Homeಮುಖಪುಟಪಠ್ಯ ಪುಸ್ತಕದಿಂದ 'ಸಂವಿಧಾನದ ಪ್ರಸ್ತಾವನೆ' ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ...

ಪಠ್ಯ ಪುಸ್ತಕದಿಂದ ‘ಸಂವಿಧಾನದ ಪ್ರಸ್ತಾವನೆ’ ಕೈಬಿಟ್ಟ ವಿಚಾರ: ಧರ್ಮೇಂದ್ರ ಪ್ರಧಾನ್ ವಿರುದ್ದ ಹಕ್ಕುಚ್ಯುತಿ ನೋಟಿಸ್ ನೀಡಿದ ಜೈರಾಮ್ ರಮೇಶ್

- Advertisement -
- Advertisement -

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಕೈಬಿಟ್ಟಿರುವ ಕುರಿತು ನೀಡಿರುವ ಹೇಳಿಕೆ ತಪ್ಪುದಾರಿಗೆಳೆಯುವಂತಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಶುಕ್ರವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.

ಜೈರಾಮ್ ರಮೇಶ್ ಅವರು 3ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಹಳೆಯ ಆವೃತ್ತಿಗಳನ್ನು ಪ್ರಸ್ತುತಪಡಿಸಿದ್ದು, ಅದರ ಆರಂಭ ಮತ್ತು ಕೊನೆಯ ಪುಟಗಳಲ್ಲಿ ಸಂವಿಧಾನದ ಪ್ರಸ್ತಾವನೆ ಮುದ್ರಿಸಲಾಗಿತ್ತು. ಆದರೆ, ರಾಜ್ಯಸಭೆಯಲ್ಲಿ ಮಂಡಿಸಲಾದ 3ನೇ ತರಗತಿಯ ಪಠ್ಯಪುಸ್ತಕಗಳ ಹೊಸ ಆವೃತ್ತಿಗಳಲ್ಲಿ ಪ್ರಸ್ತಾವನೆ ಮುದ್ರಿಸಿಲ್ಲ ಎಂದು ಹೇಳಿದ್ದಾರೆ.

“ಧರ್ಮೇಂದ್ರ ಪ್ರಧಾನ್ ಅವರು ಮಾಡಿದ ಪ್ರತಿಪಾದನೆಯು ವಾಸ್ತವಿಕವಾಗಿ ತಪ್ಪಾಗಿದೆ ಮತ್ತು ತಪ್ಪುದಾರಿಗೆಳೆಯುವಂತಿದೆ ಎಂದಿರುವ ಜೈರಾಮ್ ರಮೇಶ್, “ಹಕ್ಕುಚ್ಯುತಿ ನೋಟಿಸ್‌ನಲ್ಲಿ ನನ್ನ ವಾದವನ್ನು ರುಜುವಾತು ಮಾಡಲು ” ‘ಲುಕಿಂಗ್ ಅರೌಂಡ್’ (ಪರಿಸರ ಅಧ್ಯಯನಗಳು) ಎಂಬ 3ನೇ ತರಗತಿಯ ನವೆಂಬರ್ 2022ರ ಆವೃತ್ತಿಯ ಪಠ್ಯ ಪುಸ್ತಕ, ನವೆಂಬರ್ 2022ರ ಆವೃತ್ತಿಯ ‘ರಿಮ್‌ಜಿಮ್’ ಎಂಬ ಹಿಂದಿ ಶೀರ್ಷಿಕೆಯ ಪುಸ್ತಕ, ಡಿಸೆಂಬರ್ 2022ರ ಆವೃತ್ತಿಯ 6ನೇ ತರಗತಿಯ ‘ಹನಿಸಕಲ್’ ಎಂಬ ಶೀರ್ಷಿಕೆಯ ಪಠ್ಯ ಪುಸ್ತಕ ಲಗತ್ತಿಸಿದ್ದೇನೆ. ಈ ಮೂರು ಪುಸ್ತಕಗಳಲ್ಲಿ ಸಂವಿಧಾನದ ಪ್ರಸ್ತಾವನೆ ಮುದ್ರಿಸಲಾಗಿದೆ. ಆದರೆ, ಜೂನ್ 2024ರ 3 ನೇ ತರಗತಿಯ ಪಠ್ಯಪುಸ್ತಕ ‘ನಮ್ಮ ಅದ್ಭುತ ಪ್ರಪಂಚ’ ಜೂನ್ 2024 ರ ಆವೃತ್ತಿಯ ‘ವೀಣಾ’ ಎಂಬ ಹಿಂದಿ ಪಠ್ಯಪುಸ್ತಕ ಇವುಗಳಲ್ಲಿ ಸಂವಿಧಾನ ಪ್ರಸ್ತಾವನೆ ಇಲ್ಲ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ಎನ್‌ಸಿಇಆರ್‌ಟಿ ಪಠ್ಯಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ತೆಗೆದು ಹಾಕಿರುವ ವಿಷಯವನ್ನು ಕಾಂಗ್ರೆಸ್ ನಾಯಕರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಸಚಿವ ಧರ್ಮೇಂದ್ರ ಪ್ರಧಾನ್ ಅದನ್ನು ತಿರಸ್ಕರಿಸಿದ್ದು, ಕಾಂಗ್ರೆಸ್ ಸುಳ್ಳು ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದೆ” ಎಂದು ಆರೋಪಿಸಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ತೆಗೆದು ಹಾಕಲಾಗಿದೆ ಎಂಬ ಸರ್ಕಾರದ ವಿರುದ್ಧದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಆರೋಪಗಳನ್ನು ತಿರಸ್ಕರಿಸಿರುವ ಧರ್ಮೇಂದ್ರ ಪ್ರಧಾನ್, ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆ ಬಹಳ ಮುಖ್ಯವಾದ ಭಾಗವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಎಸ್‌ಸಿ, ಎಸ್‌ಟಿಯಲ್ಲಿ ‘ಕೆನೆಪದರ’ಕ್ಕೆ ಅವಕಾಶವಿಲ್ಲ, ಸಂವಿಧಾನಕ್ಕೆ ಬದ್ದ : ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...