Homeಮುಖಪುಟಪಠ್ಯ ಪುಸ್ತಕದಿಂದ 'ಸಂವಿಧಾನದ ಪ್ರಸ್ತಾವನೆ' ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ...

ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

- Advertisement -
- Advertisement -

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಕೈಬಿಟ್ಟಿರುವ ಕುರಿತು ನೀಡಿರುವ ಹೇಳಿಕೆ ತಪ್ಪುದಾರಿಗೆಳೆಯುವಂತಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಶುಕ್ರವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಜೈರಾಮ್ ರಮೇಶ್ ಅವರು 3ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಹಳೆಯ ಆವೃತ್ತಿಗಳನ್ನು ಪ್ರಸ್ತುತಪಡಿಸಿದ್ದು, ಅದರ ಆರಂಭ ಮತ್ತು ಕೊನೆಯ ಪುಟಗಳಲ್ಲಿ ಸಂವಿಧಾನದ ಪ್ರಸ್ತಾವನೆ ಮುದ್ರಿಸಲಾಗಿತ್ತು. ಆದರೆ, ರಾಜ್ಯಸಭೆಯಲ್ಲಿ ಮಂಡಿಸಲಾದ 3ನೇ ತರಗತಿಯ ಪಠ್ಯಪುಸ್ತಕಗಳ ಹೊಸ ಆವೃತ್ತಿಗಳಲ್ಲಿ ಪ್ರಸ್ತಾವನೆ ಮುದ್ರಿಸಿಲ್ಲ ಎಂದು ಹೇಳಿದ್ದಾರೆ.

“ಧರ್ಮೇಂದ್ರ ಪ್ರಧಾನ್ ಅವರು ಮಾಡಿದ ಪ್ರತಿಪಾದನೆಯು ವಾಸ್ತವಿಕವಾಗಿ ತಪ್ಪಾಗಿದೆ ಮತ್ತು ತಪ್ಪುದಾರಿಗೆಳೆಯುವಂತಿದೆ ಎಂದಿರುವ ಜೈರಾಮ್ ರಮೇಶ್, “ಹಕ್ಕುಚ್ಯುತಿ ನೋಟಿಸ್‌ನಲ್ಲಿ ನನ್ನ ವಾದವನ್ನು ರುಜುವಾತು ಮಾಡಲು ” ‘ಲುಕಿಂಗ್ ಅರೌಂಡ್’ (ಪರಿಸರ ಅಧ್ಯಯನಗಳು) ಎಂಬ 3ನೇ ತರಗತಿಯ ನವೆಂಬರ್ 2022ರ ಆವೃತ್ತಿಯ ಪಠ್ಯ ಪುಸ್ತಕ, ನವೆಂಬರ್ 2022ರ ಆವೃತ್ತಿಯ ‘ರಿಮ್‌ಜಿಮ್’ ಎಂಬ ಹಿಂದಿ ಶೀರ್ಷಿಕೆಯ ಪುಸ್ತಕ, ಡಿಸೆಂಬರ್ 2022ರ ಆವೃತ್ತಿಯ 6ನೇ ತರಗತಿಯ ‘ಹನಿಸಕಲ್’ ಎಂಬ ಶೀರ್ಷಿಕೆಯ ಪಠ್ಯ ಪುಸ್ತಕ ಲಗತ್ತಿಸಿದ್ದೇನೆ. ಈ ಮೂರು ಪುಸ್ತಕಗಳಲ್ಲಿ ಸಂವಿಧಾನದ ಪ್ರಸ್ತಾವನೆ ಮುದ್ರಿಸಲಾಗಿದೆ. ಆದರೆ, ಜೂನ್ 2024ರ 3 ನೇ ತರಗತಿಯ ಪಠ್ಯಪುಸ್ತಕ ‘ನಮ್ಮ ಅದ್ಭುತ ಪ್ರಪಂಚ’ ಜೂನ್ 2024 ರ ಆವೃತ್ತಿಯ ‘ವೀಣಾ’ ಎಂಬ ಹಿಂದಿ ಪಠ್ಯಪುಸ್ತಕ ಇವುಗಳಲ್ಲಿ ಸಂವಿಧಾನ ಪ್ರಸ್ತಾವನೆ ಇಲ್ಲ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ತೆಗೆದು ಹಾಕಿರುವ ವಿಷಯವನ್ನು ಕಾಂಗ್ರೆಸ್ ನಾಯಕರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಸಚಿವ ಧರ್ಮೇಂದ್ರ ಪ್ರಧಾನ್ ಅದನ್ನು ತಿರಸ್ಕರಿಸಿದ್ದು, ಕಾಂಗ್ರೆಸ್ ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದೆ” ಎಂದು ಆರೋಪಿಸಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ತೆಗೆದು ಹಾಕಲಾಗಿದೆ ಎಂಬ ಸರ್ಕಾರದ ವಿರುದ್ಧದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಪಗಳನ್ನು ತಿರಸ್ಕರಿಸಿರುವ ಧರ್ಮೇಂದ್ರ ಪ್ರಧಾನ್, ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆ ಬಹಳ ಮುಖ್ಯವಾದ ಭಾಗವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...