Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...