Homeಮುಖಪುಟರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

ರಾಜಸ್ಥಾನದ ಮುಖ್ಯಮಂತ್ರಿಯಾಗಲು ಸಚಿನ್ ಪೈಲಟ್‌ಗೆ ಕಾಂಗ್ರೆಸ್‌ ನಾಯಕತ್ವದ ಬೆಂಬಲ!

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ರಾಷ್ಟ್ರೀಯ ಕಾಂಗ್ರೆಸ್‌‌ ಅಧ್ಯಕ್ಷರಾಗಿ ಆಯ್ಕೆಯಾದರೆ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪಕ್ಷದ ಮತ್ತೊಬ್ಬ ನಾಯಕ ಸಚಿನ್ ಪೈಲಟ್ ಅವರಿಗೆ ಅಧಿಕಾರ ವಹಿಸಲು ಪಕ್ಷದ ನಾಯಕತ್ವದ ಬೆಂಬಲವಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಆದರೆ ಅಶೋಕ್ ಗೆಹ್ಲೋಟ್ ಅವರು ಅಧ್ಯಕ್ಷರಾಗಿ ಗೆದ್ದರೂ ಎರಡು ಸ್ಥಾನವನ್ನೂ ಬಯಸುತ್ತಿದ್ದಾರೆ ಎಂದು ಅದು ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ನಾಮಪತ್ರಗಳ ಸಲ್ಲಿಕೆ ಸೆಪ್ಟೆಂಬರ್ 24 ಮತ್ತು 30 ರ ನಡುವೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂದು ರಾಹುಲ್ ಗಾಂಧಿ ಅವರು ಈ ವರ್ಷದ ಆರಂಭದಲ್ಲಿ ಪಕ್ಷವು ಅಳವಡಿಸಿಕೊಂಡ “ಒಬ್ಬ ವ್ಯಕ್ತಿ, ಒಂದು ಹುದ್ದೆ” ನಿಯಮವನ್ನು ಪುನರುಚ್ಛರಿಸಿದ್ದಾರೆ. ಈ ಮೂಲಕ ಅವರು ಗೆಹ್ಲೋಟ್ ಅವರ ವಿನಂತಿಗೆ ಸಾರ್ವಜನಿಕ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನಿಯಮವು ಅಶೋಕ್ ಗೆಹ್ಲೋಟ್‌ಗೆ ಅನ್ವಯಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ನಾವು ಉದಯಪುರದಲ್ಲಿ ನಿರ್ಣಯ ಮಾಡಿದ್ದು, ಆ ಬದ್ಧತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದಾರೆ.

ಅಶೋಕ್ ಗೆಹ್ಲೋಟ್‌ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ರಾಹುಲ್ ಗಾಂಧಿಯವರ ಆಯ್ಕೆಯಾಗಿದ್ದು, ಆದರೆ ಅವರು ಆಯ್ಕೆಯಾದರೆ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ ಎಂಬ ಆತಂಕದಿಂದಾಗಿ ಅಧ್ಯಕ್ಷೀಯ ಚುನಾವಣೆಯಿಂದ ಇಲ್ಲಿಯವರೆಗೆ ಹೊರಗುಳಿದಿದ್ದಾರೆ.

ಇದೇ ವೇಳೆ ರಾಜಸ್ಥಾನದಲ್ಲಿ ಗೆಹ್ಲೋಟ್ ಅವರ ಬದಲಿಯಾಗಿ ಅವರ ಪಕ್ಷದೊಳಗಿನ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ. ಗೆಹ್ಲೋಟ್‌ ವಿರುದ್ಧ 2020 ರಲ್ಲಿ ಸಚಿನ್ ಪೈಲಟ್‌ ಬಂಡಾಯವೆದ್ದಿದ್ದರು. ಆದರೆ ರಾಹುಲ್ ಗಾಂಧಿ ಅವರ ಮಧ್ಯ ಪ್ರವೇಶದ ನಂತರ ಸರ್ಕಾರ ಉರುಳಿರಲಿಲ್ಲ.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ಸಚಿನ್‌ ಪೈಲಟ್ ಅವರು ನಿನ್ನೆ ರಾಹುಲ್ ಗಾಂಧಿಯವರೊಂದಿಗೆ ಕೇರಳದಲ್ಲಿ “ಭಾರತ್ ಜೋಡೋ ಯಾತ್ರೆ”ಯಲ್ಲಿ ಹೆಜ್ಜೆ ಹಾಕಿದ್ದರು. ಗೆಹ್ಲೋಟ್ ಅವರು ರಾಹುಲ್ ಗಾಂಧಿಯೊಂದಿಗೆ ಇಂದು ಹೆಜ್ಜೆ ಹಾಕಿದ್ದಾರೆ.

ಅಕ್ಟೋಬರ್ 17 ರ ಚುನಾವಣೆಗೆ ಸೋಮವಾರ ತಮ್ಮ ಪತ್ರಗಳನ್ನು ಸಲ್ಲಿಸುವ ಮೊದಲು ಕಾಂಗ್ರೆಸ್ ಅಧ್ಯಕ್ಷರಾಗುವಂತೆ ರಾಹುಲ್ ಗಾಂಧಿಯನ್ನು ಮನವೊಲಿಸಲು ತಾನು ‘ಕೊನೆಯ ಬಾರಿಗೆ’ ಪ್ರಯತ್ನಿಸುವುದಾಗಿ ಗೆಹ್ಲೋಟ್‌ ಹೇಳಿದ್ದಾರೆ.

ಆದರೆ ರಾಹುಲ್ ಗಾಂಧಿ ಅವರು ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೆ ಬಂದಿದ್ದಾರೆ. “ಕಳೆದ ಪತ್ರಿಕಾಗೋಷ್ಠಿಯಲ್ಲಿ ನಾನು ಹೇಳಿದ ಮಾತಿನಂತೆ ನಾನು ನಡೆಯುತ್ತೇನೆ” ಎಂದು ಇಂದು ಮಧ್ಯಾಹ್ನ ಕೂಡಾ ಸುದ್ದಿಗಾರರಿಗೆ ಪದೇ ಪದೇ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಅಕ್ಟೋಬರ್ 1 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅದೇ ದಿನ ಮಾನ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 8ರ ವರೆಗೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಇದರ ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...