Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

- Advertisement -
- Advertisement -

ಮಹರಾಷ್ಟ್ರದ ಕಾಂಗ್ರೆಸ್ ಶಾಸಕ ನಿತೀಶ್ ರಾಣೆ ಇಂದು ಮುಂಬೈ ಸಮೀಪದ ಮುಂಬೈ ಗೋವಾ ಹೆದ್ದಾರಿ ಬಳಿ ತನ್ನ ಬೆಂಬಲಿಗರೊಡನೆ ಇಂಜಿನಿಯರ್ ಮೆಲೆ ಕೊಳಚೆ ನೀರು ಸುರಿದು, ಕಂಬಕ್ಕೆ ಕಟ್ಟಿ ಅವಮಾನಿಸಿದ ಘಟನೆ ಸಂಭವಿಸಿದೆ. ಮಾಧ್ಯಮಗಳೆದುರೆ ಈ ಘಟನೆ ಜರುಗಿದ್ದು ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೇ ಆ ಕಾಂಗ್ರೆಸ್ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

(ವಿಡಿಯೋ ಕೃಪೆ: ಎಎನ್ಐ)

ವಾರದಹಿಂದೆ ಬಿಜೆಪಿ ಶಾಸಕ ಆಕಾಶ್ ವರ್ಗಿಯ ಎಂಬುವವರು ಬ್ಯಾಟ್‍ನಿಂದ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದರು. ಎರಡು ದಿನಗಳ ಹಿಂದೆ ತಾನೇ ತೆಲಂಗಾಣದಲ್ಲಿ ಮಹಿಳಾ ಫಾರೆಸ್ಟ್ ರೇಂಜ್ ಆಫಿಸರ್ ಮೇಲೆ ಶಾಸಕನ ತಮ್ಮ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದನ್ನು. ಆ ಘಟನೆಗಳು ಮಾಸುವ ಮುನ್ನವೇ ಈ ಶಾಸಕನ ದುವರ್ತನೆ ನಡೆದಿದೆ.

ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂದು ಸಹ ಹೇಳಲಾಗುತ್ತಿದೆ.

ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿತ್ತು. ಸ್ವಲ್ಪ ಸಮಯ ತಲೆಮರೆಸಿಕೊಂಡಿದ್ದ ಶಾಸಕ ತೀಶ್ ರಾಣೆ ಈಗ ಶರಣಾಗಿದ್ದಾರೆ.  ಇವರು ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ಹಿಂದೆ ಕಾಂಗ್ರೆಸ್ ನಾಯಕರಾಗಿದ್ದು ಹಾಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿರುವ ನಿತೀಶ್ ರಾಣೆಯವರ ತಂದೆ ನಾರಾಯಣ್ ರಾಣೆಯವರು ಘಟನೆಯನ್ನು ಖಂಡಿಸಿದ್ದಾರೆ. “ರಸ್ತೆ ವಿಷಯವಾಗಿ ಪ್ರತಿಭಟನೆ ಮಾಡುತ್ತಿದ್ದದ್ದು ಸರಿ, ಆದರೆ ಆತನ ವರ್ತನೆ ಅನಪೇಕ್ಷಣೀಯ. ಆತ ಮತ್ತು ಆತನ ಬೆಂಬಲಿಗರು ಹಿಂಸೆ ಮಾಡಿರುವು ಸರಿಯಾದುದಲ್ಲ, ಈ ವಿಚಾರವಾಗಿ ಆತನನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ”.
ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...