Homeಮುಖಪುಟತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ಯಾವುದೇ ತಡೆರಹಿತ ದಾಳಿ ನಡೆಸಿದ್ದು, “ಬಹುಸಂಸ್ಕೃತಿ, ವೈವಿಧ್ಯಮಯ ದೇಶವನ್ನು ಆಳಲು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅಳವಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಿಭಜಕ ಮನಸ್ಥಿತಿ ಕಾಂಗ್ರೆಸ್‌ಗೆ ಇದೆ” ಎಂದು ದೂರಿದ್ದಾರೆ.

“ಅಂಗ್ರೇಜ್ ಚಲೇ ಗಯೇ (ಬ್ರಿಟಿಷರು ತೊರೆದರು). ಆದರೆ ಒಡೆದು ಆಳುವುದು ಉಳಿದಿದೆ… ಅದಕ್ಕಾಗಿಯೇ ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್‌ನ ನಾಯಕನಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯವರು, ಭಾರತವು ರಾಜ್ಯಗಳ ಒಕ್ಕೂಟವೆಂದು ಸಂವಿಧಾನ ಹೇಳುತ್ತದೆ ಎಂಬುದನ್ನು ನೆನಪಿಸಿದ್ದರು. ಆರ್‌ಎಸ್‌ಎಸ್‌ ಸಂವಿಧಾನದ ಮೂಲ ಆಶಯದೊಂದಿಗೆ ಆಡವಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

“ನನ್ನ ಅಜ್ಜಿಗೆ (ಮಾಜಿ ಪ್ರಧಾನಿ ಇಂದಿರಾಗಾಂಧಿ) 32 ಬಾರಿ ಗುಂಡು ಹಾರಿಸಿದ್ದರು. ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಛಿದ್ರಗೊಂಡರು. ಇದು ಏನೆಂದು ನನಗೆ ತಿಳಿದಿದೆ. ದೇಶವನ್ನು ಅರಿತಿದ್ದೇನೆ” ಎಂದಿದ್ದರು.

ಇದನ್ನೂ ಓದಿರಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ರಾಹುಲ್‌ ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೋದಿ, “ರಾಷ್ಟ್ರವು ಆಡಳಿತ ಅಥವಾ ಸರ್ಕಾರದ ವ್ಯವಸ್ಥೆ ಅಲ್ಲ – ಇದು ನಮಗೆ ಜೀವಂತ ಆತ್ಮ. 1000 ವರ್ಷಗಳಿಂದ ಜನರು ಅದರೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ವಿಷ್ಣು ಪುರಾಣದ ಪುರಾತನ ಪಠ್ಯವನ್ನು ಉಲ್ಲೇಖಿಸಿದ್ದಾರೆ.

“ಪ್ರಜಾಸತ್ತಾತ್ಮಕವಾಗಿ ನಮ್ಮನ್ನು ತಡೆಯಲು ಸಾಧ್ಯವಾಗದವರು ಅಶಿಸ್ತಿನ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಇಚ್ಛೆ ಕೊನೆಗೊಂಡಿದೆ” ಎಂದಿದ್ದಾರೆ.

ದೇಶಾದ್ಯಂತ ಕೋವಿಡ್ ಹರಡುವಿಕೆಗೆ ಮತ್ತು ಆರಂಭಿಕ ದಿನಗಳಲ್ಲಿ ವಲಸೆ ಬಿಕ್ಕಟ್ಟಿಗೆ ಪ್ರತಿಪಕ್ಷಗಳು ಜವಾಬ್ದಾರರು ಎಂದು ಪ್ರಧಾನಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ಮತ್ತು ದೆಹಲಿ ಆಡಳಿತದ ಸರ್ಕಾರಗಳತ್ತ ಬೊಟ್ಟುಮಾಡಿದ ಅವರು, “ನೀವು ಕಾರ್ಮಿಕರನ್ನು ಕಷ್ಟಕ್ಕೆ ತಳ್ಳಿದ್ದೀರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಮಿತಿಯನ್ನು ಮೀರಿದೆ. “ಮೊದಲ ಅಲೆಯ ಸಮಯದಲ್ಲಿ ಕಾರ್ಮಿಕರು ತೆರಳಲು ಮತ್ತು ಕರೋನವೈರಸ್ ಹರಡಲು ಕಾಂಗ್ರೆಸ್‌ ಟಿಕೆಟ್ ನೀಡಿತು. ದೆಹಲಿ ಸರ್ಕಾರವು ಬಸ್‌ಗಳನ್ನು ವ್ಯವಸ್ಥೆಮಾಡಿತು” ಎಂದು ಪ್ರಧಾನಿ ಹೇಳಿದರು. “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕರೋನಾ ಈ ತೀವ್ರತೆಯನ್ನು ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“ಕೋವಿಡ್ ಸಮಯದಲ್ಲಿ, ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆದಿದೆ. ರೈತರು ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಉತ್ಪಾದಿಸಿದರು. ಬಹಳಷ್ಟು ದೇಶಗಳು ಆಹಾರದ ಕೊರತೆಯನ್ನು ಎದುರಿಸಿದವು. ಆದರೆ ಈ ದೇಶವು ಹಸಿವಿನಿಂದ ಸಾಯಲು ಯಾರನ್ನೂ ಬಿಡಲಿಲ್ಲ. ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ, ಈಗಲೂ ನೀಡುತ್ತಿದ್ದಾರೆ” ಎಂದರು.

ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣವನ್ನು ಉದ್ದೇಶಿಸಿ ಮಾಡಿದ ಭಾಷಣ ಭಾರೀ ಪ್ರಶಂಸೆಗೆ ಒಳಗಾಗಿತ್ತು. ರಾಹುಲ್ ಅವರು ಬಹುತ್ವದ ಬಗ್ಗೆ ಮಾತನಾಡಿದ್ದರು. ಈ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಧಾನಿಯವರು ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದರು.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ, ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು.


ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...