Homeಮುಖಪುಟಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ" ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು.

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದೊಳಗೆ ಆಮೂಲಾಗ್ರ ಬದಲಾವಣೆಯಾಗಬೇಕೆಂದು 23 ಜನ ಮುಖಂಡರು ಬರೆದಿರುವ ಪತ್ರದ ಬಗ್ಗೆ ಯಾರಿಗೂ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯುಸಿ) ಪತ್ರ ಬರೆದವರ ಮೇಲೆ ವಾಗ್ದಾಳಿ ಮಾಡಿದಾಗ, ಯಾವುದೇ ನಾಯಕರು ಒಂದು ಹೆಜ್ಜೆ ಮುಂದೆ ಬಂದು ಮಾತನಾಡಲಿಲ್ಲ ಎಂದು ಭಿನ್ನಮತೀಯ ಪತ್ರ ಬರೆದವರಲ್ಲಿ ಪ್ರಮುಖರಾದ ಕಪಿಲ್ ಸಿಬಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ” ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು ಎಂದು ಹೇಳಿದರು.

“ಬಿಜೆಪಿ ಸಂವಿಧಾನವನ್ನು ಛಿದ್ರಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಪಕ್ಷವು ತನ್ನ ಸಂವಿಧಾನಕ್ಕೇ ಬದ್ದವಾಗಿಲ್ಲ. ನಮಗೆ ಬೇರೇನೂ ಬೇಡ, ನಮ್ಮ ಪಕ್ಷದ ಸಂವಿಧಾನವನ್ನು ಪಾಲಿಸಿದರೆ ಅಷ್ಟೇ ಸಾಕು” ಎಂದು ಸ್ಪಷ್ಟವಾದ ವಿರೋಧವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

“ಪ್ರಸ್ತುತ ದೇಶದ ರಾಜಕಾರಣವು ನಿಷ್ಠೆಯ(loyalty) ಮೇಲೆ ಆಧರಿಸಿದೆ. ಹಾಗಾಗಿ ಈಗ ‘loyalty plus’ ಬೇಕಾಗಿದೆ. ಪ್ಲಸ್ ಎಂದರೆ, ಅರ್ಹತೆ, ಒಳಗೊಳ್ಳುವಿಕೆ, ಸ್ಪಷ್ಟ ಉದ್ದೇಶಕ್ಕೆ ಬದ್ಧತೆ ಮತ್ತು ಒಬ್ಬರ ಮಾತನ್ನು ಕೇಳಿಸಿಕೊಳ್ಳುವುದೇ ಆಗಿದೆ. ರಾಜಕೀಯ ಎಂದರೆ ಹೀಗಿರಬೇಕು” ಎಂದು ಕಪಿಲ್ ಸಿಬಲ್ ವಿವರಿಸಿದರು.

ಪತ್ರಕ್ಕೆ ಸಹಿ ಮಾಡಿದವರನ್ನು ಕೆಲವರು ‘ದೇಶದ್ರೋಹಿಗಳು’ ಎಂದು ಕರೆಯಲಾಗುತ್ತಿದೆ. ಆದರೆ ಪತ್ರದ ಭಾಷೆಯ ಉನ್ನತವಾಗಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸುವ ಬಯಕೆಯನ್ನು ದೇಶದ ಹಲವು ಜನರು ಶ್ಲಾಘಿಸಿದ್ದಾರೆ ಎಂದು ಕಪಿಲ್ ಸಿಬಲ್ ಹೇಳಿದರು.

ಆಗಸ್ಟ್ 24 ರಂದು, ಸಂಸದರು ಮತ್ತು ಮಾಜಿ ಮಂತ್ರಿಗಳು ಸೇರಿದಂತೆ 23 ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ‘ವ್ಯಾಪಕ ಸುಧಾರಣೆ, ನ್ಯಾಯಯುತ ಆಂತರಿಕ ಚುನಾವಣೆ, ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಕಾಲಿಕ ನಾಯಕತ್ವ’ದ ಬಗ್ಗೆ ಬೇಡಿಕೆ ಇಟ್ಟಿದ್ದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಪತ್ರ ಬರೆದಿರುವವರ ಮೇಲೆ ವಾಗ್ದಾಳಿ ಮಾಡಲಾಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು. ಪತ್ರ ಬರೆದಿರುವವರನ್ನು ಖಂಡಿಸಿದ್ದನ್ನು ಬಿಟ್ಟರೆ, ಪತ್ರದಲ್ಲಿನ ವಿಷಯಗಳ ಚರ್ಚೆ ಮುನ್ನೆಲೆಗೆ ಬರಲೇ ಇಲ್ಲ. ಭಿನ್ನಮತೀಯ ಪತ್ರಕ್ಕೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವವರೆಗೂ ಸೋನಿಯಾ ಗಾಂಧಿ ಮಧ್ಯಂತರ ಮುಖ್ಯಸ್ಥರಾಗಿ ಉಳಿಯುತ್ತಾರೆ ಎಂದು ಘೋಷಿಸುವುದರೊಂದಿಗೆ ಅಂದಿನ ಸಭೆ ಕೊನೆಗೊಂಡಿತ್ತು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...