Homeಮುಖಪುಟಛತ್ತೀಸ್‌ಗಢ, ರಾಜಸ್ಥಾನದಲ್ಲಿ 'ED' ದುರ್ಬಳಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

ಛತ್ತೀಸ್‌ಗಢ, ರಾಜಸ್ಥಾನದಲ್ಲಿ ‘ED’ ದುರ್ಬಳಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ತಮ್ಮ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ಪೂರ್ವಾಗ್ರಹ ಪೀಡಿತವಾಗಿ ಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಭಾರತೀಯ ಜನತಾ ಪಕ್ಷವು ಪ್ರತಿಪಕ್ಷಗಳ ವಿರುದ್ಧ ‘ಇಡಿ’ಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರಾ ಅವರ ಮೇಲೆ ಇಡಿ ದಾಳಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್‌ಗೆ ನೊಟೀಸ್‌ ನೀಡಿರುವುದು ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿರುದ್ಧ ಜಾರಿ ನಿರ್ದೇಶನಾಲಯ ಮಾಡಿರುವ ಆರೋಪಗಳ ಬಗ್ಗೆ ಕೂಡ ನಿಯೋಗ ಚುನಾವಣಾ ಆಯೋಗದ ಗಮನಕ್ಕೆ ತಂದಿದೆ.

ಅಭಿಷೇಕ್ ಮನು ಸಿಂಘ್ವಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಾದ ತಾಕಿರ್ ಅನ್ವರ್ ಮತ್ತು ಉದಿತ್ ರಾಜ್,  ಅಧಿಕಾರವನ್ನು ದುರುಪಯೋಗ ಮಾಡುತ್ತಿರುವ ಮತ್ತು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಇಡಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗದ ಭೇಟಿ ಬಳಿಕ ಮಾತನಾಡಿದ ಅಭಿಷೇಕ್ ಮನು ಸಿಂಘ್ವಿ, ಬಿಜೆಪಿಯ ಚುನಾವಣಾ ವಿಭಾಗದ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇಡಿ ಛತ್ತೀಸ್‌ಗಢದಲ್ಲಿ ಬಿಜೆಪಿಯ ಚುನಾವಣಾ ಏಜೆಂಟ್‌ನಂತೆ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾವುದೇ ರೀತಿಯ ಪರಿಶೀಲನೆ ನಡೆಸದೆ ನಮ್ಮ ಮುಖ್ಯಮಂತ್ರಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದೆ ಎಂದು ತಾರಿಕ್ ಅನ್ವರ್ ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ ಸುಮಾರು 508 ಕೋಟಿ ರೂ. ಪಾವತಿಸಿರುವ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ನ.4ರಂದು ಇಡಿ ಹೇಳಿತ್ತು. ಈ ಆರೋಪಗಳ ಬಗ್ಗೆ ಮೋದಿ ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಉಲ್ಲೇಖಿಸಿ ಬಘೇಲ್ ಅವರನ್ನು ಒಂದು ದಿನವೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಬಿಡಬಾರದು ಮತ್ತು ಮುಖ್ಯಮಂತ್ರಿಗಳ ಕಚೇರಿಯು ಭ್ರಷ್ಟಾಚಾರದ ಕೇಂದ್ರ ಎಂದು ಹೇಳಿದ್ದರು.

ಛತ್ತೀಸ್‌ಗಢದಲ್ಲಿ ನ.4 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಾ, ತಮ್ಮ ಸರ್ಕಾರವು ಸುಮಾರು 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಉಚಿತ ಆಹಾರ ಪಡಿತರವನ್ನು ಒದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢದ ದುರ್ಗ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಮೋದಿ ಮಾಡಿದ ಈ ಘೋಷಣೆ  ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆದರೆ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿಲ್ಲ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...