Homeಮುಖಪುಟಕಾಂಗ್ರೆಸ್ ಹಳೆಯ ಕಾಲದ ಜಮೀನ್ದಾರರಂತೆ: ಶರದ್ ಪವಾರ್

ಕಾಂಗ್ರೆಸ್ ಹಳೆಯ ಕಾಲದ ಜಮೀನ್ದಾರರಂತೆ: ಶರದ್ ಪವಾರ್

ಜಮೀನುದಾರರ ಆದಾಯ ಕೂಡ ಮೊದಲಿನಂತಿಲ್ಲ. ಸಾವಿರಾರು ಎಕರೆ ಭೂಮಿಯನ್ನು ಅವರು ಈ ಹಿಂದೆ ಹೊಂದಿದ್ದರು. ಈಗ 15ರಿಂದ 20 ಎಕರೆ ಭೂಮಿನ್ನು ಹೊಂದಿದ್ದಾರೆ: ಶರದ್

- Advertisement -
- Advertisement -

ಮುಂಬೈ: ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್‌ ಗೆಲ್ಲಲು ಸಾಧ್ಯವಿಲ್ಲ ಎಂಬ ಸತ್ಯವನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ, ಕಾಂಗ್ರೆಸ್, ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರವಿದ್ದು, ಶರದ್ ಪವಾರ್ ಅವರ ಹೇಳಿಕೆ ಚರ್ಚೆಗೆ ಗ್ರಾಸವಾಗಲಿದೆ.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಗೆದ್ದ ಕಾಲವೊಂದಿತ್ತು. ಈಗ ಅದು ಸಾಧ್ಯವಿಲ್ಲ. ಈ ಸತ್ಯವನ್ನು ಒಪ್ಪಿಕೊಂಡಾಗ ಮಾತ್ರ ಮಿತ್ರಪಕ್ಷಗಳೊಂದಿಗೆ ಆಪ್ತತೆ ಹೆಚ್ಚುತ್ತದೆ ಎಂದಿದ್ದಾರೆ.

ನಾಯಕತ್ವದ ವಿಷಯಕ್ಕೆ ಬಂದಾಗ ಕಾಂಗ್ರೆಸ್ನಲ್ಲಿರುವ ನನ್ನ ಸಹದ್ಯೋಗಿಗಳೂ ವಿಭಿನ್ನ ಅಭಿಪ್ರಾಯ ತಾಳಲಾರದ ಸ್ಥಿತಿಯಲ್ಲಿದ್ದಾರೆ ಎಂದು ಇಂಡಿಯಾ ಟುಡೇ ಗುಂಪಿನ ಮರಾಠಿ ಡಿಜಿಟಲ್ ವೇದಿಕೆಯಾದ ತಕ್‌ನೊಂದಿಗೆ ಪವಾರ್ ಹೇಳಿಕೊಂಡಿದ್ದಾರೆ.

2024ರ ಲೋಕಸಭಾ ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸೋಣ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದಾಗ, ಕಾಂಗ್ರೆಸ್ ನಾಯಕರು ನಾವು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮುನ್ನುಗ್ಗುತ್ತೇವೆ ಎಂದರು. ಎಲ್ಲ ಪಕ್ಷಗಳು, ಮುಖ್ಯವಾಗಿ ಕಾಂಗ್ರೆಸ್ ನಲ್ಲಿರುವ ನನ್ನ ಸ್ನೇಹಿತರು ನಾಯಕತ್ವದ ಕುರಿತು ವಿಭಿನ್ನ ನಿಲುವು ತಾಳಲು ಸಿದ್ಧರಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಸ್ಥಿತಿಯನ್ನು ಜಮೀನ್ದಾರಿಕೆಯ ರೂಪಕವನ್ನು ಬಳಸಿ ವಿವರಿಸಿರುವ ಪವಾರ್, “ಉತ್ತರ ಪ್ರದೇಶದ ಜಮೀನುದಾರರು ದೊಡ್ಡ ಮಟ್ಟದ ಭೂಮಿಯನ್ನು ಹಾಗೂ ಹವೇಲಿಗಳನ್ನು ಹೊಂದಿದ್ದರು. ಮುಂದೆ ಕಾನೂನುಗಳು ಬಂದ ಮೇಲೆ ಅವರ ಭೂಮಿಯ ಒಡೆತನ ಕಡಿಮೆಯಾಗಿದೆ. ಹವೇಲಿಗಳು ಈಗಲೂ ಇವೆ. ಆದರೆ ಅವುಗಳನ್ನು ಬಳಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಕಾಂಗ್ರೆಸ್ ಹೊರತಾದ ಒಕ್ಕೂಟದ ಪ್ರಶ್ನೆಯೇ ಇಲ್ಲ: ಶರದ್ ಪವಾರ್

ಜಮೀನುದಾರರ ಆದಾಯ ಕೂಡ ಮೊದಲಿನಂತಿಲ್ಲ. ಸಾವಿರಾರು ಎಕರೆ ಭೂಮಿಯನ್ನು ಅವರು ಈ ಹಿಂದೆ ಹೊಂದಿದ್ದರು. ಈಗ 15ರಿಂದ 20 ಎಕರೆ ಭೂಮಿನ್ನು ಹೊಂದಿದ್ದಾರೆ. ಮುಂಜಾನೆ ಎದ್ದ ಜಮೀನುದಾರ, ಸುತ್ತಲಿನ ಹಸಿರು ಪರಿಸರವನ್ನು ನೋಡುತ್ತಾ, ಈ ಭೂಮಿಯೆಲ್ಲ ನನ್ನದು ಎನ್ನುತ್ತಾನೆ. ಹಿಂದೊಮ್ಮೆ ಇದೆಲ್ಲ ಜಮೀನಿದಾರನಿಗೇ ಸೇರಿತ್ತು. ಆದರೆ ಅದು ಆತನದಲ್ಲ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...