Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

- Advertisement -
- Advertisement -

ಮಹರಾಷ್ಟ್ರದ ಕಾಂಗ್ರೆಸ್ ಶಾಸಕ ನಿತೀಶ್ ರಾಣೆ ಇಂದು ಮುಂಬೈ ಸಮೀಪದ ಮುಂಬೈ ಗೋವಾ ಹೆದ್ದಾರಿ ಬಳಿ ತನ್ನ ಬೆಂಬಲಿಗರೊಡನೆ ಇಂಜಿನಿಯರ್ ಮೆಲೆ ಕೊಳಚೆ ನೀರು ಸುರಿದು, ಕಂಬಕ್ಕೆ ಕಟ್ಟಿ ಅವಮಾನಿಸಿದ ಘಟನೆ ಸಂಭವಿಸಿದೆ. ಮಾಧ್ಯಮಗಳೆದುರೆ ಈ ಘಟನೆ ಜರುಗಿದ್ದು ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೇ ಆ ಕಾಂಗ್ರೆಸ್ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

(ವಿಡಿಯೋ ಕೃಪೆ: ಎಎನ್ಐ)

ವಾರದಹಿಂದೆ ಬಿಜೆಪಿ ಶಾಸಕ ಆಕಾಶ್ ವರ್ಗಿಯ ಎಂಬುವವರು ಬ್ಯಾಟ್‍ನಿಂದ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದರು. ಎರಡು ದಿನಗಳ ಹಿಂದೆ ತಾನೇ ತೆಲಂಗಾಣದಲ್ಲಿ ಮಹಿಳಾ ಫಾರೆಸ್ಟ್ ರೇಂಜ್ ಆಫಿಸರ್ ಮೇಲೆ ಶಾಸಕನ ತಮ್ಮ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದನ್ನು. ಆ ಘಟನೆಗಳು ಮಾಸುವ ಮುನ್ನವೇ ಈ ಶಾಸಕನ ದುವರ್ತನೆ ನಡೆದಿದೆ.

ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂದು ಸಹ ಹೇಳಲಾಗುತ್ತಿದೆ.

ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿತ್ತು. ಸ್ವಲ್ಪ ಸಮಯ ತಲೆಮರೆಸಿಕೊಂಡಿದ್ದ ಶಾಸಕ ತೀಶ್ ರಾಣೆ ಈಗ ಶರಣಾಗಿದ್ದಾರೆ.  ಇವರು ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ಹಿಂದೆ ಕಾಂಗ್ರೆಸ್ ನಾಯಕರಾಗಿದ್ದು ಹಾಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿರುವ ನಿತೀಶ್ ರಾಣೆಯವರ ತಂದೆ ನಾರಾಯಣ್ ರಾಣೆಯವರು ಘಟನೆಯನ್ನು ಖಂಡಿಸಿದ್ದಾರೆ. “ರಸ್ತೆ ವಿಷಯವಾಗಿ ಪ್ರತಿಭಟನೆ ಮಾಡುತ್ತಿದ್ದದ್ದು ಸರಿ, ಆದರೆ ಆತನ ವರ್ತನೆ ಅನಪೇಕ್ಷಣೀಯ. ಆತ ಮತ್ತು ಆತನ ಬೆಂಬಲಿಗರು ಹಿಂಸೆ ಮಾಡಿರುವು ಸರಿಯಾದುದಲ್ಲ, ಈ ವಿಚಾರವಾಗಿ ಆತನನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ”.
ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...