Homeಮುಖಪುಟಕಾಂಗ್ರೆಸ್ ಸಂಸದ ಸಿಂಘ್ವಿಗೆ ನೀಡಿದ್ದ ಸದನದ ಸೀಟ್‌ನಲ್ಲಿ ನೋಟುಗಳ ಕಂತೆ ಪತ್ತೆ - ತನಿಖೆಗೆ ಆದೇಶ

ಕಾಂಗ್ರೆಸ್ ಸಂಸದ ಸಿಂಘ್ವಿಗೆ ನೀಡಿದ್ದ ಸದನದ ಸೀಟ್‌ನಲ್ಲಿ ನೋಟುಗಳ ಕಂತೆ ಪತ್ತೆ – ತನಿಖೆಗೆ ಆದೇಶ

- Advertisement -
- Advertisement -

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನೀಡಲಾಗಿದ್ದ ಆಸನದಲ್ಲಿ ಭದ್ರತಾ ಸಿಬ್ಬಂದಿಯು ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಶುಕ್ರವಾರ ಹೇಳಿದ್ದಾರೆ. ಸದನದ ಗುರುವಾರ ಅಧಿವೇಶನದ ನಂತರ ಸಿಂಘ್ವಿ ಅವರಿಗೆ ಹಂಚಿಕೆಯಾಗಿರುವ ಸೀಟ್ ನಂ.222 ರಿಂದ ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಸಿಂಘ್ವಿಗೆ

ಸ್ಪೀಕರ್ ಅವರ ಈ ಹೇಳಿಕೆ ನಂತರ ಪ್ರತಿಪಕ್ಷಗಳು ಕೋಲಾಹಲ ಮಾಡಿದ್ದು, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ ತನಿಖೆ ಪೂರ್ಣಗೊಳ್ಳದೆ ಸದಸ್ಯರನ್ನು ಹೆಸರಿಸಬಾರದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಸಿಂಘ್ವಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುರುವಾರ ಸದನವನ್ನು ಮುಂದೂಡಿದ ನಂತರ, ತೆಲಂಗಾಣ ರಾಜ್ಯದಿಂದ ಚುನಾಯಿತರಾಗಿರುವ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಪ್ರಸ್ತುತ ನೀಡಲಾದ ಸೀಟ್ ಸಂಖ್ಯೆ 222 ರಿಂದ ಭದ್ರತಾ ಅಧಿಕಾರಿಗಳು ನೋಟುಗಳ ಕಂತೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಎಂದಿನಿಂತೆ ತನಿಖೆಗೆ ಆದೇಶಿಸಲಾಗಿದೆ” ಎಂದು ಧಂಖರ್ ಹೇಳಿದ್ದಾರೆ.

ಹಣದ ಕಟ್ಟು 500 ರೂ.ಗಳ ನೋಟುಗಳಾಗಿದ್ದು, 100 ನೋಟುಗಳನ್ನು ಹೊಂದಿರುವಂತೆ ತೋರುತ್ತಿದೆ ಎಂದು ಧಂಖರ್ ಹೇಳಿದ್ದಾರೆ. ಕರೆನ್ಸಿ ನೋಟುಗಳು ಅಸಲಿಯೊ ಅಥವಾ ನಕಲಿಯೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದ್ದಾರೆ. “ಇದು ನನ್ನ ಕರ್ತವ್ಯವಾಗಿದ್ದು, ಅದನ್ನು ಸದನಕ್ಕೆ ತಿಳಿಸಲು ನಾನು ಬದ್ಧನಾಗಿದ್ದೇನೆ. ಇದು ಸಾಮಾನ್ಯ ವಿಧ್ವಂಸಕ-ವಿರೋಧಿ ಪರಿಶೀಲನೆಯಾಗಿದೆ,” ಅವರು ಹೇಳಿದ್ದಾರೆ.

ಈ ಕರೆನ್ಸಿ ನೋಟುಗಳು ತಮ್ಮದು ಎಂದು ಯಾರಾದರೂ ಕ್ಲೈಮ್ ಮಾಡುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೇನೆ, ಆದರೆ ಯಾರೂ ಅದನ್ನು ಇಲ್ಲಿಯವರೆಗೆ ಕ್ಲೈಮ್ ಮಾಡಿಲ್ಲ ಎಂದು ಧಂಖರ್ ಹೇಳಿದ್ದಾರೆ. “ಜನರು ಅದನ್ನು ಮರೆತುಬಿಡುವ ಆರ್ಥಿಕತೆಯ ಸ್ಥಿತಿಯನ್ನು ಇದು ಪ್ರತಿಬಿಂಬಿಸುತ್ತದೆಯೇ” ಎಂದು ಅವರು ಹೇಳಿದರು. ಈ ಘಟನೆ ಬಗ್ಗೆ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ಕಡೆಯಿಂದ ವಾಗ್ವಾದಕ್ಕೆ ಸದನ ಸಾಕ್ಷಿಯಾಯಿತು.

“ಹಣ ಎಲ್ಲಿ ಸಿಕ್ಕಿದೆ ಎಂದು ಅವರ ಹೆಸರು ಹೇಳುವುದಕ್ಕೆ ಆಕ್ಷೇಪಣೆ ಯಾಕೆ? ಸ್ಪೀಕರ್‌ ಆಸನ ಸಂಖ್ಯೆ ಮತ್ತು ಅದರಲ್ಲಿ ಕೂತಿದ್ದ ಸದಸ್ಯರನ್ನು ತೋರಿಸಿದ್ದಾರೆ. ಅದರಲ್ಲಿ ಸಮಸ್ಯೆ ಏನು” ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಸದನದಲ್ಲಿ ನೋಟುಗಳ ಕಂತೆಗಳನ್ನು ಒಯ್ಯುವುದು ಸೂಕ್ತವಲ್ಲ ಎಂದ ಅವರು, ಗಂಭೀರ ತನಿಖೆಯಾಗಬೇಕು ಎಂದು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...