Homeಮುಖಪುಟ'ಕೋಮುದ್ವೇಷ' ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

‘ಕೋಮುದ್ವೇಷ’ ಹರಡುವ ಕಾರ್ಟೂನ್ | ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು

ಒಟ್ಟು 8 ದೂರು ದಾಖಲಿಸಿದ ಕಾಂಗ್ರೆಸ್

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಆರೋಪ ಪ್ರತ್ಯಾರೋಪಗಳು ಮುಂದುವರೆದಿದೆ. ಬಿಜೆಪಿ ವಿರುದ್ದ ಸುಳ್ಳು, ಕೋಮುದ್ವೇಷ ಮತ್ತು ತಪ್ಪುದಾರಿಗೆಳೆಯು ಮಾಹಿತಿ ಹಂಚಿಕೆ ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ.

ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಂದ ಮೀಸಲಾತಿ ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ (ಮುಸ್ಲಿಮರಿಗೆ) ನೀಡಲಾಗುತ್ತಿದೆ ಎಂದು ಸೂಚಿಸುವ ‘ಕೋಮು ದ್ವೇಷದ’ ಕಾರ್ಟೂನ್ ಹಂಚಿರುವುದು ಸೇರಿದಂತೆ ಬಿಜೆಪಿ ವಿರುದ್ದ ಹಲವು ಆರೋಪಗಳನ್ನು ಮಾಡಿರುವ ಕಾಂಗ್ರೆಸ್, ಸೋಮವಾರ (ನ.11) ಚುನಾವಣಾ ಆಯೋಗಕ್ಕೆ 8 ದೂರುಗಳನ್ನು ನೀಡಿದೆ. ಎಲ್ಲಾ ದೂರುಗಳನ್ನು ಚುನಾವಣಾ ಆಯೋಗ ಸ್ವೀಕರಿಸಿ ಮಾನ್ಯ ಮಾಡಿದೆ ಎಂದು ವರದಿಯಾಗಿದೆ.

“ನಾವು ಚುನಾವಣಾ ಆಯೋಗದ ಮುಂದೆ ಕೆಲವು ಗಂಭೀರ ಕಳವಳಗಳನ್ನು ವ್ಯಕ್ತಪಡಿಸಿದ್ದೇವೆ. ಅವುಗಳ ಬಗ್ಗೆ ಚರ್ಚಿಸಿದ್ದೇವೆ. ಕಾಂಗ್ರೆಸ್ ನೀಡಿರುವ ಎಲ್ಲಾ ಎಂಟು ದೂರುಗಳನ್ನು ಚುನಾವಣಾ ಆಯೋಗವು ಮಾನ್ಯ ಮಾಡಿದೆ” ಎಂದು ದೂರು ನೀಡಿದ ಕಾಂಗ್ರೆಸ್‌ ನಿಯೋಗದ ನೇತೃತ್ವ ವಹಿಸಿದ್ದ ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಸೋಮವಾರ ಚುನಾವಣಾ ಆಯೋಗಕ್ಕೆ ಜ್ಞಾಪಕ ಪತ್ರವನ್ನು ಕಳುಹಿಸಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಬಿಜೆಪಿಯ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜಾಹೀರಾತು ಸ್ಪಷ್ಟವಾಗಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಅದರ ವಿರುದ್ದ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಜಾರ್ಖಂಡ್ ಬಿಜೆಪಿಯ ಫೇಸ್‌ಬುಕ್ ಹ್ಯಾಂಡಲ್‌ನಲ್ಲಿ “ಕಾಂಗ್ರೆಸ್ ನೇತೃತ್ವದ ಎಂವಿಎಯ ತುಷ್ಟೀಕರಣದ ಆಟ ಆನ್ ಆಗಿದೆ … ಬುದ್ಧಿವಂತಿಕೆಯಿಂದ ಮತ ಚಲಾಯಿಸಿ, ಮಹಾರಾಷ್ಟ್ರ” ಎಂಬ ಶೀರ್ಷಿಕೆಯಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಹಂಚಿಕೊಂಡಿದೆ ಎನ್ನಲಾದ ಕಾರ್ಟೂನ್

ಪೋಸ್ಟ್‌ನಲ್ಲಿ, “ಒಬ್ಬ ವ್ಯಕ್ತಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ರಿಕ್ಷಾದಿಂದ ಬಲವಂತವಾಗಿ ಹೊರ ಹಾಕುವುದನ್ನು ಮತ್ತು ನಿರ್ದಿಷ್ಟ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ) ಕ್ಕೆ ಸೇರಿದ ವ್ಯಕ್ತಿಗೆ ಸ್ಥಳಾವಕಾಶ ನೀಡುವುದನ್ನು ಕಾರ್ಟೂನ್ ಮೂಲಕ ಚಿತ್ರಿಸಲಾಗಿದೆ” ಎಂದು ಜೈರಾಮ್ ರಮೇಶ್ ತಮ್ಮ ಜ್ಞಾಪಕ ಪತ್ರದಲ್ಲಿ ವಿವರಿಸಿದ್ದಾರೆ.

“ಈ ಕಾರ್ಟೂನ್ ಕಾಂಗ್ರೆಸ್ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಅರೋಪವನ್ನು ಪ್ರಚಾರ ಮಾಡಲು ಬಿಜೆಪಿ ಮಾಡಿದ ನಿರ್ಲಜ್ಜ ಪ್ರಯತ್ನವಾಗಿದೆ” ಎಂದು ಜೈರಾಮ್ ರಮೇಶ್ ಕಿಡಿಕಾರಿದ್ದಾರೆ. ಬಿಜೆಪಿಯ ಎಲ್ಲಾ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳಿಂದ ತಕ್ಷಣವೇ ಆ ಪೋಸ್ಟ್ ತೆಗೆಸಬೇಕು ಮತ್ತು ಬಿಜೆಪಿ ನಾಯಕರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಪೋಸ್ಟ್ ಮಾಡಿದ್ದ ಕಾರ್ಟೂನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೋಲುವ ವ್ಯಕ್ತಿಯೊಬ್ಬರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಸದಸ್ಯರನ್ನು ರಿಕ್ಷಾದಿಂದ ಹೊರಗೆ ತಳ್ಳುವುದು ಮತ್ತು ನಿರ್ದಿಷ್ಟ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ) ಕ್ಕೆ ಸೇರಿದ ವ್ಯಕ್ತಿಗೆ ಸ್ಥಳಾವಕಾಶ ನೀಡುವುದನ್ನು ತೋರಿಸಲಾಗಿತ್ತು.

ಇದನ್ನೂ ಓದಿ : ಮಣಿಪುರ | ಜಿರಿಬಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿ : 10 ಕುಕಿ ಬಂಡುಕೋರರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...