Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...