Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ಮೂರನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...