Homeಮುಖಪುಟಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

- Advertisement -
- Advertisement -

ಕೇರಳದ ಡಿಜಿಪಿ ಕಚೇರಿ ಕಡೆಗೆ ಶನಿವಾರ ಪ್ರತಿಪಕ್ಷ ಕಾಂಗ್ರೆಸ್ ನಡೆಸಿದ ಪ್ರತಿಭಟನಾ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ.

‘ನವ ಕೇರಳ ಸದಾಸ್’ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಡಿಜಿಪಿ ಕಚೇರಿಯತ್ತ ಕಾಂಗ್ರೆಸ್‌ ಪ್ರತಿಭಟನಾ ನಡಿಗೆ ಕೈಗೊಳ್ಳಲಾಗಿತ್ತು.

ಪ್ರತಿಭಟನೆಯ ವೇಳೆ  ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದಾಗ ಕೆಪಿಸಿಸಿ ಮುಖ್ಯಸ್ಥ ಕೆ ಸುಧಾಕರನ್, ವಿಧಾನಸಭೆ ಪ್ರತಿಪಕ್ಷ ನಾಯಕ ವಿ ಡಿ ಸತೀಶನ್, ಹಿರಿಯ ಕಾಂಗ್ರೆಸ್‌ ನಾಯಕ ರಮೇಶ್ ಚೆನ್ನಿತ್ತಲ ಸೇರಿದಂತೆ ಹಿರಿಯ ನಾಯಕರು ಡಿಜಿಪಿ ಕಚೇರಿ ಬಳಿಯ ತಾತ್ಕಾಲಿಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೊಲೀಸರು ಅಶ್ರುವಾಯು ಪ್ರಯೋಗಿಸಿದಾಗ ಸುಧಾಕರನ್ ಮತ್ತು ಚೆನ್ನಿತ್ತಲ ಅವರ ಕಣ್ಣಿಗೆ ಬಿದ್ದಿದ್ದು, ಸಮೀಪದಲ್ಲೇ ಇದ್ದ ಕಾಂಗ್ರೆಸ್‌ ಕಾರ್ಯಕರ್ತರು ಅವರನ್ನು ಕಾರಿನತ್ತ ತೆರಳಲು ಸಹಕಾರವನ್ನು ಮಾಡಿದ್ದಾರೆ.

ಸುಧಾಕರನ್ ಭಾಷಣ ಮುಗಿಸಿದ ಕೂಡಲೇ ಡಿಜಿಪಿ ಕಚೇರಿ ಬಳಿ ನಿರ್ಮಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಏರಲು ಪ್ರತಿಭಟನಾಕಾರರು ಪ್ರಯತ್ನಿಸಿದ್ದಾರೆ. ಡಿಜಿಪಿ ಕಚೇರಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ಸತೀಶನ್ ಭಾಷಣ ಆರಂಭಿಸುವ ಹಂತದಲ್ಲಿ ಅಶ್ರುವಾಯು ಹಾಗೂ ಜಲಪಿರಂಗಿ ಪ್ರಯೋಗವನ್ನು ಮಾಡಿ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

ಇದಕ್ಕೂ ಮೊದಲು ‘ನವ ಕೇರಳ ಸದಾಸ್’ ವಿರುದ್ಧ ಕೇರಳದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಆಟಿಂಗರ್‌ ಬಳಿ ಸಿಎಂಗೆ ಕಪ್ಪು ಭಾವುಟವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರದರ್ಶಿಸಿದ್ದರು.  ಆ ಬಳಿಕ ಡಿವೈಎಫ್ಐ ಕಾರ್ಯಕರ್ತರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದವು.

ಇದಲ್ಲದೆ ಕಣ್ಣೂರು ಜಿಲ್ಲೆಯ ಕಲ್ಲಿಯಶ್ಶೇರಿಯಲ್ಲಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಕಪ್ವು ಬಾವುಟ ತೋರಿಸಿದ್ದ ಕಾಂಗ್ರೆಸ್‌ ಹಾಗೂ ವಿದ್ಯಾರ್ಥಿ ಘಟಕ ಕೆಎಸ್‌ಯು ಕಾರ್ಯಕರ್ಯರ ಮೇಲೆ ದಾಳಿ ನಡೆಸಲಾಗಿತ್ತು. ಈ ದಾಳಿ ಖಂಡಿಸಿ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ರಾಹುಲ್‌ ಮಂಕೂಟ್ಟತ್ತಿಲ್‌ ನೇತೃತ್ವದಲ್ಲಿ ಕಾರ್ಯಕರ್ತರು ವಿಧಾನಸಭೆ ಬಳಿ ಪ್ರತಿಭಟನೆ ನಡೆಸಿದ್ದರು.

ನವ ಕೇರಳ ಸದಾಸ್:

ಕೇರಳ ಸರಕಾರ ಮಾಡಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಕೇರಳ ಸರಕಾರ ‘ನವ ಕೇರಳ ಸದಾಸ್’  ಕಾರ್ಯಕ್ರಮವನ್ನು ಆಯೋಜಿಸಿತ್ತು. ಮಂಜೇಶ್ವರಂನಿಂದ ತಿರುವನಂತಪುರದವರೆಗೆ 36 ದಿನಗಳ ಯಾತ್ರೆಯಲ್ಲಿ 140 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ನವ ಕೇರಳ ಸದಸ್ಯವನ್ನು ನ.18ರಿಂದ ಆರಂಭವಾಗಿತ್ತು.  ಡಿಸೆಂಬರ್ 24 ರಂದು ತಿರುವನಂತಪುರದಲ್ಲಿ ಕಾರ್ಯಕ್ರಮವು ಮುಕ್ತಾಯಗೊಂಡಿದೆ. 20 ಮಂತ್ರಿಗಳು ಮತ್ತು ಸಿಎಂ ಸೇರಿ ‘ನವ ಕೇರಳ ಸದಾಸ್’  ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...