Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...