Homeಮುಖಪುಟರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಷ್ಟ್ರೀಯ ಕಾಂಗ್ರೆಸ್‌‌ ಅಧ್ಯಕ್ಷರಾಗಿ ಆಯ್ಕೆಯಾದರೆ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪಕ್ಷದ ಮತ್ತೊಬ್ಬ ನಾಯಕ ಸಚಿನ್ ಪೈಲಟ್ ಅವರಿಗೆ ಅಧಿಕಾರ ವಹಿಸಲು ಪಕ್ಷದ ನಾಯಕತ್ವದ ಬೆಂಬಲವಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಅಶೋಕ್ ಗೆಹ್ಲೋಟ್ ಅವರು ಅಧ್ಯಕ್ಷರಾಗಿ ಗೆದ್ದರೂ ಎರಡು ಸ್ಥಾನವನ್ನೂ ಬಯಸುತ್ತಿದ್ದಾರೆ ಎಂದು ಅದು ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ನಾಮಪತ್ರಗಳ ಸಲ್ಲಿಕೆ ಸೆಪ್ಟೆಂಬರ್ 24 ಮತ್ತು 30 ರ ನಡುವೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ರಾಹುಲ್ ಗಾಂಧಿ ಅವರು ಈ ವರ್ಷದ ಆರಂಭದಲ್ಲಿ ಪಕ್ಷವು ಅಳವಡಿಸಿಕೊಂಡ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮವನ್ನು ಪುನರುಚ್ಛರಿಸಿದ್ದಾರೆ. ಈ ಮೂಲಕ ಅವರು ಗೆಹ್ಲೋಟ್ ಅವರ ವಿನಂತಿಗೆ ಸಾರ್ವಜನಿಕ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವು ಅಶೋಕ್ ಗೆಹ್ಲೋಟ್‌ಗೆ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ನಾವು ಉದಯಪುರದಲ್ಲಿ ನಿರ್ಣಯ ಮಾಡಿದ್ದು, ಆ ಬದ್ಧತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದಾರೆ.

ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ರಾಹುಲ್ ಗಾಂಧಿಯವರ ಆಯ್ಕೆಯಾಗಿದ್ದು, ಆದರೆ ಅವರು ಆಯ್ಕೆಯಾದರೆ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ ಎಂಬ ಆತಂಕದಿಂದಾಗಿ ಅಧ್ಯಕ್ಷೀಯ ಚುನಾವಣೆಯಿಂದ ಇಲ್ಲಿಯವರೆಗೆ ಹೊರಗುಳಿದಿದ್ದಾರೆ.

ಇದೇ ವೇಳೆ ರಾಜಸ್ಥಾನದಲ್ಲಿ ಗೆಹ್ಲೋಟ್ ಅವರ ಬದಲಿಯಾಗಿ ಅವರ ಪಕ್ಷದೊಳಗಿನ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ಗೆಹ್ಲೋಟ್‌ ವಿರುದ್ಧ 2020 ರಲ್ಲಿ ಸಚಿನ್ ಪೈಲಟ್‌ ಬಂಡಾಯವೆದ್ದಿದ್ದರು. ಆದರೆ ರಾಹುಲ್ ಗಾಂಧಿ ಅವರ ಮಧ್ಯ ಪ್ರವೇಶದ ನಂತರ ಸರ್ಕಾರ ಉರುಳಿರಲಿಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ಸಚಿನ್‌ ಪೈಲಟ್ ಅವರು ನಿನ್ನೆ ರಾಹುಲ್ ಗಾಂಧಿಯವರೊಂದಿಗೆ ಕೇರಳದಲ್ಲಿ “ಭಾರತ್ ಜೋಡೋ ಯಾತ್ರೆ”ಯಲ್ಲಿ ಹೆಜ್ಜೆ ಹಾಕಿದ್ದರು. ಗೆಹ್ಲೋಟ್ ಅವರು ರಾಹುಲ್ ಗಾಂಧಿಯೊಂದಿಗೆ ಇಂದು ಹೆಜ್ಜೆ ಹಾಕಿದ್ದಾರೆ.

ಅಕ್ಟೋಬರ್ 17 ರ ಚುನಾವಣೆಗೆ ಸೋಮವಾರ ತಮ್ಮ ಪತ್ರಗಳನ್ನು ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಮನವೊಲಿಸಲು ತಾನು ‘ಕೊನೆಯ ಬಾರಿಗೆ’ ಪ್ರಯತ್ನಿಸುವುದಾಗಿ ಗೆಹ್ಲೋಟ್‌ ಹೇಳಿದ್ದಾರೆ.

ಆದರೆ ರಾಹುಲ್ ಗಾಂಧಿ ಅವರು ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೆ ಬಂದಿದ್ದಾರೆ. “ಕಳೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ ಮಾತಿನಂತೆ ನಾನು ನಡೆಯುತ್ತೇನೆ” ಎಂದು ಇಂದು ಮಧ್ಯಾಹ್ನ ಕೂಡಾ ಸುದ್ದಿಗಾರರಿಗೆ ಪದೇ ಪದೇ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಅಕ್ಟೋಬರ್ 1 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅದೇ ದಿನ ಮಾನ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 8ರ ವರೆಗೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಇದರ ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...