Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...