Homeಮುಖಪುಟ'ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್' : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್...

‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ಉದ್ಘಾಟನೆಗೊಂಡು ವರ್ಷ ತುಂಬುವುದರೊಳಗೆ ಹೊಸ ಸಂಸತ್‌ ಭವನ ಸೋರಲು ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.

ಹೊಸ ಸಂಸತ್ ಭವನಕ್ಕೆ ರಾಷ್ಟ್ರಪತಿಗಳು ಪ್ರವೇಶಿಸುವ ಪಥ ಸೇರಿದಂತೆ ವಿವಿದೆಡೆ ಮಳೆ ನೀರು ಸೋರಿಕೆಯಾಗುತ್ತಿರುವುದು ಮತ್ತು ಅದಕ್ಕೆ ಬಕೆಟ್ ಇಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ಮುಗಿಬಿದ್ದಿವೆ. ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದು, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಮಾಣಿಕ್ಕಂ ಟ್ಯಾಗೋರ್, “ಹೊರಗೆ ಪೇಪರ್‌ ಲೀಕ್‌, ಸಂಸತ್‌ನ ಒಳಗೆ ವಾಟರ್‌ ಲೀಕ್‌. ಸಂಸತ್‌ ಭವನದಲ್ಲಿ ಇತ್ತೀಚೆಗೆ ಆಗುತ್ತಿರವ ಸೋರಿಕೆ, ಹೊಸ ಕಟ್ಟಡ ಇನ್ನೂ ಹೊಸ ವಾತಾವರಣಕ್ಕೆ ಹೊಂದಿಕೊಂಡಿಲ್ಲ ಎನ್ನುವುದನ್ನು ತೋರಿಸುತ್ತದೆ. ಸಂಸತ್‌ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ” ಎಂದು ಬರೆದಿದುಕೊಂಡಿದ್ದಾರೆ.

“ಈ ಸಮಸ್ಯೆಯ ಕುರಿತು ಪರಿಶೀಲಿಸಲು ಕಟ್ಟಡದ ಆಳವಾದ ಪರೀಕ್ಷೆಗಾಗಿ ಎಲ್ಲ ಪಕ್ಷಗಳ ಸಂಸದರನ್ನೊಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು ಎಂದು ನಾನು ಪ್ರಸ್ತಾಪಿಸುತ್ತಿದ್ದೇನೆ. ಈ ಸಮಿತಿಯು ಸೋರಿಕೆಯ ಕಾರಣಗಳತ್ತ ಗಮನ ಹರಿಸಿ, ವಿನ್ಯಾಸ ಮತ್ತು ಬಳಕೆಯಾಗಿರುವ ಸಾಮಗ್ರಿಗಳ ಮೌಲ್ಯಮಾಪನ ಮಾಡಲಿದೆ ಹಾಗೂ ಅಗತ್ಯ ದುರಸ್ತಿ ಕ್ರಮಗಳನ್ನು ಶಿಫಾರಸು ಮಾಡಲಿದೆ. ಇದರೊಂದಿಗೆ, ಈ ಸಮಿತಿಯು ತಾನು ಪತ್ತೆ ಹಚ್ಚಿದ ಸಂಗತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಮೂಲಕ ನಿರ್ವಹಣಾ ಶಿಷ್ಟಾಚಾರವನ್ನು ಸ್ಥಾಪಿಸಿ, ಪಾರದರ್ಶಕತೆಯನ್ನು ಖಾತರಿ ಪಡಿಸಲಿದೆ” ಎಂದು ತಮಿಳುನಾಡಿನ ವಿರುಧನಗರ್ ಸಂಸದ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವಿಪ್ ಮಾಣಿಕ್ಕಂ ಟ್ಯಾಗೋರ್ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮೇ 28, 2023 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಿದರು. ಅಂದಾಜು 970 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸೆಪ್ಟೆಂಬರ್ 19, 2023 ರಂದು ಮೊದಲ ವಿಶೇಷ ಅಧಿವೇಶನ ಕರೆಯಲಾಗಿತ್ತು. ಬ್ರಿಟಿಷರ ಕಾಲದ ಹಳೆಯ ಸಂಸತ್ ಕಟ್ಟಡವನ್ನು ಪಾರಂಪರಿಕ ಆಸ್ತಿಯಾಗಿ ಸಂರಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...