Homeಮುಖಪುಟಕಾಂಗ್ರೆಸ್ ಸಂಸದ ಸಿಂಘ್ವಿಗೆ ನೀಡಿದ್ದ ಸದನದ ಸೀಟ್‌ನಲ್ಲಿ ನೋಟುಗಳ ಕಂತೆ ಪತ್ತೆ - ತನಿಖೆಗೆ ಆದೇಶ

ಕಾಂಗ್ರೆಸ್ ಸಂಸದ ಸಿಂಘ್ವಿಗೆ ನೀಡಿದ್ದ ಸದನದ ಸೀಟ್‌ನಲ್ಲಿ ನೋಟುಗಳ ಕಂತೆ ಪತ್ತೆ – ತನಿಖೆಗೆ ಆದೇಶ

- Advertisement -
- Advertisement -

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನೀಡಲಾಗಿದ್ದ ಆಸನದಲ್ಲಿ ಭದ್ರತಾ ಸಿಬ್ಬಂದಿಯು ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಶುಕ್ರವಾರ ಹೇಳಿದ್ದಾರೆ. ಸದನದ ಗುರುವಾರ ಅಧಿವೇಶನದ ನಂತರ ಸಿಂಘ್ವಿ ಅವರಿಗೆ ಹಂಚಿಕೆಯಾಗಿರುವ ಸೀಟ್ ನಂ.222 ರಿಂದ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಸಿಂಘ್ವಿಗೆ

ಸ್ಪೀಕರ್ ಅವರ ಈ ಹೇಳಿಕೆ ನಂತರ ಪ್ರತಿಪಕ್ಷಗಳು ಕೋಲಾಹಲ ಮಾಡಿದ್ದು, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ತನಿಖೆ ಪೂರ್ಣಗೊಳ್ಳದೆ ಸದಸ್ಯರನ್ನು ಹೆಸರಿಸಬಾರದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಸಿಂಘ್ವಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುರುವಾರ ಸದನವನ್ನು ಮುಂದೂಡಿದ ನಂತರ, ತೆಲಂಗಾಣ ರಾಜ್ಯದಿಂದ ಚುನಾಯಿತರಾಗಿರುವ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಪ್ರಸ್ತುತ ನೀಡಲಾದ ಸೀಟ್ ಸಂಖ್ಯೆ 222 ರಿಂದ ಭದ್ರತಾ ಅಧಿಕಾರಿಗಳು ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಎಂದಿನಿಂತೆ ತನಿಖೆಗೆ ಆದೇಶಿಸಲಾಗಿದೆ” ಎಂದು ಧಂಖರ್ ಹೇಳಿದ್ದಾರೆ.

ಹಣದ ಕಟ್ಟು 500 ರೂ.ಗಳ ನೋಟುಗಳಾಗಿದ್ದು, 100 ನೋಟುಗಳನ್ನು ಹೊಂದಿರುವಂತೆ ತೋರುತ್ತಿದೆ ಎಂದು ಧಂಖರ್ ಹೇಳಿದ್ದಾರೆ. ಕರೆನ್ಸಿ ನೋಟುಗಳು ಅಸಲಿಯೊ ಅಥವಾ ನಕಲಿಯೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ. “ಇದು ನನ್ನ ಕರ್ತವ್ಯವಾಗಿದ್ದು, ಅದನ್ನು ಸದನಕ್ಕೆ ತಿಳಿಸಲು ನಾನು ಬದ್ಧನಾಗಿದ್ದೇನೆ. ಇದು ಸಾಮಾನ್ಯ ವಿಧ್ವಂಸಕ-ವಿರೋಧಿ ಪರಿಶೀಲನೆಯಾಗಿದೆ,” ಅವರು ಹೇಳಿದ್ದಾರೆ.

ಈ ಕರೆನ್ಸಿ ನೋಟುಗಳು ತಮ್ಮದು ಎಂದು ಯಾರಾದರೂ ಕ್ಲೈಮ್ ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೇನೆ, ಆದರೆ ಯಾರೂ ಅದನ್ನು ಇಲ್ಲಿಯವರೆಗೆ ಕ್ಲೈಮ್ ಮಾಡಿಲ್ಲ ಎಂದು ಧಂಖರ್ ಹೇಳಿದ್ದಾರೆ. “ಜನರು ಅದನ್ನು ಮರೆತುಬಿಡುವ ಆರ್ಥಿಕತೆಯ ಸ್ಥಿತಿಯನ್ನು ಇದು ಪ್ರತಿಬಿಂಬಿಸುತ್ತದೆಯೇ” ಎಂದು ಅವರು ಹೇಳಿದರು. ಈ ಘಟನೆ ಬಗ್ಗೆ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಕಡೆಯಿಂದ ವಾಗ್ವಾದಕ್ಕೆ ಸದನ ಸಾಕ್ಷಿಯಾಯಿತು.

“ಹಣ ಎಲ್ಲಿ ಸಿಕ್ಕಿದೆ ಎಂದು ಅವರ ಹೆಸರು ಹೇಳುವುದಕ್ಕೆ ಆಕ್ಷೇಪಣೆ ಯಾಕೆ? ಸ್ಪೀಕರ್‌ ಆಸನ ಸಂಖ್ಯೆ ಮತ್ತು ಅದರಲ್ಲಿ ಕೂತಿದ್ದ ಸದಸ್ಯರನ್ನು ತೋರಿಸಿದ್ದಾರೆ. ಅದರಲ್ಲಿ ಸಮಸ್ಯೆ ಏನು” ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಸದನದಲ್ಲಿ ನೋಟುಗಳ ಕಂತೆಗಳನ್ನು ಒಯ್ಯುವುದು ಸೂಕ್ತವಲ್ಲ ಎಂದ ಅವರು, ಗಂಭೀರ ತನಿಖೆಯಾಗಬೇಕು ಎಂದು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...