Homeಮುಖಪುಟಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ" ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು.

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದೊಳಗೆ ಆಮೂಲಾಗ್ರ ಬದಲಾವಣೆಯಾಗಬೇಕೆಂದು 23 ಜನ ಮುಖಂಡರು ಬರೆದಿರುವ ಪತ್ರದ ಬಗ್ಗೆ ಯಾರಿಗೂ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯುಸಿ) ಪತ್ರ ಬರೆದವರ ಮೇಲೆ ವಾಗ್ದಾಳಿ ಮಾಡಿದಾಗ, ಯಾವುದೇ ನಾಯಕರು ಒಂದು ಹೆಜ್ಜೆ ಮುಂದೆ ಬಂದು ಮಾತನಾಡಲಿಲ್ಲ ಎಂದು ಭಿನ್ನಮತೀಯ ಪತ್ರ ಬರೆದವರಲ್ಲಿ ಪ್ರಮುಖರಾದ ಕಪಿಲ್ ಸಿಬಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ” ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು ಎಂದು ಹೇಳಿದರು.

“ಬಿಜೆಪಿ ಸಂವಿಧಾನವನ್ನು ಛಿದ್ರಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಪಕ್ಷವು ತನ್ನ ಸಂವಿಧಾನಕ್ಕೇ ಬದ್ದವಾಗಿಲ್ಲ. ನಮಗೆ ಬೇರೇನೂ ಬೇಡ, ನಮ್ಮ ಪಕ್ಷದ ಸಂವಿಧಾನವನ್ನು ಪಾಲಿಸಿದರೆ ಅಷ್ಟೇ ಸಾಕು” ಎಂದು ಸ್ಪಷ್ಟವಾದ ವಿರೋಧವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

“ಪ್ರಸ್ತುತ ದೇಶದ ರಾಜಕಾರಣವು ನಿಷ್ಠೆಯ(loyalty) ಮೇಲೆ ಆಧರಿಸಿದೆ. ಹಾಗಾಗಿ ಈಗ ‘loyalty plus’ ಬೇಕಾಗಿದೆ. ಪ್ಲಸ್ ಎಂದರೆ, ಅರ್ಹತೆ, ಒಳಗೊಳ್ಳುವಿಕೆ, ಸ್ಪಷ್ಟ ಉದ್ದೇಶಕ್ಕೆ ಬದ್ಧತೆ ಮತ್ತು ಒಬ್ಬರ ಮಾತನ್ನು ಕೇಳಿಸಿಕೊಳ್ಳುವುದೇ ಆಗಿದೆ. ರಾಜಕೀಯ ಎಂದರೆ ಹೀಗಿರಬೇಕು” ಎಂದು ಕಪಿಲ್ ಸಿಬಲ್ ವಿವರಿಸಿದರು.

ಪತ್ರಕ್ಕೆ ಸಹಿ ಮಾಡಿದವರನ್ನು ಕೆಲವರು ‘ದೇಶದ್ರೋಹಿಗಳು’ ಎಂದು ಕರೆಯಲಾಗುತ್ತಿದೆ. ಆದರೆ ಪತ್ರದ ಭಾಷೆಯ ಉನ್ನತವಾಗಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸುವ ಬಯಕೆಯನ್ನು ದೇಶದ ಹಲವು ಜನರು ಶ್ಲಾಘಿಸಿದ್ದಾರೆ ಎಂದು ಕಪಿಲ್ ಸಿಬಲ್ ಹೇಳಿದರು.

ಆಗಸ್ಟ್ 24 ರಂದು, ಸಂಸದರು ಮತ್ತು ಮಾಜಿ ಮಂತ್ರಿಗಳು ಸೇರಿದಂತೆ 23 ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ‘ವ್ಯಾಪಕ ಸುಧಾರಣೆ, ನ್ಯಾಯಯುತ ಆಂತರಿಕ ಚುನಾವಣೆ, ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಕಾಲಿಕ ನಾಯಕತ್ವ’ದ ಬಗ್ಗೆ ಬೇಡಿಕೆ ಇಟ್ಟಿದ್ದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಪತ್ರ ಬರೆದಿರುವವರ ಮೇಲೆ ವಾಗ್ದಾಳಿ ಮಾಡಲಾಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು. ಪತ್ರ ಬರೆದಿರುವವರನ್ನು ಖಂಡಿಸಿದ್ದನ್ನು ಬಿಟ್ಟರೆ, ಪತ್ರದಲ್ಲಿನ ವಿಷಯಗಳ ಚರ್ಚೆ ಮುನ್ನೆಲೆಗೆ ಬರಲೇ ಇಲ್ಲ. ಭಿನ್ನಮತೀಯ ಪತ್ರಕ್ಕೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವವರೆಗೂ ಸೋನಿಯಾ ಗಾಂಧಿ ಮಧ್ಯಂತರ ಮುಖ್ಯಸ್ಥರಾಗಿ ಉಳಿಯುತ್ತಾರೆ ಎಂದು ಘೋಷಿಸುವುದರೊಂದಿಗೆ ಅಂದಿನ ಸಭೆ ಕೊನೆಗೊಂಡಿತ್ತು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...