Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: 'ತೀಕ್ಷ್ಣ ಪ್ರತಿಕ್ರಿಯೆ' ಎಂದು ಕಾಂಗ್ರೆಸ್...

ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: ‘ತೀಕ್ಷ್ಣ ಪ್ರತಿಕ್ರಿಯೆ’ ಎಂದು ಕಾಂಗ್ರೆಸ್ ಲೇವಡಿ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪಿಯಾಗಿರುವ ಕುಸ್ತಿ ಫೆಡರೆಶನ್ ಮುಖ್ಯಸ್ಥ, ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ಮಾಧ್ಯಮದವರ ಪ್ರಶ್ನೆ ಕೇಳಿದಾಗ ಅಲ್ಲಿಂದ ಓಡಿಹೋಗಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಪ್ರತಿಕ್ರಿಯಿಸಲು ಕೇಳಿದಾಗ ಸಚಿವೆ ಮೀನಾಕ್ಷಿ ಲೇಖಿ ಅವರು ತಕ್ಷಣವೇ ಅಲ್ಲಿಂದ ತೆರಳಲು ಮುಂದಾಗುತ್ತಾರೆ. ಆಗ ಮಾಧ್ಯಮದವರು ಅವರನ್ನು ಹಿಂಬಾಲಿಸಿದಾಗ ಉತ್ತರಿಸದೇ ಓಡಿಹೋಗಿದ್ದಾರೆ. ಸಚಿವರು ಓಡಿಹೋಗುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಮಹಿಳಾ ಕುಸ್ತಿಪಟುಗಳ ವಿಚಾರವಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನೀವೇ ನೋಡಿ..” ಎಂದು ಲೇವಡಿ ಮಾಡಿದೆ.

ಮಾಧ್ಯಮದವರು ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದಾಗ ಸಚಿವೆ ಮೀನಾಕ್ಷಿ ಲೇಖಿ ಅವರು, ”ಚಲೋ, ಚಲೋ, ಚಲೋ” ಎಂದು ಸಚಿವರು ತಮ್ಮ ಕಾರಿನತ್ತ ಧಾವಿಸುತ್ತಿದ್ದರು. ಆಗ ಮಾಧ್ಯಮದ ವರದಿಗಾರರು ಕೇಂದ್ರ ಸಚಿವರನ್ನು ಬೆನ್ನಟ್ಟಲಾಯಿತು. ”ಪ್ರತಿಭಟಿಸುವ ಕುಸ್ತಿಪಟುಗಳ ಬಗ್ಗೆ ನೀವು ಏನು ಹೇಳುತ್ತೀರಿ?” ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಮೀನಾಕ್ಷಿ ಲೇಖಿ, ”ಕಾನೂನು ಪ್ರಕ್ರಿಯೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

ಪ್ರತಿಭಟನೆ ಕುರಿತು ಮಂಗಳವಾರದ ಬೆಳವಣಿಗೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Such a worst behaviour of elected members for the parliament of india.if they don’t have guts to face our sport’s icons of India they are not worth to represent loksabha election.they should booted.save our international champions.this is nothing but a beti bagav from India

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...