Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

- Advertisement -
- Advertisement -

ಮಹರಾಷ್ಟ್ರದ ಕಾಂಗ್ರೆಸ್ ಶಾಸಕ ನಿತೀಶ್ ರಾಣೆ ಇಂದು ಮುಂಬೈ ಸಮೀಪದ ಮುಂಬೈ ಗೋವಾ ಹೆದ್ದಾರಿ ಬಳಿ ತನ್ನ ಬೆಂಬಲಿಗರೊಡನೆ ಇಂಜಿನಿಯರ್ ಮೆಲೆ ಕೊಳಚೆ ನೀರು ಸುರಿದು, ಕಂಬಕ್ಕೆ ಕಟ್ಟಿ ಅವಮಾನಿಸಿದ ಘಟನೆ ಸಂಭವಿಸಿದೆ. ಮಾಧ್ಯಮಗಳೆದುರೆ ಈ ಘಟನೆ ಜರುಗಿದ್ದು ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೇ ಆ ಕಾಂಗ್ರೆಸ್ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

(ವಿಡಿಯೋ ಕೃಪೆ: ಎಎನ್ಐ)

ವಾರದಹಿಂದೆ ಬಿಜೆಪಿ ಶಾಸಕ ಆಕಾಶ್ ವರ್ಗಿಯ ಎಂಬುವವರು ಬ್ಯಾಟ್‍ನಿಂದ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದರು. ಎರಡು ದಿನಗಳ ಹಿಂದೆ ತಾನೇ ತೆಲಂಗಾಣದಲ್ಲಿ ಮಹಿಳಾ ಫಾರೆಸ್ಟ್ ರೇಂಜ್ ಆಫಿಸರ್ ಮೇಲೆ ಶಾಸಕನ ತಮ್ಮ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದನ್ನು. ಆ ಘಟನೆಗಳು ಮಾಸುವ ಮುನ್ನವೇ ಈ ಶಾಸಕನ ದುವರ್ತನೆ ನಡೆದಿದೆ.

ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂದು ಸಹ ಹೇಳಲಾಗುತ್ತಿದೆ.

ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿತ್ತು. ಸ್ವಲ್ಪ ಸಮಯ ತಲೆಮರೆಸಿಕೊಂಡಿದ್ದ ಶಾಸಕ ತೀಶ್ ರಾಣೆ ಈಗ ಶರಣಾಗಿದ್ದಾರೆ.  ಇವರು ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ಹಿಂದೆ ಕಾಂಗ್ರೆಸ್ ನಾಯಕರಾಗಿದ್ದು ಹಾಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿರುವ ನಿತೀಶ್ ರಾಣೆಯವರ ತಂದೆ ನಾರಾಯಣ್ ರಾಣೆಯವರು ಘಟನೆಯನ್ನು ಖಂಡಿಸಿದ್ದಾರೆ. “ರಸ್ತೆ ವಿಷಯವಾಗಿ ಪ್ರತಿಭಟನೆ ಮಾಡುತ್ತಿದ್ದದ್ದು ಸರಿ, ಆದರೆ ಆತನ ವರ್ತನೆ ಅನಪೇಕ್ಷಣೀಯ. ಆತ ಮತ್ತು ಆತನ ಬೆಂಬಲಿಗರು ಹಿಂಸೆ ಮಾಡಿರುವು ಸರಿಯಾದುದಲ್ಲ, ಈ ವಿಚಾರವಾಗಿ ಆತನನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ”.
ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...