Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...