Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...