟಿಗೆ ಪ್ರತಿಪಕ್ಷಗಳು ಜವಾಬ್ದಾರರು ಎಂದು ಪ್ರಧಾನಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ಮತ್ತು ದೆಹಲಿ ಆಡಳಿತದ ಸರ್ಕಾರಗಳತ್ತ ಬೊಟ್ಟುಮಾಡಿದ ಅವರು, “ನೀವು ಕಾರ್ಮಿಕರನ್ನು ಕಷ್ಟಕ್ಕೆ ತಳ್ಳಿದ್ದೀರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಮಿತಿಯನ್ನು ಮೀರಿದೆ. “ಮೊದಲ ಅಲೆಯ ಸಮಯದಲ್ಲಿ ಕಾರ್ಮಿಕರು ತೆರಳಲು ಮತ್ತು ಕರೋನವೈರಸ್ ಹರಡಲು ಕಾಂಗ್ರೆಸ್‌ ಟಿಕೆಟ್ ನೀಡಿತು. ದೆಹಲಿ ಸರ್ಕಾರವು ಬಸ್‌ಗಳನ್ನು ವ್ಯವಸ್ಥೆಮಾಡಿತು” ಎಂದು ಪ್ರಧಾನಿ ಹೇಳಿದರು. “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕರೋನಾ ಈ ತೀವ್ರತೆಯನ್ನು ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“ಕೋವಿಡ್ ಸಮಯದಲ್ಲಿ, ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆದಿದೆ. ರೈತರು ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಉತ್ಪಾದಿಸಿದರು. ಬಹಳಷ್ಟು ದೇಶಗಳು ಆಹಾರದ ಕೊರತೆಯನ್ನು ಎದುರಿಸಿದವು. ಆದರೆ ಈ ದೇಶವು ಹಸಿವಿನಿಂದ ಸಾಯಲು ಯಾರನ್ನೂ ಬಿಡಲಿಲ್ಲ. ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ, ಈಗಲೂ ನೀಡುತ್ತಿದ್ದಾರೆ” ಎಂದರು.

ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣವನ್ನು ಉದ್ದೇಶಿಸಿ ಮಾಡಿದ ಭಾಷಣ ಭಾರೀ ಪ್ರಶಂಸೆಗೆ ಒಳಗಾಗಿತ್ತು. ರಾಹುಲ್ ಅವರು ಬಹುತ್ವದ ಬಗ್ಗೆ ಮಾತನಾಡಿದ್ದರು. ಈ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಧಾನಿಯವರು ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದರು.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ, ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು.


ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...