Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...