Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...