Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...