Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...